AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಯಿಂದ ಅವಾಂತರ: ಮನೆ ಮೇಲೆ ಬಿದ್ದ ಮರ, ರಸ್ತೆ ಜಲಾವೃತ, ಇಲ್ಲಿವೆ ಫೋಟೋಸ್

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ. ಕೆಲವೆಡೆ ಬೃಹತ್​ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಅಲ್ಲಲ್ಲಿ ನಿಧಾನಗತಿಯ ಸಂಚಾರವಿರಲಿದೆ. ಇನ್ನು ರಾಜಾಜಿನಗರದ 4ನೇ ಬ್ಲಾಕ್‌ನಲ್ಲಿ ಎರಡು ಮನೆಗಳ ಮೇಲೆ ದೊಡ್ಡ ಮರ ಬಿದ್ದಿದೆ. ಇಲ್ಲಿವೆ ಫೋಟೋಸ್​ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Sep 11, 2025 | 9:10 AM

Share
ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಬೆಂಗಳೂರಿನಲ್ಲಿ ಬುಧವಾರದಂದು ಸಂಜೆಯವರೆಗೂ ಮಳೆಯ ಮುನ್ಸೂಚನೆ ಇರಲಿಲ್ಲ. ಆದರೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ನಗರದ ಹಲವೆಡೆ ಸುರಿದ ಮಳೆ ರಸ್ತೆಗಳು ಜಲಾವೃತಗೊಂಡಿವೆ. ಬೃಹತ್​ ಮರಗಳು ಧರೆಗುರುಳಿವೆ. ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

1 / 6
ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. 
ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರಾತ್ರಿ ಸುರಿದ ಮಳೆಯಿಂದಾಗಿ ರಾಜಾಜಿನಗರದ 4ನೇ ಬ್ಲಾಕ್​​ನ ಎರಡು ಮನೆಗಳ ಮೇಲೆ ಬೃಹತ್ ಮರ ಧರೆಗುರುಳಿದೆ. ಚಂದ್ರಮ್ಮ ಮತ್ತು ಪೀಟರ್​ ಎಂಬುವರ ಮನೆಗಳ ಮೇಲೆ ಬೃಹತ್ ಮರ ಬಿದ್ದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

2 / 6
ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

ಇನ್ನು ಮನೆಗಳ ಮೇಲೆ ಮರ ಬಿದ್ದ ಪರಿಣಾಮ 2 ಕುಟುಂಬಗಳಿಗೆ ದಿಗ್ಬಂಧನ ಎದುರಾಗಿದೆ. ಮನೆಯಿಂದ ಹೊರಬರಲಾಗದೆ ಪರದಾಟ ನಡೆಸಿದ್ದಾರೆ. ಮರ ಬಿದ್ದು 5 ಕಾರು, ಟಾಟಾ ಏಸ್​ ವಾಹನ, 3 ರಿಂದ 4 ಬೈಕ್​ಗಳು ಜಖಂಗೊಂಡಿವೆ.

3 / 6
ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ಮನೆಗಳ ಮೇಲೆ ಮರ ಬಿದ್ದಿದೆ. ಮರ ಬಿದ್ದಿದ್ದರಿಂದ ಮನೆಯಿಂದ ಹೊರಗೆ ಬರಲು ಆಗಲಿಲ್ಲ. ಬಿಬಿಎಂಪಿ, ಹೊಯ್ಸಳ, ಬೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ್ದೆವು. ಯಾರೂ ಕೂಡ ಬರಲಿಲ್ಲ ಎಂದು ಓರ್ವ ಮಹಿಳೆ ಅಳಲು ತೋಡಿಕೊಂಡಿದ್ದಾರೆ.

4 / 6
ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಮರ ಉರುಳಿದ್ದರಿಂದ 5ನೇ ಮುಖ್ಯ ರಸ್ತೆ ಚಾಮರಾಜಪೇಟೆಯಿಂದ 4ನೇ ಮುಖ್ಯ ರಸ್ತೆಯ ಕಡೆಗೆ ಹೋಗುವ ರಸ್ತೆಯನ್ನು ಬಂದ್​​ ಮಾಡಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.

5 / 6
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಹಾಗಾಗಿ ನಿಧಾಗತಿಯ ಸಂಚಾರವಿರುವುದಾಗಿ ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

6 / 6

Published On - 9:10 am, Thu, 11 September 25

Follow Us
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಲಾರಿ ಪಲ್ಟಿಯಾಗುತ್ತಿದ್ದಂತೆ ಕೂಲ್ ಡ್ರಿಂಕ್ಸ್​ ಬಾಟಲಿಗಳನ್ನು ದೋಚಿದ ಜನ!
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಎರಡು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ: ಕೊನೆಗೆ ಆಕೆಯನ್ನ ಕೊಂದೇ ಬಿಟ್ಟ
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಮಗಳನ್ನು ಶಾಲೆಗೆ ಬಿಟ್ಟ ಮಹಿಳೆಗೆ ಥಳಿಸಿ ಚಿನ್ನ ಕದ್ದ ಕಳ್ಳರು!
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ