ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM
Share

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮರಳಿದ ಮಲ್ಲಮ್ಮ; ಅಟ್ಯಾಟ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
