AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ: ಮನೆ ಮೇಲೆ ಬಿದ್ದ ಮರ, ರಸ್ತೆ ಜಲಾವೃತ, ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೆಲವೆಡೆ ಬೃಹತ್​ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಅಲ್ಲಲ್ಲಿ ನಿಧಾನಗತಿಯ ಸಂಚಾರವಿರಲಿದೆ. ಇನ್ನು ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ದೊಡ್ಡ ಮರ ಬಿದ್ದಿದೆ. ಇಲ್ಲಿವೆ ಫೋಟೋಸ್​ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 9:10 AM

Share
ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

1 / 6
ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. 
ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

2 / 6
ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

3 / 6
ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

4 / 6
ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

5 / 6
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

6 / 6

Published On - 9:10 am, Thu, 11 September 25

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ