AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain in Bengaluru: ಬೆಂಗಳೂರಿನಲ್ಲಿ ಮತ್ತೆ ಮಳೆ ಅಬ್ಬರ: ಒಂದೇ ದಿನ ಧರೆಗುರುಳಿದ 32 ಮರಗಳು

ನಾಳೆಯಿಂದ ರಾಜಾಧಾನಿಗೆ ಮುಂಗಾರು ಮಾರುತ ಪ್ರವೇಶಿಸುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಇಂದಿನಿಂದಲೇ ಮಳೆ ಅಬ್ಬರ ಶುರುವಾಗಿದೆ. ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದಾಗಿ ನಗರದ ಹಲವೆಡೆ ಕೆಲ ಅವಾಂತರಗಳು ಸಂಭವಿಸಿವೆ.

ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on:Jun 01, 2024 | 9:24 PM

Share
ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

ಕಳೆದ ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಇಂದು ಮತ್ತೆ ಜೋರು ಮಳೆ ಆಗಿದೆ. ನೆತ್ತಿ ಸುಡುತ್ತಿದ್ದ ಬಿಸಿಲಿಗೆ ಮಳೆ ಸುರಿದು ತಂಪೆರೆದಿದೆ. ವೀಕೆಂಡ್​ ಮೂಡ್​ನಲ್ಲಿ ಜನರು ಮಳೆಯ ಆಗಮನದಿಂದ ಶಾಕ್​ ಆಗಿದ್ದಾರೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್​ ಸಿಟಿ ನಲುಗಿಹೋಗ್ತಿದೆ. ಮಳೆ ಬಂದ್ರೂ ಕಷ್ಟ, ಬಾರದಿದ್ರೂ ಕಷ್ಟ ಎಂಬಂತಾಗಿದೆ ಸ್ಮಾರ್ಟ್ ಸಿಟಿ ಪರಿಸ್ಥಿತಿ.

1 / 6
ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

ವಾರದ ಬಳಿಕ ಮತ್ತೆ ಎಂಟ್ರಿಕೊಟ್ಟ ಮಳೆರಾಯ, ಸಿಟಿ ಮಂದಿಯನ್ನೇ ಥರಗುಟ್ಟುವಂತೆ ಮಾಡಿದ್ದಾನೆ. ವಾಹನ ಸವಾರರಂತೂ ಮಳೆ ನಡುವೆ ಸಿಲುಕಿ ಪರದಾಡಿ ಹೋಗಿದ್ದಾರೆ.

2 / 6
ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

ಮಳೆಯ ಆರ್ಭಟಕ್ಕೆ ನಗರದ ವಿವಿಧೆಡೆ 32 ಮರಗಳು ಧರೆಗುರುಳಿದ್ದು, ಬಿಬಿಎಂಪಿ ಕಂಟ್ರೋಲ್ ರೂಮ್​ನ ಹೆಲ್ಪ್ ಲೈನ್​ಗೆ ದೂರು ಬಂದಿವೆ. ದೂರು ಬಂದ ಬೆನ್ನಲ್ಲೇ ಬಿಬಿಎಂಪಿ ಸಿಬ್ಬಂದಿಗಳು 18 ಕಡೆ ಮರ ತೆರವು ಮಾಡಿದ್ದಾರೆ.

3 / 6
ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಗೊರಗುಂಟೆಪಾಳ್ಯ ಸಮೀಪ ಇರುವ ರಾಘವೇಂದ್ರ ಲೇಔಟ್‌ನಲ್ಲಿ ರಸ್ತೆ ಕೆರೆಯಂತಾಗಿದೆ. ರಸ್ತೆ ಜಲಾವೃತವಾದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ.

4 / 6
ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

ಇಂದು ಸಂಜೆಯಿಂದಲೇ ಬೆಂಗಳೂರಲ್ಲಿ ಮಳೆ ಅಬ್ಬರಿಸಿದೆ. ಗಾಳಿ ಸಹಿತ ಭಾರಿ ಮಳೆಗೆ ನಗರದೆಲ್ಲೆಡೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೋರು ಮಳೆ ಹಿನ್ನೆಲೆ ಫ್ಲೈಓವರ್​​ ಕೆಳಗೆ ಆಶ್ರಯ ಪಡೆದಿದ್ದರು.

5 / 6
ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

ನಗರದಲ್ಲಿ ಇನ್ನೂ 4ದಿನ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಅಂತ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಪ್ರವೇಶವಾಗುತ್ತಿದೆ.

6 / 6

Published On - 9:23 pm, Sat, 1 June 24

Shanthamurthy
Shanthamurthy
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ