AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗುಂಡಿ ಗಂಡಾಂತರದಿಂದ ವಾಹನ ಸವಾರರಿಗೆ ನರಕ, ಬಿಬಿಎಂಪಿ ವಿರುದ್ಧ ಆಕ್ರೋಶ

ಬೆಂಗಳೂರು, ಆಗಸ್ಟ್ 6: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ನದಿಯಂತಾಗಿದ್ದವು. ಅಂಡರ್​​ಪಾಸ್​ಗಳಲ್ಲಿ ಮಂಡಿಯುದ್ದ ನೀರು ನಿಂತಿತ್ತು. ಕಿಲೋಮೀಟರ್​​ವರೆಗೂ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಮರಗಳು ರಸ್ತೆಗಳ ಮೇಲೆ ಉರುಳಿದ್ದವು. ಮಳೆಯಿಂದ ಇಷ್ಟೆಲ್ಲಾ ಅವಾಂತರ ಆಗಿರುವ ಮಧ್ಯೆ ಇದೀಗ ಮತ್ತೊಂದು ಕಾಟ ಶುರುವಾಗಿದೆ. ಯಮ ಗುಂಡಿಗಳು ಬಾಯ್ದೆರೆದು ನಿಂತಿವೆ.

ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Aug 06, 2024 | 2:07 PM

Share
ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್, ಗುಂಡಿಗಳದ್ದೇ ಗಂಡಾಂತರ. ಇದು ಸಿಲಿಕಾನ್​ ಸಿಟಿ ಬೆಂಗಳೂರಿನ ಸದ್ಯದ ಪರಿಸ್ಥಿತಿಯಾಗಿದೆ. ಪ್ರತಿ ದಿನವೂ ಆತಂಕದಲ್ಲೇ ಸವಾರರು ಸಾಗಬೇಕಾದ ಪರಿಸ್ಥಿತಿ ಬಂದಿದೆ. ಇದು ವಾಹನ ಸವಾರರಿಗೆ ನರಕಯಾತನೆ ತಂದಿಟ್ಟಿದೆ.

ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್, ಗುಂಡಿಗಳದ್ದೇ ಗಂಡಾಂತರ. ಇದು ಸಿಲಿಕಾನ್​ ಸಿಟಿ ಬೆಂಗಳೂರಿನ ಸದ್ಯದ ಪರಿಸ್ಥಿತಿಯಾಗಿದೆ. ಪ್ರತಿ ದಿನವೂ ಆತಂಕದಲ್ಲೇ ಸವಾರರು ಸಾಗಬೇಕಾದ ಪರಿಸ್ಥಿತಿ ಬಂದಿದೆ. ಇದು ವಾಹನ ಸವಾರರಿಗೆ ನರಕಯಾತನೆ ತಂದಿಟ್ಟಿದೆ.

1 / 6
ಬೆಂಗಳೂರಿನ ನಾಗವಾರ-ಹೆಬ್ಬಾಳ ಸಂಪರ್ಕಿಸುವ ಹಿರಣ್ಯಪಾಳ್ಯ ಮುಖ್ತರಸ್ತೆಯಲ್ಲಿ ಗುಂಡಿಗಳು ವಿಪರೀತವಾಗಿವೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲೇ ದೊಡ್ಡ ಗುಂಡಿ ಬಿದ್ದು ಮಳೆ ನೀರು ತುಂಬಿದೆ. ಇದೆಲ್ಲಾ ಬಿಟ್ಟಿ ಭಾಗ್ಯದ ಪರಿಣಾಮ ಅನಿಸುತ್ತಿದೆ. ಪರಿಸ್ಥಿತಿ ತುಂಬಾ ಕೆಟ್ಟು ಹೋಗಿದೆ ಆಗಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ನಾಗವಾರ-ಹೆಬ್ಬಾಳ ಸಂಪರ್ಕಿಸುವ ಹಿರಣ್ಯಪಾಳ್ಯ ಮುಖ್ತರಸ್ತೆಯಲ್ಲಿ ಗುಂಡಿಗಳು ವಿಪರೀತವಾಗಿವೆ. ನಿತ್ಯ ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲೇ ದೊಡ್ಡ ಗುಂಡಿ ಬಿದ್ದು ಮಳೆ ನೀರು ತುಂಬಿದೆ. ಇದೆಲ್ಲಾ ಬಿಟ್ಟಿ ಭಾಗ್ಯದ ಪರಿಣಾಮ ಅನಿಸುತ್ತಿದೆ. ಪರಿಸ್ಥಿತಿ ತುಂಬಾ ಕೆಟ್ಟು ಹೋಗಿದೆ ಆಗಿದೆ ಎಂದು ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

2 / 6
ರಸ್ತೆ ಗುಂಡಿಗಳ ಬಗ್ಗೆ ಯಾವಾಗ ಟಿವಿ9 ನಿರಂತರ ವರದಿ ಮಾಡಿತೋ, ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಸಿಬ್ಬಂದಿಯನ್ನ ಕಳುಹಿಸಿದರು. ಗುಂಡಿಗಳಿಗೆ ಜಲ್ಲಿಕಲ್ಲು ಸುರಿದು ತೇಪೆ ಹಚ್ಚುವ ಕೆಲಸ ಮಾಡಿದರು. ಸದ್ಯ ತಾತ್ಕಾಲಿಕವಾಗಿ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿದ್ದಾರೆ.

ರಸ್ತೆ ಗುಂಡಿಗಳ ಬಗ್ಗೆ ಯಾವಾಗ ಟಿವಿ9 ನಿರಂತರ ವರದಿ ಮಾಡಿತೋ, ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಸಿಬ್ಬಂದಿಯನ್ನ ಕಳುಹಿಸಿದರು. ಗುಂಡಿಗಳಿಗೆ ಜಲ್ಲಿಕಲ್ಲು ಸುರಿದು ತೇಪೆ ಹಚ್ಚುವ ಕೆಲಸ ಮಾಡಿದರು. ಸದ್ಯ ತಾತ್ಕಾಲಿಕವಾಗಿ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿದ್ದಾರೆ.

3 / 6
ಇದಿಷ್ಟೇ ಅಲ್ಲ, ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್​ನಲ್ಲೂ ಇದೇ ಪರಿಸ್ಥಿತಿ ಇದೆ. ಅಳೆತ್ತರದ ಗುಂಡಿಯಲ್ಲೇ ಬಿಎಂಟಿಸಿ ಬಸ್​ಗಳು ಸಂಚಾರಿಸುವ ಪರಿಸ್ಥಿತಿ ಇದೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ ಗುಂಡಿಗಳಲ್ಲಿ ನೀರು ನಿಂತಿದೆ. ಗುಂಡಿಯಲ್ಲೇ ಸರ್ಕಸ್​ ಮಾಡಿಕೊಂಡು ಬಸ್​ಗಳು ಸಂಚರಿಸುತ್ತಿವೆ. ಎಷ್ಟೇ ಬಾರಿ ಟಾರ್​ ಹಾಕಿದರೂ ಅದೇ ರಾಗ, ಅದೇ ಹಾಡು ಆಗಿದೆ.

ಇದಿಷ್ಟೇ ಅಲ್ಲ, ಬೆಂಗಳೂರಿನ ಹೃದಯಭಾಗ ಮೆಜೆಸ್ಟಿಕ್​ನಲ್ಲೂ ಇದೇ ಪರಿಸ್ಥಿತಿ ಇದೆ. ಅಳೆತ್ತರದ ಗುಂಡಿಯಲ್ಲೇ ಬಿಎಂಟಿಸಿ ಬಸ್​ಗಳು ಸಂಚಾರಿಸುವ ಪರಿಸ್ಥಿತಿ ಇದೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ ಗುಂಡಿಗಳಲ್ಲಿ ನೀರು ನಿಂತಿದೆ. ಗುಂಡಿಯಲ್ಲೇ ಸರ್ಕಸ್​ ಮಾಡಿಕೊಂಡು ಬಸ್​ಗಳು ಸಂಚರಿಸುತ್ತಿವೆ. ಎಷ್ಟೇ ಬಾರಿ ಟಾರ್​ ಹಾಕಿದರೂ ಅದೇ ರಾಗ, ಅದೇ ಹಾಡು ಆಗಿದೆ.

4 / 6
ಇನ್ನು ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್​ನಲ್ಲೂ ಸಾವಿನ ಗುಂಡಿಗಳು ಬಾಯ್ದೆರೆದು ನಿಂತಿವೆ. ಮಾಗಡಿ ರಸ್ತೆ, ನಾಗರಬಾವಿ, ಬೆಂಗಳೂರು ವಿವಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬರೀ ಗುಂಡಿಗಳದ್ದೇ ದರ್ಬಾರ್ ಆಗಿದೆ. ಪ್ರತಿಬಾರಿ ಮಳೆ ಬಂದಾಗಲೂ ಇದೇ ಸಮಸ್ಯೆ ಆಗ್ತಿದೆ. ಗುಂಡಿಯಲ್ಲಿ ಬಿದ್ದು ಯಾರದ್ದಾದ್ರೂ ಜೀವ ಹೋದ್ರೆ ಯಾರು ಹೊಣೆ ಅಂತಾ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್​ನಲ್ಲೂ ಸಾವಿನ ಗುಂಡಿಗಳು ಬಾಯ್ದೆರೆದು ನಿಂತಿವೆ. ಮಾಗಡಿ ರಸ್ತೆ, ನಾಗರಬಾವಿ, ಬೆಂಗಳೂರು ವಿವಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬರೀ ಗುಂಡಿಗಳದ್ದೇ ದರ್ಬಾರ್ ಆಗಿದೆ. ಪ್ರತಿಬಾರಿ ಮಳೆ ಬಂದಾಗಲೂ ಇದೇ ಸಮಸ್ಯೆ ಆಗ್ತಿದೆ. ಗುಂಡಿಯಲ್ಲಿ ಬಿದ್ದು ಯಾರದ್ದಾದ್ರೂ ಜೀವ ಹೋದ್ರೆ ಯಾರು ಹೊಣೆ ಅಂತಾ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.

5 / 6
ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಹಲವು ಕಡೆ ಅವಾಂತರವಾಗಿ ಜನರು ಪರದಾಡಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಸಾವಿನ ಗುಂಡಿಗಳು ಸವಾರರ ಬಲಿಗೆ ಕಾಯುತ್ತಿವೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಕ್ರಮಕೈಗೊಳ್ಳಬೇಕಿದೆ.

ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಗೆ ಹಲವು ಕಡೆ ಅವಾಂತರವಾಗಿ ಜನರು ಪರದಾಡಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಸಾವಿನ ಗುಂಡಿಗಳು ಸವಾರರ ಬಲಿಗೆ ಕಾಯುತ್ತಿವೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತು ಕ್ರಮಕೈಗೊಳ್ಳಬೇಕಿದೆ.

6 / 6
Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!