
ಬಿಸಿಲಿಗೆ ಬೆಂದಿದ್ದ ಬೆಂದಕಾಳೂರಲ್ಲಿಂದು ಕಂಡು ಕೇಳರಿಯದ ಮಳೆ ಅಬ್ಬರಿಸಿದೆ. ಸಂಜೆ ಅಬ್ಬರಿಸಿದ ಮಳೆಗೆ ಬೆಂಗಳೂರಿನಲ್ಲಿ ನಾನಾ ಅವಾಂತರಗಳು ಸಂಭವಿಸಿವೆ. ಕಾಂಪೌಂಡ್ ಕುಸಿದು 7 ಜನರು ಸಾವನ್ನಪ್ಪಿರುವುದು ಒಂದು ಕಡೆಯಾದರೆ, ನಗರದಲ್ಲಿ 50ಕ್ಕೂ ಹೆಚ್ಚು ಬೃಹತ್ ಮರಗಳೇ ಧರೆಗುರುಳಿವೆ.

ವಿಜಯನಗರ, R.T.ನಗರ, ಶೇಷಾದ್ರಿಪುರಂ, ಜಯನಗರ, ಚಾಮರಾಜಪೇಟೆ, ಜೆಪಿ ನಗರ, ಕಬ್ಬನ್ಪಾರ್ಕ್, ಹೈಗ್ರೌಂಡ್ಸ್, ಉಪ್ಪಾರಪೇಟೆ, ಹಲಸೂರುಗೇಟ್, ವಿಲ್ಸನ್ಗಾರ್ಡನ್, ಮೈಕೋಲೇಔಟ್, ಸದಾಶಿವನಗರದಲ್ಲಿ ಬೃಹತ್ ಮರಗಳು ಧರೆಗುರುಳಿವೆ.

ಗುಡುಗು, ಸಿಡಿಲು ಆಲಿಕಲ್ಲು ಮಳೆಗೆ ಬಸವನಗುಡಿಯಲ್ಲಿ ಮರಗಳೇ ಧರೆಗುರುಳಿವೆ. ಇದ್ರಿಂದ ಕಾರು, ಬಸ್, ಲಾರಿ ಹಾಗೂ ಬೈಕ್ಗಳು ಜಖಂಗೊಂಡಿವೆ. ಲಾರಿ ಹೋಗ್ತಿದ್ದಾಗ ಮರ ಬಿದಿದ್ದು, ಬಸ್ ಹಾಗೂ ಬೈಕ್ಗಳಿಗೂ ಹಾನಿಯಾಗಿವೆ.

ಮಳೆ ಅಬ್ಬರಿಂದಾಗಿ ಮರಗಳು ಬಿದ್ದಿದ್ದು, ಹಲವು ಏರಿಯಾಗಳಲ್ಲಿ ವಿದ್ಯುತ್ ಕೇಬಲ್ ಕಟ್ ಆಗಿವೆ. ಹೀಗಾಗಿ ನಿವಾಸಿಗಳು ಕತ್ತಲಲ್ಲೇ ಕುಳಿತಿದ್ದಾರೆ. ಹಲವೆಡೆ ಕರೆಂಟ್ ಇಲ್ಲದೆ ಜನ ಪರದಾಡಿದ್ದಾರೆ.

ಮಳೆಯಿಂದಾಗಿ ಸಿಟಿ ಸಿವಿಲ್ ಕೋರ್ಟ್ ಕ್ಯಾಂಟೀನ್ ಜಲಾವೃತಗೊಂಡಿತ್ತು. ಕ್ಯಾಂಟೀನ್ನಲ್ಲೇ ಲಾಕ್ ಆಗಿ ವಕೀಲರು ಪರದಾಡಿದರು.

ತಗ್ಗು ಪ್ರದೇಶಗಳಿಗೆ ನುಗ್ಗಿದ ಮಳೆ ನೀರು ನುಗ್ಗಿದ್ದು, ದ್ವಿಚಕ್ರ ವಾಹನ, ಆಟೋಗಳು ಜಲಾವೃತಗೊಂಡಿವೆ. ಸವಾರರು ಪರದಾಡಿದರು.

ಇತ್ತ ಎಂ.ಜಿ.ರಸ್ತೆಯಲ್ಲಿ ಗ್ರಂಥಾಲಯಕ್ಕೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಗ್ರಂಥಾಲಯದಲ್ಲಿ 5 ಸಾವಿರ ಪುಸ್ತಕಗಳು ನೀರುಪಾಲಾಗಿವೆ.

ಇನ್ನು ಭಾರೀ ಮಳೆಯಿಂದಾಗಿ ರೆಸಿಡೆನ್ಸಿ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಗಂಟೆಗೂ ಹೆಚ್ಚು ಕಾಲ ಸವಾರರು ಪರದಾಡಿದರು.