AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗುಂಡಿ ಗಂಡಾಂತರದಿಂದ ವಾಹನ ಸವಾರರಿಗೆ ನರಕ, ಬಿಬಿಎಂಪಿ ವಿರುದ್ಧ ಆಕ್ರೋಶ

ಬೆಂಗಳೂರು, ಆಗಸ್ಟ್ 6: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ನದಿಯಂತಾಗಿದ್ದವು. ಅಂಡರ್​​ಪಾಸ್​ಗಳಲ್ಲಿ ಮಂಡಿಯುದ್ದ ನೀರು ನಿಂತಿತ್ತು. ಕಿಲೋಮೀಟರ್​​ವರೆಗೂ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಮರಗಳು ರಸ್ತೆಗಳ ಮೇಲೆ ಉರುಳಿದ್ದವು. ಮಳೆಯಿಂದ ಇಷ್ಟೆಲ್ಲಾ ಅವಾಂತರ ಆಗಿರುವ ಮಧ್ಯೆ ಇದೀಗ ಮತ್ತೊಂದು ಕಾಟ ಶುರುವಾಗಿದೆ. ಯಮ ಗುಂಡಿಗಳು ಬಾಯ್ದೆರೆದು ನಿಂತಿವೆ.

ಶಾಂತಮೂರ್ತಿ
| Edited By: |

Updated on: Aug 06, 2024 | 2:07 PM

Share
ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್, ಗುಂಡಿಗಳದ್ದೇ ಗಂಡಾಂತರ. ಇದು ಸಿಲಿಕಾನ್​ ಸಿಟಿ ಬೆಂಗಳೂರಿನ ಸದ್ಯದ ಪರಿಸ್ಥಿತಿಯಾಗಿದೆ. ಪ್ರತಿ ದಿನವೂ ಆತಂಕದಲ್ಲೇ ಸವಾರರು ಸಾಗಬೇಕಾದ ಪರಿಸ್ಥಿತಿ ಬಂದಿದೆ. ಇದು ವಾಹನ ಸವಾರರಿಗೆ ನರಕಯಾತನೆ ತಂದಿಟ್ಟಿದೆ.

ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್, ಗುಂಡಿಗಳದ್ದೇ ಗಂಡಾಂತರ. ಇದು ಸಿಲಿಕಾನ್​ ಸಿಟಿ ಬೆಂಗಳೂರಿನ ಸದ್ಯದ ಪರಿಸ್ಥಿತಿಯಾಗಿದೆ. ಪ್ರತಿ ದಿನವೂ ಆತಂಕದಲ್ಲೇ ಸವಾರರು ಸಾಗಬೇಕಾದ ಪರಿಸ್ಥಿತಿ ಬಂದಿದೆ. ಇದು ವಾಹನ ಸವಾರರಿಗೆ ನರಕಯಾತನೆ ತಂದಿಟ್ಟಿದೆ.

1 / 6
ಬೆಂಗಳೂರಿನ ನಾಗವಾರ-ಹೆಬ್ಬಾಳ ಸಂಪರ್ಕಿಸುವ ಹಿರಣ್ಯಪಾಳ್ಯ ಮುಖ್ತರಸ್ತೆಯಲ್ಲಿ ಗುಂಡಿಗಳು ವಿಪರೀತವಾಗಿವೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲೇ ದೊಡ್ಡ ಗುಂಡಿ ಬಿದ್ದು ಮಳೆ ನೀರು ತುಂಬಿದೆ. ಇದೆಲ್ಲಾ ಬಿಟ್ಟಿ ಭಾಗ್ಯದ ಪರಿಣಾಮ ಅನಿಸುತ್ತಿದೆ. ಪರಿಸ್ಥಿತಿ ತುಂಬಾ ಕೆಟ್ಟು ಹೋಗಿದೆ ಆಗಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ನಾಗವಾರ-ಹೆಬ್ಬಾಳ ಸಂಪರ್ಕಿಸುವ ಹಿರಣ್ಯಪಾಳ್ಯ ಮುಖ್ತರಸ್ತೆಯಲ್ಲಿ ಗುಂಡಿಗಳು ವಿಪರೀತವಾಗಿವೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲೇ ದೊಡ್ಡ ಗುಂಡಿ ಬಿದ್ದು ಮಳೆ ನೀರು ತುಂಬಿದೆ. ಇದೆಲ್ಲಾ ಬಿಟ್ಟಿ ಭಾಗ್ಯದ ಪರಿಣಾಮ ಅನಿಸುತ್ತಿದೆ. ಪರಿಸ್ಥಿತಿ ತುಂಬಾ ಕೆಟ್ಟು ಹೋಗಿದೆ ಆಗಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

2 / 6
ರಸ್ತೆ ಗುಂಡಿಗಳ ಬಗ್ಗೆ ಯಾವಾಗ ಟಿವಿ9 ನಿರಂತರ ವರದಿ ಮಾಡಿತೋ, ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಸಿಬ್ಬಂದಿಯನ್ನ ಕಳುಹಿಸಿದರು. ಗುಂಡಿಗಳಿಗೆ ಜಲ್ಲಿಕಲ್ಲು ಸುರಿದು ತೇಪೆ ಹಚ್ಚುವ ಕೆಲಸ ಮಾಡಿದರು. ಸದ್ಯ ತಾತ್ಕಾಲಿಕವಾಗಿ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿದ್ದಾರೆ.

ರಸ್ತೆ ಗುಂಡಿಗಳ ಬಗ್ಗೆ ಯಾವಾಗ ಟಿವಿ9 ನಿರಂತರ ವರದಿ ಮಾಡಿತೋ, ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಸಿಬ್ಬಂದಿಯನ್ನ ಕಳುಹಿಸಿದರು. ಗುಂಡಿಗಳಿಗೆ ಜಲ್ಲಿಕಲ್ಲು ಸುರಿದು ತೇಪೆ ಹಚ್ಚುವ ಕೆಲಸ ಮಾಡಿದರು. ಸದ್ಯ ತಾತ್ಕಾಲಿಕವಾಗಿ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿದ್ದಾರೆ.

3 / 6
ಇದಿಷ್ಟೇ ಅಲ್ಲ, ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್​ನಲ್ಲೂ ಇದೇ ಪರಿಸ್ಥಿತಿ ಇದೆ. ಅಳೆತ್ತರದ ಗುಂಡಿಯಲ್ಲೇ ಬಿಎಂಟಿಸಿ ಬಸ್​ಗಳು ಸಂಚಾರಿಸುವ ಪರಿಸ್ಥಿತಿ ಇದೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ ಗುಂಡಿಗಳಲ್ಲಿ ನೀರು ನಿಂತಿದೆ. ಗುಂಡಿಯಲ್ಲೇ ಸರ್ಕಸ್​ ಮಾಡಿಕೊಂಡು ಬಸ್​ಗಳು ಸಂಚರಿಸುತ್ತಿವೆ. ಎಷ್ಟೇ ಬಾರಿ ಟಾರ್​ ಹಾಕಿದರೂ ಅದೇ ರಾಗ, ಅದೇ ಹಾಡು ಆಗಿದೆ.

ಇದಿಷ್ಟೇ ಅಲ್ಲ, ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್​ನಲ್ಲೂ ಇದೇ ಪರಿಸ್ಥಿತಿ ಇದೆ. ಅಳೆತ್ತರದ ಗುಂಡಿಯಲ್ಲೇ ಬಿಎಂಟಿಸಿ ಬಸ್​ಗಳು ಸಂಚಾರಿಸುವ ಪರಿಸ್ಥಿತಿ ಇದೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ ಗುಂಡಿಗಳಲ್ಲಿ ನೀರು ನಿಂತಿದೆ. ಗುಂಡಿಯಲ್ಲೇ ಸರ್ಕಸ್​ ಮಾಡಿಕೊಂಡು ಬಸ್​ಗಳು ಸಂಚರಿಸುತ್ತಿವೆ. ಎಷ್ಟೇ ಬಾರಿ ಟಾರ್​ ಹಾಕಿದರೂ ಅದೇ ರಾಗ, ಅದೇ ಹಾಡು ಆಗಿದೆ.

4 / 6
ಇನ್ನು ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್​ನಲ್ಲೂ ಸಾವಿನ ಗುಂಡಿಗಳು ಬಾಯ್ದೆರೆದು ನಿಂತಿವೆ. ಮಾಗಡಿ ರಸ್ತೆ, ನಾಗರಬಾವಿ, ಬೆಂಗಳೂರು ವಿವಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬರೀ ಗುಂಡಿಗಳದ್ದೇ ದರ್ಬಾರ್ ಆಗಿದೆ. ಪ್ರತಿಬಾರಿ ಮಳೆ ಬಂದಾಗಲೂ ಇದೇ ಸಮಸ್ಯೆ ಆಗ್ತಿದೆ. ಗುಂಡಿಯಲ್ಲಿ ಬಿದ್ದು ಯಾರದ್ದಾದ್ರೂ ಜೀವ ಹೋದ್ರೆ ಯಾರು ಹೊಣೆ ಅಂತಾ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್​ನಲ್ಲೂ ಸಾವಿನ ಗುಂಡಿಗಳು ಬಾಯ್ದೆರೆದು ನಿಂತಿವೆ. ಮಾಗಡಿ ರಸ್ತೆ, ನಾಗರಬಾವಿ, ಬೆಂಗಳೂರು ವಿವಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬರೀ ಗುಂಡಿಗಳದ್ದೇ ದರ್ಬಾರ್ ಆಗಿದೆ. ಪ್ರತಿಬಾರಿ ಮಳೆ ಬಂದಾಗಲೂ ಇದೇ ಸಮಸ್ಯೆ ಆಗ್ತಿದೆ. ಗುಂಡಿಯಲ್ಲಿ ಬಿದ್ದು ಯಾರದ್ದಾದ್ರೂ ಜೀವ ಹೋದ್ರೆ ಯಾರು ಹೊಣೆ ಅಂತಾ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

5 / 6
ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಹಲವು ಕಡೆ ಅವಾಂತರವಾಗಿ ಜನರು ಪರದಾಡಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಸಾವಿನ ಗುಂಡಿಗಳು ಸವಾರರ ಬಲಿಗೆ ಕಾಯುತ್ತಿವೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಕ್ರಮಕೈಗೊಳ್ಳಬೇಕಿದೆ.

ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಹಲವು ಕಡೆ ಅವಾಂತರವಾಗಿ ಜನರು ಪರದಾಡಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಸಾವಿನ ಗುಂಡಿಗಳು ಸವಾರರ ಬಲಿಗೆ ಕಾಯುತ್ತಿವೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಕ್ರಮಕೈಗೊಳ್ಳಬೇಕಿದೆ.

6 / 6
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ