AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಳೆಯಿಂದ ರಸ್ತೆಗಳಲ್ಲಿ ನಿಂತ ನೀರು, ವಾಹನ ಸಂಚಾರಕ್ಕೆ ಅಡಚಣೆ

ಬೆಂಗಳೂರು ನಗರದಲ್ಲಿ ನಸುಕಿನ ಜಾವ ಮಳೆರಾಯನ ಆರ್ಭಟ ಜೋರಾಗಿತ್ತು. ಇದೀಗ ಮಳೆ ಸ್ವಲ್ಪ ಕಡಿಮೆಯಾಗಿದ್ದು, ಜಿಟಿ ಜಿಟಿ ಮಳೆಯಾಗುತ್ತಿದೆ. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಾಗಿದ್ದರೆ ಯಾವ ರಸ್ತೆಯಲ್ಲಿ ನೀರು ನಿಂತಿದೆ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ? ಇಲ್ಲಿದೆ ಮಾಹಿತಿ

ವಿವೇಕ ಬಿರಾದಾರ
|

Updated on:Oct 20, 2024 | 9:05 AM

Share
Bengaluru Rain Emergency: Traffic Advisory, Due to rain vehicle slow moving in Bengaluru roads, Kannada News

ಬೆಂಗಳೂರು ನಗರದಲ್ಲಿ ನಸುಕಿನ ಜಾವ ಮಳೆರಾಯನ ಆರ್ಭಟ ಜೋರಾಗಿತ್ತು. ಗುಡು, ಮಿಂಚು ಸಹಿತ ಭಾರಿ ಮಳೆಯಾಯ್ತು. ಇದೀಗ ಮಳೆ ಸ್ವಲ್ಪ ಕಡಿಮೆಯಾಗಿದ್ದು, ಜಿಟಿ ಜಿಟಿ ಮಳೆಯಾಗುತ್ತಿದೆ. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

1 / 6
Bengaluru Rain Emergency: Traffic Advisory, Due to rain vehicle slow moving in Bengaluru roads, Kannada News

ಜೈರಾಮ್ ಜಂಕ್ಷನ್​ ಆರ್‌ವಿ ಕಾಲೇಜಿನ ಎರಡೂ ಕಡೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

2 / 6
Bengaluru Rain Emergency: Traffic Advisory, Due to rain vehicle slow moving in Bengaluru roads, Kannada News

ಮೈಸೂರು ರಸ್ತೆಯ ಜಯರಾಮದಾಸ್ ಜಂಕ್ಷನ್ ಹತ್ತಿರ ನೀರು ನಿಂತಿರುವುದರಿಂದ ಬೆಂಗಳೂರು ನಗರ ಮತ್ತು ಕೆಂಗೇರಿ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಹೀಗಾಗಿ ವಾಹನ ಸವಾರರು ಸಹಕರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

3 / 6
Bengaluru Rain Emergency: Traffic Advisory, Due to rain vehicle slow moving in Bengaluru roads, Kannada News

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಬಳಿ ವಾಟರ್ ಲಾಗಿಂಗ್ ಆಗಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

4 / 6
Bengaluru Rain Emergency: Traffic Advisory, Due to rain vehicle slow moving in Bengaluru roads, Kannada News

ಮಳೆಯಿಂದ ವರ್ತುರ್- ಗುಂಜೂರಿನ ಎರಡೂ ಕಡೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

5 / 6
Bengaluru Rain Emergency: Traffic Advisory, Due to rain vehicle slow moving in Bengaluru roads, Kannada News

ಮಳೆಯಿಂದಾಗಿ ಸಿಲ್ಕ್​ಬೋರ್ಡ್​ ಜಂಕ್ಷನ್​​ ರಸ್ತೆ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್​ಬೋರ್ಡ್​ ಜಂಕ್ಷನ್ ಬಳಿ ಟ್ರಾಫಿಕ್​​ ಜಾಮ್​​ ಆಗಿದೆ. ಚರಂಡಿಗೆ ಹಾಕಿದ್ದ ಸ್ಲ್ಯಾಬ್​​​​ಗಳು ಓಪನ್ ಆಗಿ, ಅದರಿಂದ ನೀರು ಹೊರಬಂದು ಅವಾಂತರ ಸೃಷ್ಟಿಯಾಗಿದೆ. ಇದರಿಂದ ಬೊಮ್ಮನಹಳ್ಳಿಯಿಂದ ಸಿಲ್ಕ್​​ಬೋರ್ಡ್​ವರೆಗೆ ನಿಧಾನಗತಿಯ ಸಂಚಾರವಿರುತ್ತದೆ.

6 / 6

Published On - 9:01 am, Sun, 20 October 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು