Bengaluru Rains: ಮಳೆಗೆ ಮುಳುಗುತ್ತಿದೆ ರಾಜ್ಯ ರಾಜಧಾನಿ, ಫೋಟೋಗಳಲ್ಲಿ ನೋಡಿ

Edited By: ಆಯೇಷಾ ಬಾನು

Updated on: Sep 05, 2022 | 10:45 PM

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

1 / 6
ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸುತ್ತಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

2 / 6
ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿ ವರ್ಷಧಾರೆಗೆ ರಸ್ತೆಗಳು ಕೆರೆಯಂತಾಗಿದ್ದು, ಬಿಎಂಟಿಸಿ ನೀರಲ್ಲೇ ಲಾಕ್​ ಆಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಬಿಎಂಟಿಸಿ ಬಸ್​​ನ್ನ ಹೊರತೆಗೆದಿದ್ದಾರೆ.

ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿ ವರ್ಷಧಾರೆಗೆ ರಸ್ತೆಗಳು ಕೆರೆಯಂತಾಗಿದ್ದು, ಬಿಎಂಟಿಸಿ ನೀರಲ್ಲೇ ಲಾಕ್​ ಆಗಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಹಗ್ಗದ ಸಹಾಯದಿಂದ ಬಿಎಂಟಿಸಿ ಬಸ್​​ನ್ನ ಹೊರತೆಗೆದಿದ್ದಾರೆ.

3 / 6
ರೈನ್​ ಬೋ ಲೇಔಟ್​ನ​ ಪ್ರಮುಖ ರಸ್ತೆಯಲ್ಲಿ ಈಗ ಬೋಟ್​ಗಳು ಸಂಚಾರ ಮಾಡುವಂತಾಗಿದೆ. ರಸ್ತೆ ಮೇಲೆ ಮೂರ್ನಾಲ್ಕು ಅಡಿಗಳಷ್ಟು ನೀರು ನಿಂತಿದ್ರಿಂದ ಎಲ್ಲವೂ ಜಲಸ್ವಾಹ ಆಗಿದೆ. ಹೀಗಾಗಿ ಜನರು  ಬೋಟ್​ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇಷ್ಟೇ ಅಲ್ಲ ರಸ್ತೆ ಮೇಲೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕೂಡ ನೀರಲ್ಲಿ ಮುಳುಗಿ ಹೋಗಿವೆ.

ರೈನ್​ ಬೋ ಲೇಔಟ್​ನ​ ಪ್ರಮುಖ ರಸ್ತೆಯಲ್ಲಿ ಈಗ ಬೋಟ್​ಗಳು ಸಂಚಾರ ಮಾಡುವಂತಾಗಿದೆ. ರಸ್ತೆ ಮೇಲೆ ಮೂರ್ನಾಲ್ಕು ಅಡಿಗಳಷ್ಟು ನೀರು ನಿಂತಿದ್ರಿಂದ ಎಲ್ಲವೂ ಜಲಸ್ವಾಹ ಆಗಿದೆ. ಹೀಗಾಗಿ ಜನರು ಬೋಟ್​ಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇಷ್ಟೇ ಅಲ್ಲ ರಸ್ತೆ ಮೇಲೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಕೂಡ ನೀರಲ್ಲಿ ಮುಳುಗಿ ಹೋಗಿವೆ.

4 / 6
ಮಾರತ್ತಹಳ್ಳಿ-ಸರ್ಜಾಪುರ ಔಟರ್​ ರಿಂಗ್ ರಸ್ತೆ ಥೇಟ್​ ಹಳ್ಳದಂತೆ ನೀರು ಹರಿಯುತ್ತಿದೆ. ಪ್ರಯಾಣಿಕರು & ಸವಾರರು ಜೀವ ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಇಷ್ಟೇ ಅಲ್ಲ ಇದೇ ನೀರಿನಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದು, ಸವಾರರಿಗೆ ಪೀಕಲಾಟ ತಂದಿಟ್ಟಿದೆ.

ಮಾರತ್ತಹಳ್ಳಿ-ಸರ್ಜಾಪುರ ಔಟರ್​ ರಿಂಗ್ ರಸ್ತೆ ಥೇಟ್​ ಹಳ್ಳದಂತೆ ನೀರು ಹರಿಯುತ್ತಿದೆ. ಪ್ರಯಾಣಿಕರು & ಸವಾರರು ಜೀವ ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಇಷ್ಟೇ ಅಲ್ಲ ಇದೇ ನೀರಿನಿಂದ ಹಲವು ವಾಹನಗಳು ಕೆಟ್ಟು ನಿಂತಿದ್ದು, ಸವಾರರಿಗೆ ಪೀಕಲಾಟ ತಂದಿಟ್ಟಿದೆ.

5 / 6
ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

ಮಾರತಹಳ್ಳಿ ಸರ್ಜಾಪುರ ಔಟರ್ ರಿಂಗ್ ರೋಡ್​ನಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮಳೆ ನೀರು ನಿಲ್ಲುತ್ತಿದೆ. ಇದರಿಂದಾಗಿ ಐಟಿ ಕಂಪನಿಗಳಿಗೆ ಭಾರೀ ನಷ್ಟವಾಗಿದ್ದು, ಕಂಪನಿಗಳ ಸಂಘವೇ ಹೇಳುವಂತೆ ಸುಮಾರು 225 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ.

6 / 6
ಬೆಳ್ಳಂದೂರಿನಲ್ಲಿ ಮಳೆ ಎಫೆಕ್ಟ್ ಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ವಾಹನಗಳು ಮುಳುಗಿವೆ

ಬೆಳ್ಳಂದೂರಿನಲ್ಲಿ ಮಳೆ ಎಫೆಕ್ಟ್ ಗೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ವಾಹನಗಳು ಮುಳುಗಿವೆ

Published On - 10:45 pm, Mon, 5 September 22

Web contact

TV9 Kannada

Read More
Follow Us