AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ರಾತ್ರಿ ಸುರಿದ ಮಳೆಗೆ ಬೆಂಗಳೂರು ತತ್ತರ, ಹಲವೆಡೆ ನಾನಾ ಅವಾಂತರ; ಫೋಟೋಸ್ ಇವೆ

ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಅಬ್ಬರಿಸುತ್ತಿದ್ದಾನೆ. ಸಂಜೆಯಾದ್ರೆ ಸಾಕು ಧೋ ಅಂತಾ ಸುರಿಯೋ ಮಳೆಗೆ ಜನರು ಹೈರಾಣಾಗಿದ್ರೆ. ಇತ್ತ ಒಂದೆರಡು ದಿನದ ಮಳೆಗೆ ಬಿಬಿಎಂಪಿ ಬಣ್ಣ ಬಯಲಾಗಿದೆ. ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.

ಆಯೇಷಾ ಬಾನು
|

Updated on:Oct 06, 2024 | 8:34 AM

Share
ಬಿನ್ನಿಪೇಟೆ, ಬಸವೇಶ್ವರ ನಗರ, ಯಲಹಂಕ, ಪುಟ್ಟೇನಹಳ್ಳಿ ಸೇರಿದಂತೆ ನಗರದ ಹಲವೆಡೆ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬಿನ್ನಿಪೇಟೆ, ಯಲಹಂಕದಲ್ಲಿ ಅಪಾರ್ಟ್​ಮೆಂಟ್​​ಗಳ ಕಾಂಪೌಂಡ್ ಕುಸಿದು ಅಪಾರ್ಟ್​ಮೆಂಟ್​​ಗಳ ಆವರಣಕ್ಕೆ ನೀರು ನುಗ್ಗಿ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ.

ಬಿನ್ನಿಪೇಟೆ, ಬಸವೇಶ್ವರ ನಗರ, ಯಲಹಂಕ, ಪುಟ್ಟೇನಹಳ್ಳಿ ಸೇರಿದಂತೆ ನಗರದ ಹಲವೆಡೆ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬಿನ್ನಿಪೇಟೆ, ಯಲಹಂಕದಲ್ಲಿ ಅಪಾರ್ಟ್​ಮೆಂಟ್​​ಗಳ ಕಾಂಪೌಂಡ್ ಕುಸಿದು ಅಪಾರ್ಟ್​ಮೆಂಟ್​​ಗಳ ಆವರಣಕ್ಕೆ ನೀರು ನುಗ್ಗಿ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ.

1 / 8
ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಮಳೆಗೆ ಪಾರ್ಕ್​ವೆಸ್ಟ್ ಅಪಾರ್ಟ್ಮೆಂಟ್ ಹಿಂಭಾಗ ಕಾಂಪೌಂಡ್ ಗೋಡೆ ಕುಸಿದಿದೆ. 10 ಅಡಿ ಎತ್ತರದ ಗೋಡೆ ರಸ್ತೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಗೋಡೆ ಕುಸಿದಿದ್ದರಿಂದ 10ಕ್ಕೂ ಹೆಚ್ಚು ಬೈಕ್​ಗಳು ಜಖಂ ಆಗಿದ್ದು ವಿದ್ಯುತ್​ ಕಂಬದ ಮೇಲೆ ಗೋಡೆ ಬಿದ್ದ ಹಿನ್ನೆಲೆ ಕಂಬ ವಾಲಿದೆ. ಮನೆಯಿಂದ ಹೊರಬರಲಾಗದೇ ಸ್ಥಳೀಯರು ಪರದಾಡುತ್ತಿದ್ದಾರೆ.

ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಮಳೆಗೆ ಪಾರ್ಕ್​ವೆಸ್ಟ್ ಅಪಾರ್ಟ್ಮೆಂಟ್ ಹಿಂಭಾಗ ಕಾಂಪೌಂಡ್ ಗೋಡೆ ಕುಸಿದಿದೆ. 10 ಅಡಿ ಎತ್ತರದ ಗೋಡೆ ರಸ್ತೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಗೋಡೆ ಕುಸಿದಿದ್ದರಿಂದ 10ಕ್ಕೂ ಹೆಚ್ಚು ಬೈಕ್​ಗಳು ಜಖಂ ಆಗಿದ್ದು ವಿದ್ಯುತ್​ ಕಂಬದ ಮೇಲೆ ಗೋಡೆ ಬಿದ್ದ ಹಿನ್ನೆಲೆ ಕಂಬ ವಾಲಿದೆ. ಮನೆಯಿಂದ ಹೊರಬರಲಾಗದೇ ಸ್ಥಳೀಯರು ಪರದಾಡುತ್ತಿದ್ದಾರೆ.

2 / 8
ಬೆಂಗಳೂರಿನ ಹಲವೆಡೆ 10ಕ್ಕೂ ಅಧಿಕ ಮರಗಳು ಧರಾಶಾಹಿ. ಬೆಂಗಳೂರು ದಕ್ಷಿಣ ವಲಯದಲ್ಲಿ ಮರಗಳು ಬಿದ್ದು ಕಾರು, ಆಟೋ, ಬೈಕ್​ಗಳು ಜಖಂ ಆಗಿವೆ. ಮಲ್ಲೇಶ್ವರಂ 17ನೇ ಕ್ರಾಸ್​ನಲ್ಲಿ ಕ್ಲೌಡ್​ ನೈನ್​​ ಆಸ್ಪತ್ರೆ ಮುಂಭಾಗದಲ್ಲಿ ಬೃಹತ್ ಮರ ಧರೆಗುರುಳಿದೆ. ರಾತ್ರಿಯಾಗಿದ್ದರಿಂದ ಅದೃಷ್ಟವಶಾತ್​​ ಭಾರಿ ಅನಾಹುತ ತಪ್ಪಿದೆ. ಬಿಬಿಎಂಪಿ ಸಿಬ್ಬಂದಿಯಿಂದ ಮರಗಳ ತೆರವು ಕಾರ್ಯ ಮುಂದುವರೆದಿದೆ.

ಬೆಂಗಳೂರಿನ ಹಲವೆಡೆ 10ಕ್ಕೂ ಅಧಿಕ ಮರಗಳು ಧರಾಶಾಹಿ. ಬೆಂಗಳೂರು ದಕ್ಷಿಣ ವಲಯದಲ್ಲಿ ಮರಗಳು ಬಿದ್ದು ಕಾರು, ಆಟೋ, ಬೈಕ್​ಗಳು ಜಖಂ ಆಗಿವೆ. ಮಲ್ಲೇಶ್ವರಂ 17ನೇ ಕ್ರಾಸ್​ನಲ್ಲಿ ಕ್ಲೌಡ್​ ನೈನ್​​ ಆಸ್ಪತ್ರೆ ಮುಂಭಾಗದಲ್ಲಿ ಬೃಹತ್ ಮರ ಧರೆಗುರುಳಿದೆ. ರಾತ್ರಿಯಾಗಿದ್ದರಿಂದ ಅದೃಷ್ಟವಶಾತ್​​ ಭಾರಿ ಅನಾಹುತ ತಪ್ಪಿದೆ. ಬಿಬಿಎಂಪಿ ಸಿಬ್ಬಂದಿಯಿಂದ ಮರಗಳ ತೆರವು ಕಾರ್ಯ ಮುಂದುವರೆದಿದೆ.

3 / 8
ಮಳೆ

bangaloreans warried about mosquito problem For Heavy Rain News In Kannada

4 / 8
ಸರ್ಜಾಪುರ ಮುಖ್ಯರಸ್ತೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಸ್ತೆಯಲ್ಲಿ ನೀರು ನಿಂತಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈಲ್ವೇ ಟ್ರ್ಯಾಕ್ ಗೆ ನೀರು ಬರುತ್ತೆ ಅಂತಾ ರೈಲ್ವೇ ಇಲಾಖೆ ನೀರು ಹರಿಯೋ ಜಾಗವನ್ನ ಮುಚ್ಚಿರೋದು ಇಡೀ ರಸ್ತೆ ಜಲಾವೃತವಾಗುವಂತೆ ಮಾಡಿದೆ.

ಸರ್ಜಾಪುರ ಮುಖ್ಯರಸ್ತೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಸ್ತೆಯಲ್ಲಿ ನೀರು ನಿಂತಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈಲ್ವೇ ಟ್ರ್ಯಾಕ್ ಗೆ ನೀರು ಬರುತ್ತೆ ಅಂತಾ ರೈಲ್ವೇ ಇಲಾಖೆ ನೀರು ಹರಿಯೋ ಜಾಗವನ್ನ ಮುಚ್ಚಿರೋದು ಇಡೀ ರಸ್ತೆ ಜಲಾವೃತವಾಗುವಂತೆ ಮಾಡಿದೆ.

5 / 8
ಇತ್ತ ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸರ್ಕಸ್ ಮಾಡಿಕೊಂಡು ಸಂಚಾರ ಮಾಡ್ತಿದ್ದು, ಪ್ರತಿಬಾರೀ ಮಳೆ ಬಂದಾಗಲೂ ಇದೇ ಸ್ಥಿತಿ ಎದುರಾಗ್ತಿರೋದಕ್ಕೆ ಸ್ಥಳೀಯರು ಕಂಗಾಲಾಗಿಬಿಟ್ಟಿದ್ದಾರೆ. ಮಕ್ಕಳನ್ನ ಶಾಲೆಗೆ ಕಳಿಸೋಕು ಆಗ್ತಿಲ್ಲ ಅಂತಾ ಅಳಲು ತೋಡಿಕೊಂಡಿದ್ದಾರೆ.

ಇತ್ತ ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸರ್ಕಸ್ ಮಾಡಿಕೊಂಡು ಸಂಚಾರ ಮಾಡ್ತಿದ್ದು, ಪ್ರತಿಬಾರೀ ಮಳೆ ಬಂದಾಗಲೂ ಇದೇ ಸ್ಥಿತಿ ಎದುರಾಗ್ತಿರೋದಕ್ಕೆ ಸ್ಥಳೀಯರು ಕಂಗಾಲಾಗಿಬಿಟ್ಟಿದ್ದಾರೆ. ಮಕ್ಕಳನ್ನ ಶಾಲೆಗೆ ಕಳಿಸೋಕು ಆಗ್ತಿಲ್ಲ ಅಂತಾ ಅಳಲು ತೋಡಿಕೊಂಡಿದ್ದಾರೆ.

6 / 8
ರಸ್ತೆಯಲ್ಲಿ ನೀರು ತುಂಬಿರೋದರಿಂದ ಒಂದೆಡೆ ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ರೆ, ಇತ್ತ ದ್ವಿಚಕ್ರವಾಹನಗಳ ಸೈಲೆನ್ಸರ್ ಗೆ ನೀರು ನುಗ್ಗಿ ಪರದಾಡೋ ದೃಶ್ಯಗಳು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಸದ್ಯ ಈ ರಸ್ತೆಯ ಅರ್ಧಭಾಗ ಬಿಬಿಎಂಪಿಗೆ ಹಾಗೂ ಇನ್ನರ್ಧ ಭಾಗ ಗ್ರಾಮಪಂಚಾಯಿತಿಗೆ ಸೇರೋದರಿಂದ ಇಬ್ಬರ ಸಮನ್ವಯತೆಯಿಂದ ಸಂಕಷ್ಟ ಎದುರಾಗಿದೆ ಅಂತಾ ಸ್ಥಳೀಯರು ಆರೋಪಿಸ್ತಿದ್ದಾರೆ.

ರಸ್ತೆಯಲ್ಲಿ ನೀರು ತುಂಬಿರೋದರಿಂದ ಒಂದೆಡೆ ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ರೆ, ಇತ್ತ ದ್ವಿಚಕ್ರವಾಹನಗಳ ಸೈಲೆನ್ಸರ್ ಗೆ ನೀರು ನುಗ್ಗಿ ಪರದಾಡೋ ದೃಶ್ಯಗಳು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಸದ್ಯ ಈ ರಸ್ತೆಯ ಅರ್ಧಭಾಗ ಬಿಬಿಎಂಪಿಗೆ ಹಾಗೂ ಇನ್ನರ್ಧ ಭಾಗ ಗ್ರಾಮಪಂಚಾಯಿತಿಗೆ ಸೇರೋದರಿಂದ ಇಬ್ಬರ ಸಮನ್ವಯತೆಯಿಂದ ಸಂಕಷ್ಟ ಎದುರಾಗಿದೆ ಅಂತಾ ಸ್ಥಳೀಯರು ಆರೋಪಿಸ್ತಿದ್ದಾರೆ.

7 / 8
ಒಂದೆರಡು ದಿನದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ರೂ ಪಾಲಿಕೆ ಆಯುಕ್ತರು ಮಾತ್ರ ಏನು ಆಗಿಲ್ಲ ಅಂತಾ ಕತೆ ಹೇಳ್ತಿದ್ದಾರೆ. ಮಳೆಗೆ ಎಲ್ಲಾ ಸಿದ್ಧತೆ ಮಾಡಿದ್ದೇವೆ, ಗುಂಡಿಗಳನ್ನ ಮುಚ್ಚಿ, ಮರ ತೆರವು ಮಾಡಿದ್ದೇವೆ, ದಿಢೀರ್ ಅಂತಾ ಆಗೋ ಅವಾಂತರಕ್ಕೆ ಏನು ಮಾಡೋದು ಅಂತಾ ಬೇಜವಾಬ್ದಾರಿಯ ಉತ್ತರ ನೀಡ್ತಿದ್ದಾರೆ.

ಒಂದೆರಡು ದಿನದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ರೂ ಪಾಲಿಕೆ ಆಯುಕ್ತರು ಮಾತ್ರ ಏನು ಆಗಿಲ್ಲ ಅಂತಾ ಕತೆ ಹೇಳ್ತಿದ್ದಾರೆ. ಮಳೆಗೆ ಎಲ್ಲಾ ಸಿದ್ಧತೆ ಮಾಡಿದ್ದೇವೆ, ಗುಂಡಿಗಳನ್ನ ಮುಚ್ಚಿ, ಮರ ತೆರವು ಮಾಡಿದ್ದೇವೆ, ದಿಢೀರ್ ಅಂತಾ ಆಗೋ ಅವಾಂತರಕ್ಕೆ ಏನು ಮಾಡೋದು ಅಂತಾ ಬೇಜವಾಬ್ದಾರಿಯ ಉತ್ತರ ನೀಡ್ತಿದ್ದಾರೆ.

8 / 8

Published On - 8:33 am, Sun, 6 October 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ