ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಅಂಡರ್ ಪಾಸ್ಗಳಲ್ಲಿ ತುಂಬಿದ ಮಳೆ ನೀರು
ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.
Updated on: May 23, 2023 | 10:02 PM
Share

ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಮತ್ತೆ ಮಳೆ ಆಗಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಶಾಂತಿನಗರ, ಜಯನಗರ ವಿಜಯನಗರ, ಬನಶಂಕರಿ, ಹೆಬ್ಬಾಳ, ರಾಜಾಜಿನಗರ ಸೇರಿದಂತೆ ಹಲವೆಡೆ ವರ್ಷಧಾರೆ ಉಂಟಾಗಿದೆ.

ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದು, ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಮಳೆ ಹಿನ್ನೆಲೆ ನಗರದ ಅಂಡರ್ ಪಾಸ್ಗಳಲ್ಲಿ ಮಳೆ ನೀರು ತುಂಬಿದೆ. ಶಿವಾನಂದ ಸರ್ಕಲ್ ಬಳಿಯ ರೈಲ್ವೇ ಅಂಡರ್ ಪಾಸ್ನಲ್ಲಿ ಮಳೆ ನೀರು ಆವರಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಹ ಸೋಮವಾರ ವರುಣ ಆರ್ಭಟಿಸಿದ್ದು, ಕೆಲ ಸಾವು ನೋವುಗಳು ಸಂಭವಿಸಿವೆ. ಜೊತೆಗೆ ಮನೆಗಳು ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದು, ವಾಹನಗಳು ಜಖಂ ಆಗಿವೆ.

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Related Photo Gallery
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ




