- Kannada News Photo gallery bengaluru Rain Affect roads apartments submerged trees uproot kannada news
Bengaluru Rains: ರಾತ್ರಿ ಸುರಿದ ಮಳೆಗೆ ಬೆಂಗಳೂರು ತತ್ತರ, ಹಲವೆಡೆ ನಾನಾ ಅವಾಂತರ; ಫೋಟೋಸ್ ಇವೆ
ರಾಜ್ಯ ರಾಜಧಾನಿಯಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಅಬ್ಬರಿಸುತ್ತಿದ್ದಾನೆ. ಸಂಜೆಯಾದ್ರೆ ಸಾಕು ಧೋ ಅಂತಾ ಸುರಿಯೋ ಮಳೆಗೆ ಜನರು ಹೈರಾಣಾಗಿದ್ರೆ. ಇತ್ತ ಒಂದೆರಡು ದಿನದ ಮಳೆಗೆ ಬಿಬಿಎಂಪಿ ಬಣ್ಣ ಬಯಲಾಗಿದೆ. ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿವೆ.
Updated on:Oct 06, 2024 | 8:34 AM

ಬಿನ್ನಿಪೇಟೆ, ಬಸವೇಶ್ವರ ನಗರ, ಯಲಹಂಕ, ಪುಟ್ಟೇನಹಳ್ಳಿ ಸೇರಿದಂತೆ ನಗರದ ಹಲವೆಡೆ ರಾತ್ರಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಬಿನ್ನಿಪೇಟೆ, ಯಲಹಂಕದಲ್ಲಿ ಅಪಾರ್ಟ್ಮೆಂಟ್ಗಳ ಕಾಂಪೌಂಡ್ ಕುಸಿದು ಅಪಾರ್ಟ್ಮೆಂಟ್ಗಳ ಆವರಣಕ್ಕೆ ನೀರು ನುಗ್ಗಿ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರಿನ ಬಿನ್ನಿಪೇಟೆಯಲ್ಲಿ ಮಳೆಗೆ ಪಾರ್ಕ್ವೆಸ್ಟ್ ಅಪಾರ್ಟ್ಮೆಂಟ್ ಹಿಂಭಾಗ ಕಾಂಪೌಂಡ್ ಗೋಡೆ ಕುಸಿದಿದೆ. 10 ಅಡಿ ಎತ್ತರದ ಗೋಡೆ ರಸ್ತೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಗೋಡೆ ಕುಸಿದಿದ್ದರಿಂದ 10ಕ್ಕೂ ಹೆಚ್ಚು ಬೈಕ್ಗಳು ಜಖಂ ಆಗಿದ್ದು ವಿದ್ಯುತ್ ಕಂಬದ ಮೇಲೆ ಗೋಡೆ ಬಿದ್ದ ಹಿನ್ನೆಲೆ ಕಂಬ ವಾಲಿದೆ. ಮನೆಯಿಂದ ಹೊರಬರಲಾಗದೇ ಸ್ಥಳೀಯರು ಪರದಾಡುತ್ತಿದ್ದಾರೆ.

ಬೆಂಗಳೂರಿನ ಹಲವೆಡೆ 10ಕ್ಕೂ ಅಧಿಕ ಮರಗಳು ಧರಾಶಾಹಿ. ಬೆಂಗಳೂರು ದಕ್ಷಿಣ ವಲಯದಲ್ಲಿ ಮರಗಳು ಬಿದ್ದು ಕಾರು, ಆಟೋ, ಬೈಕ್ಗಳು ಜಖಂ ಆಗಿವೆ. ಮಲ್ಲೇಶ್ವರಂ 17ನೇ ಕ್ರಾಸ್ನಲ್ಲಿ ಕ್ಲೌಡ್ ನೈನ್ ಆಸ್ಪತ್ರೆ ಮುಂಭಾಗದಲ್ಲಿ ಬೃಹತ್ ಮರ ಧರೆಗುರುಳಿದೆ. ರಾತ್ರಿಯಾಗಿದ್ದರಿಂದ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಬಿಬಿಎಂಪಿ ಸಿಬ್ಬಂದಿಯಿಂದ ಮರಗಳ ತೆರವು ಕಾರ್ಯ ಮುಂದುವರೆದಿದೆ.

bangaloreans warried about mosquito problem For Heavy Rain News In Kannada

ಸರ್ಜಾಪುರ ಮುಖ್ಯರಸ್ತೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಸ್ತೆಯಲ್ಲಿ ನೀರು ನಿಂತಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈಲ್ವೇ ಟ್ರ್ಯಾಕ್ ಗೆ ನೀರು ಬರುತ್ತೆ ಅಂತಾ ರೈಲ್ವೇ ಇಲಾಖೆ ನೀರು ಹರಿಯೋ ಜಾಗವನ್ನ ಮುಚ್ಚಿರೋದು ಇಡೀ ರಸ್ತೆ ಜಲಾವೃತವಾಗುವಂತೆ ಮಾಡಿದೆ.

ಇತ್ತ ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸರ್ಕಸ್ ಮಾಡಿಕೊಂಡು ಸಂಚಾರ ಮಾಡ್ತಿದ್ದು, ಪ್ರತಿಬಾರೀ ಮಳೆ ಬಂದಾಗಲೂ ಇದೇ ಸ್ಥಿತಿ ಎದುರಾಗ್ತಿರೋದಕ್ಕೆ ಸ್ಥಳೀಯರು ಕಂಗಾಲಾಗಿಬಿಟ್ಟಿದ್ದಾರೆ. ಮಕ್ಕಳನ್ನ ಶಾಲೆಗೆ ಕಳಿಸೋಕು ಆಗ್ತಿಲ್ಲ ಅಂತಾ ಅಳಲು ತೋಡಿಕೊಂಡಿದ್ದಾರೆ.

ರಸ್ತೆಯಲ್ಲಿ ನೀರು ತುಂಬಿರೋದರಿಂದ ಒಂದೆಡೆ ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿದ್ರೆ, ಇತ್ತ ದ್ವಿಚಕ್ರವಾಹನಗಳ ಸೈಲೆನ್ಸರ್ ಗೆ ನೀರು ನುಗ್ಗಿ ಪರದಾಡೋ ದೃಶ್ಯಗಳು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಸದ್ಯ ಈ ರಸ್ತೆಯ ಅರ್ಧಭಾಗ ಬಿಬಿಎಂಪಿಗೆ ಹಾಗೂ ಇನ್ನರ್ಧ ಭಾಗ ಗ್ರಾಮಪಂಚಾಯಿತಿಗೆ ಸೇರೋದರಿಂದ ಇಬ್ಬರ ಸಮನ್ವಯತೆಯಿಂದ ಸಂಕಷ್ಟ ಎದುರಾಗಿದೆ ಅಂತಾ ಸ್ಥಳೀಯರು ಆರೋಪಿಸ್ತಿದ್ದಾರೆ.

ಒಂದೆರಡು ದಿನದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ರೂ ಪಾಲಿಕೆ ಆಯುಕ್ತರು ಮಾತ್ರ ಏನು ಆಗಿಲ್ಲ ಅಂತಾ ಕತೆ ಹೇಳ್ತಿದ್ದಾರೆ. ಮಳೆಗೆ ಎಲ್ಲಾ ಸಿದ್ಧತೆ ಮಾಡಿದ್ದೇವೆ, ಗುಂಡಿಗಳನ್ನ ಮುಚ್ಚಿ, ಮರ ತೆರವು ಮಾಡಿದ್ದೇವೆ, ದಿಢೀರ್ ಅಂತಾ ಆಗೋ ಅವಾಂತರಕ್ಕೆ ಏನು ಮಾಡೋದು ಅಂತಾ ಬೇಜವಾಬ್ದಾರಿಯ ಉತ್ತರ ನೀಡ್ತಿದ್ದಾರೆ.
Published On - 8:33 am, Sun, 6 October 24




