AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕಿ.ಮೀಗೆ 1 ರೂ ವೆಚ್ಚ, 10 ನಿಮಿಷಗಳಲ್ಲಿ ಡೆಲಿವರಿ: ರೋಗಿಗಳ ಜೀವ ಉಳಿಸುತ್ತಿವೆ ಈ ಡ್ರೋನ್​​ ಸೇವೆ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಡ್ರೋನ್ ಯೋಜನೆ ಪರಿಹಾರ ಒದಗಿಸಿದೆ. ಚಂದ್ರಾಪುರದಿಂದ ಬೊಮ್ಮಸಂದ್ರಕ್ಕೆ 10 ನಿಮಿಷದಲ್ಲಿ ವೈದ್ಯಕೀಯ ಮಾದರಿಗಳನ್ನು ತಲುಪಿಸಿ ಜೀವ ಉಳಿಸುವ ಕಾರ್ಯ ನಡೆಯುತ್ತಿದೆ. ಪ್ರತಿ ವಿತರಣೆಗೆ 1 ರೂಪಾಯಿ ವೆಚ್ಚ ತಗಲುತ್ತಿದ್ದು, DGCA ಅನುಮೋದನೆಯೊ ಇದಕ್ಕೆ ದೊರೆತಿದೆ ಎನ್ನಲಾಗಿದೆ. ಭಾರತದೆಲ್ಲೆಡೆಯೂ ಯೋಜನೆ ವಿಸ್ತರಣೆ ಹೊಂದಿ 10 ನಿಮಿಷಗಳಲ್ಲಿ ವೈದ್ಯಕೀಯ ವಿತರಣೆ ಸಾಮಾನ್ಯವಾಗಬಹುದೆಂದ ಹೊಸ ನಿರೀಕ್ಷೆಯೂ ಇದರಿಂದಾಗಿ ಹುಟ್ಟಿಕೊಂಡಿದೆ.

ಪ್ರಸನ್ನ ಹೆಗಡೆ
|

Updated on:Mar 19, 2026 | 12:33 PM

Share
ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆಯಿಂದಾಗಿ ತುರ್ತು ಚಿಕಿತ್ಸೆ ಅಗತ್ಯವಿರುವ ಅದೆಷ್ಟೋ ಮಂದಿ ಪ್ರಾಣ ತೆತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಔಷಧ, ಚಿಕಿತ್ಸೆಗೆ ಅಗತ್ಯ ವಸ್ತುಗಳ ಸಾಗಾಟಕ್ಕೂ ವಾಹನಗಳ ದಟ್ಟಣೆ ಅಡ್ಡಗಾಲಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾರಾಯಣ ಹೆಲ್ತ್​​ ಮತ್ತು  ಡ್ರೋನ್ ಸ್ಟಾರ್ಟ್‌ಅಪ್ Airbound ಒಟ್ಟಾಗಿ ಆರಂಭಿಸಿರುವ ಪೈಲಟ್ ಯೋಜನೆ,  ಟ್ರಾಫಿಕ್ ಸಮಸ್ಯೆ ಮೀರಿ ಅಗತ್ಯ ವೈದ್ಯಕೀಯ ಸಾಮಗ್ರಿಗಳು ಮತ್ತು ಪರೀಕ್ಷಾ ಮಾದರಿಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವ ಮೂಲಕ ಜೀವಗಳನ್ನು ಉಳಿಸುವ ಹೊಸ ಮಾರ್ಗವನ್ನು ತೋರಿಸಿದೆ.

ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆಯಿಂದಾಗಿ ತುರ್ತು ಚಿಕಿತ್ಸೆ ಅಗತ್ಯವಿರುವ ಅದೆಷ್ಟೋ ಮಂದಿ ಪ್ರಾಣ ತೆತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಔಷಧ, ಚಿಕಿತ್ಸೆಗೆ ಅಗತ್ಯ ವಸ್ತುಗಳ ಸಾಗಾಟಕ್ಕೂ ವಾಹನಗಳ ದಟ್ಟಣೆ ಅಡ್ಡಗಾಲಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಾರಾಯಣ ಹೆಲ್ತ್​​ ಮತ್ತು ಡ್ರೋನ್ ಸ್ಟಾರ್ಟ್‌ಅಪ್ Airbound ಒಟ್ಟಾಗಿ ಆರಂಭಿಸಿರುವ ಪೈಲಟ್ ಯೋಜನೆ, ಟ್ರಾಫಿಕ್ ಸಮಸ್ಯೆ ಮೀರಿ ಅಗತ್ಯ ವೈದ್ಯಕೀಯ ಸಾಮಗ್ರಿಗಳು ಮತ್ತು ಪರೀಕ್ಷಾ ಮಾದರಿಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವ ಮೂಲಕ ಜೀವಗಳನ್ನು ಉಳಿಸುವ ಹೊಸ ಮಾರ್ಗವನ್ನು ತೋರಿಸಿದೆ.

1 / 5
ಈ ಪೈಲಟ್ ಯೋಜನೆ ಚಂದ್ರಾಪುರದ ಕ್ಲಿನಿಕ್‌ನಿಂದ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೆಲ್ತ್ ಸಿಟಿ ಪ್ರಯೋಗಾಲಯದವರೆಗೆ ಸಂಪರ್ಕ ಕಲ್ಪಿಸುತ್ತದೆ. ಸಾಮಾನ್ಯವಾಗಿ 4 ಕಿಮೀ ಪ್ರಯಾಣಕ್ಕೆ ಟ್ರಾಫಿಕ್ ಸಮಯದಲ್ಲಿ ಸುಮಾರು ಒಂದು ಗಂಟೆ ಸಮಯ ಬೇಕು. ಆದರೆ ಡ್ರೋನ್ ಮೂಲಕ ಇದು ಕೇವಲ 10 ನಿಮಿಷಗಳಲ್ಲಿ ಸಾಧ್ಯವಾಗುತ್ತಿದೆ. ಇದರಿಂದ ರೋಗಿಗಳಿಗೆ ಪರೀಕ್ಷಾ ಫಲಿತಾಂಶಗಳು ಹಾಗೂ ಚಿಕಿತ್ಸೆ ಬಹಳ ವೇಗವಾಗಿ ಲಭ್ಯವಾಗಲಿವೆ.

ಈ ಪೈಲಟ್ ಯೋಜನೆ ಚಂದ್ರಾಪುರದ ಕ್ಲಿನಿಕ್‌ನಿಂದ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೆಲ್ತ್ ಸಿಟಿ ಪ್ರಯೋಗಾಲಯದವರೆಗೆ ಸಂಪರ್ಕ ಕಲ್ಪಿಸುತ್ತದೆ. ಸಾಮಾನ್ಯವಾಗಿ 4 ಕಿಮೀ ಪ್ರಯಾಣಕ್ಕೆ ಟ್ರಾಫಿಕ್ ಸಮಯದಲ್ಲಿ ಸುಮಾರು ಒಂದು ಗಂಟೆ ಸಮಯ ಬೇಕು. ಆದರೆ ಡ್ರೋನ್ ಮೂಲಕ ಇದು ಕೇವಲ 10 ನಿಮಿಷಗಳಲ್ಲಿ ಸಾಧ್ಯವಾಗುತ್ತಿದೆ. ಇದರಿಂದ ರೋಗಿಗಳಿಗೆ ಪರೀಕ್ಷಾ ಫಲಿತಾಂಶಗಳು ಹಾಗೂ ಚಿಕಿತ್ಸೆ ಬಹಳ ವೇಗವಾಗಿ ಲಭ್ಯವಾಗಲಿವೆ.

2 / 5
2026ರ ಆರಂಭದಿಂದಲೇ ಈ ಸೇವೆ ಪ್ರಾರಂಭವಾಗಿದ್ದು, 54 ದಿನಗಳ ಪ್ರಯೋಗಾವಧಿಯಲ್ಲಿ 700ಕ್ಕೂ ಹೆಚ್ಚು ಬಾರಿ  ಡ್ರೋನ್​​ ಹಾರಾಟ ಯಶಸ್ವಿಯಾಗಿ ನಡೆದಿದೆ. ಪ್ರತಿ ಹಾರಾಟದಲ್ಲಿ ಸುಮಾರು 40 ಪರೀಕ್ಷಾ ಮಾದರಿಗಳನ್ನು  ಸಾಗಿಸಲು ಸಾಧ್ಯವಾಗುತ್ತದೆ. ಈ ತಂತ್ರಜ್ಞಾನದಲ್ಲಿ ಮತ್ತೊಂದು ವಿಶೇಷವೆಂದರೆ ಅದರ ಕಡಿಮೆ ವೆಚ್ಚ. ಪ್ರತಿ ಡ್ರೋನ್ ಡೆಲಿವರಿಗೆ ಕೇವಲ 1 ರೂಪಾಯಿ ಮಾತ್ರ ಖರ್ಚಾಗುತ್ತದೆ. ಇದು ವಾಹನಗಳ ಮೂಲಕ ಸಾಗಾಟಕ್ಕಿಂತ ಬಹಳ ಕಡಿಮೆ ವೆಚ್ಚವಾಗಿದೆ.

2026ರ ಆರಂಭದಿಂದಲೇ ಈ ಸೇವೆ ಪ್ರಾರಂಭವಾಗಿದ್ದು, 54 ದಿನಗಳ ಪ್ರಯೋಗಾವಧಿಯಲ್ಲಿ 700ಕ್ಕೂ ಹೆಚ್ಚು ಬಾರಿ ಡ್ರೋನ್​​ ಹಾರಾಟ ಯಶಸ್ವಿಯಾಗಿ ನಡೆದಿದೆ. ಪ್ರತಿ ಹಾರಾಟದಲ್ಲಿ ಸುಮಾರು 40 ಪರೀಕ್ಷಾ ಮಾದರಿಗಳನ್ನು ಸಾಗಿಸಲು ಸಾಧ್ಯವಾಗುತ್ತದೆ. ಈ ತಂತ್ರಜ್ಞಾನದಲ್ಲಿ ಮತ್ತೊಂದು ವಿಶೇಷವೆಂದರೆ ಅದರ ಕಡಿಮೆ ವೆಚ್ಚ. ಪ್ರತಿ ಡ್ರೋನ್ ಡೆಲಿವರಿಗೆ ಕೇವಲ 1 ರೂಪಾಯಿ ಮಾತ್ರ ಖರ್ಚಾಗುತ್ತದೆ. ಇದು ವಾಹನಗಳ ಮೂಲಕ ಸಾಗಾಟಕ್ಕಿಂತ ಬಹಳ ಕಡಿಮೆ ವೆಚ್ಚವಾಗಿದೆ.

3 / 5
ಈ ಯೋಜನೆಯ ಯಶಸ್ಸಿಗೆ ಡ್ರೋನ್​​ ಮಾದರಿಯೂ ಪ್ರಮುಖ ಪಾತ್ರ ವಹಿಸಿದೆ. ಇದು ವರ್ಟಿಕಲ್ ಟೆಕ್‌ಆಫ್ ಸಾಮರ್ಥ್ಯ ಮತ್ತು ಫಿಕ್ಸ್ಡ್-ವಿಂಗ್ ಹಾರಾಟದ ದಕ್ಷತೆಯನ್ನು ಒಟ್ಟಿಗೆ ಹೊಂದಿದ್ದು, ನಗರ ಪ್ರದೇಶಗಳಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಬಾರಿ ಹಾರಾಟ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿದೆ.

ಈ ಯೋಜನೆಯ ಯಶಸ್ಸಿಗೆ ಡ್ರೋನ್​​ ಮಾದರಿಯೂ ಪ್ರಮುಖ ಪಾತ್ರ ವಹಿಸಿದೆ. ಇದು ವರ್ಟಿಕಲ್ ಟೆಕ್‌ಆಫ್ ಸಾಮರ್ಥ್ಯ ಮತ್ತು ಫಿಕ್ಸ್ಡ್-ವಿಂಗ್ ಹಾರಾಟದ ದಕ್ಷತೆಯನ್ನು ಒಟ್ಟಿಗೆ ಹೊಂದಿದ್ದು, ನಗರ ಪ್ರದೇಶಗಳಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಬಾರಿ ಹಾರಾಟ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿದೆ.

4 / 5
ಈ ಯೋಜನೆಗೆ Directorate General of Civil Aviation (DGCA) ಅನುಮೋದನೆಯೂ ದೊರೆತಿದೆ ಎನ್ನಲಾಗಿದ್ದು, ಈಗ ಇದನ್ನು ನಗರಾದ್ಯಂತ ವಿಸ್ತರಿಸಲು ಅನುಮತಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಈ ಪ್ರಯೋಗ ಯಶಸ್ವಿಯಾಗಿರುವುದರಿಂದ, ಭಾರತದೆಲ್ಲೆಡೆಯೂ ಯೋಜನೆ ವಿಸ್ತರಣೆ ಹೊಂದಿ 10 ನಿಮಿಷಗಳಲ್ಲಿ ವೈದ್ಯಕೀಯ ವಿತರಣೆ ಸಾಮಾನ್ಯವಾಗಬಹುದೆಂದ ಹೊಸ ನಿರೀಕ್ಷೆ ಹುಟ್ಟಿಕೊಂಡಿದೆ.

ಈ ಯೋಜನೆಗೆ Directorate General of Civil Aviation (DGCA) ಅನುಮೋದನೆಯೂ ದೊರೆತಿದೆ ಎನ್ನಲಾಗಿದ್ದು, ಈಗ ಇದನ್ನು ನಗರಾದ್ಯಂತ ವಿಸ್ತರಿಸಲು ಅನುಮತಿ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಈ ಪ್ರಯೋಗ ಯಶಸ್ವಿಯಾಗಿರುವುದರಿಂದ, ಭಾರತದೆಲ್ಲೆಡೆಯೂ ಯೋಜನೆ ವಿಸ್ತರಣೆ ಹೊಂದಿ 10 ನಿಮಿಷಗಳಲ್ಲಿ ವೈದ್ಯಕೀಯ ವಿತರಣೆ ಸಾಮಾನ್ಯವಾಗಬಹುದೆಂದ ಹೊಸ ನಿರೀಕ್ಷೆ ಹುಟ್ಟಿಕೊಂಡಿದೆ.

5 / 5

Published On - 12:32 pm, Thu, 19 March 26

Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?