AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರು ಮಳೆ; ವರುಣನಿಂದ ಸೃಷ್ಟಿಯಾದ ಅವಾಂತರಗಳು ಒಂದಾ ಎರಡಾ, 206 ಮರಗಳು ಧರಾಶಾಹಿ

ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಹಲವೆಡೆ ಮರಗಳು ಬಿದ್ದಿದ್ದು ವಾಹನಗಳು ಜಖಂಗೊಂಡಿವೆ. ಮಳೆ ನೀರು ರಸ್ತೆಯಲ್ಲಿ ನಿಂತು ನದಿಯಂತಾಗಿದ್ದು ವಾಹನ ಸವಾರರು ಪರದಾಡಿದ್ದಾರೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ನಿದ್ದೆ ಮಾಡದೆ ನೀರು ಹೊರ ಹಾಕಿದ್ದಾರೆ.

ಆಯೇಷಾ ಬಾನು
| Edited By: |

Updated on:Jun 03, 2024 | 9:19 AM

Share
ಬೆಂಗಳೂರಲ್ಲಿ ನಿನ್ನೆ ಬೆಳಗ್ಗೆ ಸೂರ್ಯನ ಅಬ್ಬರ ಜೋರಾಗಿತ್ತು. ಇನ್ನೇನು ಮಳೆ ಬರಲ್ಲ ಎಂದು ವೀಕೆಂಡ್ ಮೂಡ್​​ಗೆ ಜಾರಿದ್ದ ಜನರಿಗೆ ವರುಣರಾಯ ಶಾಕ್ ನೀಡಿದ್ದಾನೆ. ಬೆಂಗಳೂರು ನಗರದಲ್ಲಿ 110.7 ಮಿಲಿ ಮೀಟರ್ ಮಳೆಯಾಗಿದೆ. ಬೆಂಗಳೂರಿನಾದ್ಯಂತ ಮಳೆಯಿಂದ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆಗೆ 206 ಮರಗಳು ಧರೆಗುರುಳಿವೆ. ನಿನ್ನೆ ರಾತ್ರಿ 8 ಗಂಟೆ ವೇಳೆಗೆ 118 ಮರಗಳು ಧರೆಗುರುಳಿದ್ದವು.

ಬೆಂಗಳೂರಲ್ಲಿ ನಿನ್ನೆ ಬೆಳಗ್ಗೆ ಸೂರ್ಯನ ಅಬ್ಬರ ಜೋರಾಗಿತ್ತು. ಇನ್ನೇನು ಮಳೆ ಬರಲ್ಲ ಎಂದು ವೀಕೆಂಡ್ ಮೂಡ್​​ಗೆ ಜಾರಿದ್ದ ಜನರಿಗೆ ವರುಣರಾಯ ಶಾಕ್ ನೀಡಿದ್ದಾನೆ. ಬೆಂಗಳೂರು ನಗರದಲ್ಲಿ 110.7 ಮಿಲಿ ಮೀಟರ್ ಮಳೆಯಾಗಿದೆ. ಬೆಂಗಳೂರಿನಾದ್ಯಂತ ಮಳೆಯಿಂದ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆಗೆ 206 ಮರಗಳು ಧರೆಗುರುಳಿವೆ. ನಿನ್ನೆ ರಾತ್ರಿ 8 ಗಂಟೆ ವೇಳೆಗೆ 118 ಮರಗಳು ಧರೆಗುರುಳಿದ್ದವು.

1 / 7
ಬಿರುಗಾಳಿ ಮಳೆಗೆ ಬೆಂಗಳೂರಿನ ಹಲವಡೆ ಮರಗಳು ಧರೆಗುರುಳಿವೆ. ಬಸವೇಶ್ವರನಗರದಲ್ಲಿ ಮರದ ಕೊಂಬೆ ಬಿದ್ದು, ಪಾನಿಪುರಿ ಅಂಗಡಿಗೆ ಹಾನಿಯಾಗಿದೆ. ಜಯನಗರದಲ್ಲಿ ಮರದ ಕೊಂಬೆ ಬೀಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಕೋರಮಂಗಲ ಬಳಿ ವಿದ್ಯುತ್‌ ಕಂಬ, ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ.

ಬಿರುಗಾಳಿ ಮಳೆಗೆ ಬೆಂಗಳೂರಿನ ಹಲವಡೆ ಮರಗಳು ಧರೆಗುರುಳಿವೆ. ಬಸವೇಶ್ವರನಗರದಲ್ಲಿ ಮರದ ಕೊಂಬೆ ಬಿದ್ದು, ಪಾನಿಪುರಿ ಅಂಗಡಿಗೆ ಹಾನಿಯಾಗಿದೆ. ಜಯನಗರದಲ್ಲಿ ಮರದ ಕೊಂಬೆ ಬೀಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಕೋರಮಂಗಲ ಬಳಿ ವಿದ್ಯುತ್‌ ಕಂಬ, ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ.

2 / 7
ಗಿರಿನಗರದ 13ನೇ ಕ್ರಾಸ್​ನಲ್ಲಿ ಬೃಹತ್ ಗಾತ್ರದ ಮರ ಉರುಳಿಬಿದ್ದಿದ್ದರಿಂದ ಕಾರು ನಜ್ಜುಗುಜ್ಜಾಗಿದ್ವು. ಮರದಡಿ ಸಿಲುಕಿ 2 ಬೈಕ್​ಗಳು ಜಖಂ ಆಗಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ರಾಮಕೃಷ್ಣ ಆಶ್ರಮ ಬಳಿ ಬೃಹತ್ ಮರ ಬಿದ್ದು ಕಾರು ಜಖಂಗೊಂಡಿದೆ.

ಗಿರಿನಗರದ 13ನೇ ಕ್ರಾಸ್​ನಲ್ಲಿ ಬೃಹತ್ ಗಾತ್ರದ ಮರ ಉರುಳಿಬಿದ್ದಿದ್ದರಿಂದ ಕಾರು ನಜ್ಜುಗುಜ್ಜಾಗಿದ್ವು. ಮರದಡಿ ಸಿಲುಕಿ 2 ಬೈಕ್​ಗಳು ಜಖಂ ಆಗಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ರಾಮಕೃಷ್ಣ ಆಶ್ರಮ ಬಳಿ ಬೃಹತ್ ಮರ ಬಿದ್ದು ಕಾರು ಜಖಂಗೊಂಡಿದೆ.

3 / 7
ಮಳೆಯ ಎಫೆಕ್ಟ್ ನಮ್ಮ ಮೆಟ್ರೋಗೂ ತಟ್ಟಿದೆ. ಟ್ರಿನಿಟಿ ನಿಲ್ದಾಣ ಹಾಗೂ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವಿನ ಟ್ರ್ಯಾಕ್ ಮೇಲೆ ಮರದ ಕೊಂಬೆ ಮುರಿದು ಬಿದಿತ್ತು. ಇದ್ರಿಂದ ಟ್ರಿನಿಟಿ-ಎಂಜಿ ರಸ್ತೆ ನಡುವಿನ ಸಂಪರ್ಕಕ್ಕೆ ಬ್ರೇಕ್ ಬಿದ್ದಿತ್ತು. ಸದ್ಯ ಸಿಬ್ಬಂದಿ ತಡರಾತ್ರಿ ಮರದ ಕೊಂಬೆಗಳನ್ನು ತೆರವು ಮಾಡಿದ್ದಾರೆ. ಇಂದು ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಇರಲಿದೆ. ಎಂದಿನಂತೆ ವೈಟ್​ಫೀಲ್ಡ್-ಚಲ್ಲಘಟ್ಟ ಮಾರ್ಗದಲ್ಲಿ ಮೆಟ್ರೋ ಸಂಚಾರ ಮಾಡಲಿದೆ.

ಮಳೆಯ ಎಫೆಕ್ಟ್ ನಮ್ಮ ಮೆಟ್ರೋಗೂ ತಟ್ಟಿದೆ. ಟ್ರಿನಿಟಿ ನಿಲ್ದಾಣ ಹಾಗೂ ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದ ನಡುವಿನ ಟ್ರ್ಯಾಕ್ ಮೇಲೆ ಮರದ ಕೊಂಬೆ ಮುರಿದು ಬಿದಿತ್ತು. ಇದ್ರಿಂದ ಟ್ರಿನಿಟಿ-ಎಂಜಿ ರಸ್ತೆ ನಡುವಿನ ಸಂಪರ್ಕಕ್ಕೆ ಬ್ರೇಕ್ ಬಿದ್ದಿತ್ತು. ಸದ್ಯ ಸಿಬ್ಬಂದಿ ತಡರಾತ್ರಿ ಮರದ ಕೊಂಬೆಗಳನ್ನು ತೆರವು ಮಾಡಿದ್ದಾರೆ. ಇಂದು ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಇರಲಿದೆ. ಎಂದಿನಂತೆ ವೈಟ್​ಫೀಲ್ಡ್-ಚಲ್ಲಘಟ್ಟ ಮಾರ್ಗದಲ್ಲಿ ಮೆಟ್ರೋ ಸಂಚಾರ ಮಾಡಲಿದೆ.

4 / 7
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಗಾಂಧಿ ಬಜಾರ್ ಕೋಆಪರೇಟಿವ್ ಬ್ಯಾಂಕ್ ಬಳಿ ಮರಗಳು ಧರೆಗುರುಳಿವೆ. ತುಮಕೂರು ರಿಜಿಸ್ಟ್ರೇಷನ್ ಹೊಂದಿರುವ ಐ-10 ಕಾರು ಜಖಂಗೊಂಡಿದೆ. ಮಳೆ ಆರ್ಭಟಕ್ಕೆ ಶಿವಾನಂದ ಸರ್ಕಲ್​ನ ರೈಲ್ವೆ ಅಂಡರ್ ಪಾಸ್​ನಲ್ಲಿ ಜಲಪಾತವೇ ಸೃಷ್ಟಿಯಾಗಿತ್ತು. ಕ್ಷಣಾರ್ಧದಲ್ಲಿ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಇದೇ ವೇಳೆ ಬಂದ ಬಿಎಂಟಿಸಿ ಬಸ್ ಒಳಗೆ ನೀರು ನುಗ್ಗಿಕೆಟ್ಟು ನಿಲ್ತು. 20ಕ್ಕೂ ಹೆಚ್ಚು ಪ್ರಯಾಣಿಕರು ಪಾರಾದ್ರು.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಗಾಂಧಿ ಬಜಾರ್ ಕೋಆಪರೇಟಿವ್ ಬ್ಯಾಂಕ್ ಬಳಿ ಮರಗಳು ಧರೆಗುರುಳಿವೆ. ತುಮಕೂರು ರಿಜಿಸ್ಟ್ರೇಷನ್ ಹೊಂದಿರುವ ಐ-10 ಕಾರು ಜಖಂಗೊಂಡಿದೆ. ಮಳೆ ಆರ್ಭಟಕ್ಕೆ ಶಿವಾನಂದ ಸರ್ಕಲ್​ನ ರೈಲ್ವೆ ಅಂಡರ್ ಪಾಸ್​ನಲ್ಲಿ ಜಲಪಾತವೇ ಸೃಷ್ಟಿಯಾಗಿತ್ತು. ಕ್ಷಣಾರ್ಧದಲ್ಲಿ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಇದೇ ವೇಳೆ ಬಂದ ಬಿಎಂಟಿಸಿ ಬಸ್ ಒಳಗೆ ನೀರು ನುಗ್ಗಿಕೆಟ್ಟು ನಿಲ್ತು. 20ಕ್ಕೂ ಹೆಚ್ಚು ಪ್ರಯಾಣಿಕರು ಪಾರಾದ್ರು.

5 / 7
ರಣಮಳೆಗೆ ಸ್ಮಾರ್ಟ್ ಸಿಟಿ, ಬ್ರ್ಯಾಂಡ್ ಬೆಂಗಳೂರಿನ ಬಂಡವಾಳ ಬಯಲಾಯ್ತು. ಯಾವ ರಸ್ತೆಗೆ ಕಾಲಿಟ್ರೂ ನೀರು ಪ್ರವಾಹದಂತೆ ಹರೀತಿತ್ತು. ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಜಯನಗರ,  ಹೆಬ್ಬಾಳ ಸೇರಿದಂತೆ ಹಲವು ರಸ್ತೆಗಳಲ್ಲಿ ಮಂಡಿಯುದ್ದ ಅಡಿಯಷ್ಟು ನೀರು ನಿಂತಿತ್ತು. ಇಡೀ ರಸ್ತೆಗಳೇ ನದಿಯಂತಾಗಿದ್ವು.

ರಣಮಳೆಗೆ ಸ್ಮಾರ್ಟ್ ಸಿಟಿ, ಬ್ರ್ಯಾಂಡ್ ಬೆಂಗಳೂರಿನ ಬಂಡವಾಳ ಬಯಲಾಯ್ತು. ಯಾವ ರಸ್ತೆಗೆ ಕಾಲಿಟ್ರೂ ನೀರು ಪ್ರವಾಹದಂತೆ ಹರೀತಿತ್ತು. ಮಾರ್ಕೆಟ್, ಮೆಜೆಸ್ಟಿಕ್, ಶಾಂತಿನಗರ, ಜಯನಗರ, ಹೆಬ್ಬಾಳ ಸೇರಿದಂತೆ ಹಲವು ರಸ್ತೆಗಳಲ್ಲಿ ಮಂಡಿಯುದ್ದ ಅಡಿಯಷ್ಟು ನೀರು ನಿಂತಿತ್ತು. ಇಡೀ ರಸ್ತೆಗಳೇ ನದಿಯಂತಾಗಿದ್ವು.

6 / 7
ವರುಣಾರ್ಭಟಕ್ಕೆ ಹೈರಾಣಾಗಿದ್ದು ಬೈಕ್ ಸವಾರರು. ಸೈಲೆನ್ಸರ್​ಗೆ ನೀರು ನುಗ್ಗಿ ಹತ್ತಾರು ವಾಹನಗಳು ಕೆಟ್ಟು ನಿಂತಿವು. ಸವಾರರು ಮಳೆಯಲ್ಲೇ ಗಾಡಿಗಳನ್ನ ತಳ್ಳುತ್ತಾ ಹೆಣಗಾಡಿದ್ರು. ಇನ್ನೂ ಕೆ.ಪಿ.ಅಗ್ರಹಾರದ ಕಲ್ಯಾಣಿ ರಸ್ತೆಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದ್ದು, ನೀರು ಹೊರಹಾಕಲು ನಿವಾಸಿಗಳು ಪರದಾಡಿದ್ರು.

ವರುಣಾರ್ಭಟಕ್ಕೆ ಹೈರಾಣಾಗಿದ್ದು ಬೈಕ್ ಸವಾರರು. ಸೈಲೆನ್ಸರ್​ಗೆ ನೀರು ನುಗ್ಗಿ ಹತ್ತಾರು ವಾಹನಗಳು ಕೆಟ್ಟು ನಿಂತಿವು. ಸವಾರರು ಮಳೆಯಲ್ಲೇ ಗಾಡಿಗಳನ್ನ ತಳ್ಳುತ್ತಾ ಹೆಣಗಾಡಿದ್ರು. ಇನ್ನೂ ಕೆ.ಪಿ.ಅಗ್ರಹಾರದ ಕಲ್ಯಾಣಿ ರಸ್ತೆಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದ್ದು, ನೀರು ಹೊರಹಾಕಲು ನಿವಾಸಿಗಳು ಪರದಾಡಿದ್ರು.

7 / 7

Published On - 7:23 am, Mon, 3 June 24

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ