AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಸ್ತೆ ಗುಂಡಿ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್, ಅಧಿಕಾರಿಗಳ ವಿರುದ್ಧ ಸಿದ್ದು ಸಿಡಿಮಿಡಿ

ಬೆಂಗಳೂರು, ಸೆಪ್ಟೆಂಬರ್ 27: ರಾಜಧಾನಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ಬಗ್ಗೆ ‘ಟಿವಿ9’ ನಿರಂತರ ಅಭಿಯಾನದ ಮೂಲಕ ಸರ್ಕಾರದ ಕಣ್ಣುತೆರೆಸುವ ಕೆಲಸ ಮಾಡಿತ್ತು. ಐಟಿಸಿಟಿಯ ಗುಂಡಿ ಬಿದ್ದ ರಸ್ತೆಗಳನ್ನು ‘ಏನ್ ರೋಡ್ ಗುರು’ ಅಭಿಯಾನದ ಮೂಲಕ ತೆರೆದಿಡುವ ಕೆಲಸ ಮಾಡಿತ್ತು. ಈ ಅಭಿಯಾನದ ಬೆನ್ನಲ್ಲೆ ಅಲರ್ಟ್ ಆದ ಸರ್ಕಾರ ರಾಜಧಾನಿಯ ರಸ್ತೆಗಳ ಮೇಲೆ ಗಮನಹರಿಸಲು ಹೊರಟಿದೆ. ಖುದ್ದು ಯಾವೇ ಫೀಲ್ಡ್ ಗಿಳಿದ ಸಿಎಂ ಸಿದ್ದರಾಮಯ್ಯ ಶನಿವಾರ ಸಿಟಿ ರೌಂಡ್ಸ್ ನಡೆಸುವ ಮೂಲಕ ರಾಜಧಾನಿಯ ರಸ್ತೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ್ದಾರೆ.

ಗಣಪತಿ ಶರ್ಮಾ
|

Updated on: Sep 27, 2025 | 7:16 PM

Share
ಬೆಂಗಳೂರಿನ ಹಲವು ರಸ್ತೆಗಳಲ್ಲಿನ ಗುಂಡಿ ಗಂಡಾಂತರದ ಬಗ್ಗೆ ಟಿವಿ9 ನಿರಂತರ ವರದಿ ಬಿತ್ತರಿಸಿದ ಬೆನ್ನಲ್ಲೇ ಎಚ್ಚೆತ್ತ ಜಿಬಿಎ ಹಲವೆಡೆ ಗುಂಡಿಗಳಿಗೆ ತೇಪೆ ಹಚ್ಚುವ ಕೆಲಸ ಮಾಡಿತ್ತು. ಇದೀಗ ರಾಜಧಾನಿಯ ರಸ್ತೆಗಳನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿದ್ದಾರೆ. ಶನಿವಾರ ಮಧ್ಯಾಹ್ನ ಜಿಬಿಎ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ನಡೆಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಪ್ರಮುಖ ರಸ್ತೆಗಳ ಸ್ಥಿತಿಗತಿಗಳನ್ನ ಪರಿಶೀಲಿಸಿದ್ದಾರೆ.

ಬೆಂಗಳೂರಿನ ಹಲವು ರಸ್ತೆಗಳಲ್ಲಿನ ಗುಂಡಿ ಗಂಡಾಂತರದ ಬಗ್ಗೆ ಟಿವಿ9 ನಿರಂತರ ವರದಿ ಬಿತ್ತರಿಸಿದ ಬೆನ್ನಲ್ಲೇ ಎಚ್ಚೆತ್ತ ಜಿಬಿಎ ಹಲವೆಡೆ ಗುಂಡಿಗಳಿಗೆ ತೇಪೆ ಹಚ್ಚುವ ಕೆಲಸ ಮಾಡಿತ್ತು. ಇದೀಗ ರಾಜಧಾನಿಯ ರಸ್ತೆಗಳನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಪರಿಶೀಲಿಸಿದ್ದಾರೆ. ಶನಿವಾರ ಮಧ್ಯಾಹ್ನ ಜಿಬಿಎ ಅಧಿಕಾರಿಗಳ ಜೊತೆ ಸಿಟಿ ರೌಂಡ್ಸ್ ನಡೆಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಪ್ರಮುಖ ರಸ್ತೆಗಳ ಸ್ಥಿತಿಗತಿಗಳನ್ನ ಪರಿಶೀಲಿಸಿದ್ದಾರೆ.

1 / 5
ಕೃಷ್ಣಾ ನಿವಾಸದಿಂದ ಸಿಟಿರೌಂಡ್ಸ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ ವಿಂಡ್ಸರ್ ಮ್ಯಾನರ್, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ ರೌಂಡ್ಸ್ ಹಾಕಿದರು. ಈ ವೇಳೆ ರಸ್ತೆ ಬದಿಯೇ ತ್ಯಾಜ್ಯ, ಕಸ ಹಾಕಿರೋದನ್ನು ಕಂಡು ಗರಂ ಆದ ಸಿದ್ದರಾಮಯ್ಯ, ಜಿಬಿಎ ಕಮಿಷನರ್ ಹಾಗೂ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು. ಕಸ ಹಾಕಿರೋದನ್ನು ನೋಡಬಾರದ ಎಂದು ಇಂಜಿನಿಯರ್​ಗೆ ಗದರಿದ ಸಿಎಂ, ಇಂಜಿನಿಯರ್ ಮೇಲೆ ಕೇಸ್ ಹಾಕುತ್ತೇವೆ ಎಂದು ಕಿಡಿಕಾರಿದರು. ಇತ್ತ ಬೆನ್ನಿಗಾನಹಳ್ಳಿ ಫ್ಲೈ ಓವರ್ ಮೂಲಕ ತೆರಳಿದ ಸಿಎಂ ಸಿದ್ದರಾಮಯ್ಯ, ರಸ್ತೆ ಮಧ್ಯೆ ವಾಹನಗಳ ಮಧ್ಯೆ ಸಿಲುಕಿದ ಆಂಬುಲೆನ್ಸ್ ಗಳಿಗೆ ದಾರಿ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದರು.

ಕೃಷ್ಣಾ ನಿವಾಸದಿಂದ ಸಿಟಿರೌಂಡ್ಸ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ ವಿಂಡ್ಸರ್ ಮ್ಯಾನರ್, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ ರೌಂಡ್ಸ್ ಹಾಕಿದರು. ಈ ವೇಳೆ ರಸ್ತೆ ಬದಿಯೇ ತ್ಯಾಜ್ಯ, ಕಸ ಹಾಕಿರೋದನ್ನು ಕಂಡು ಗರಂ ಆದ ಸಿದ್ದರಾಮಯ್ಯ, ಜಿಬಿಎ ಕಮಿಷನರ್ ಹಾಗೂ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು. ಕಸ ಹಾಕಿರೋದನ್ನು ನೋಡಬಾರದ ಎಂದು ಇಂಜಿನಿಯರ್​ಗೆ ಗದರಿದ ಸಿಎಂ, ಇಂಜಿನಿಯರ್ ಮೇಲೆ ಕೇಸ್ ಹಾಕುತ್ತೇವೆ ಎಂದು ಕಿಡಿಕಾರಿದರು. ಇತ್ತ ಬೆನ್ನಿಗಾನಹಳ್ಳಿ ಫ್ಲೈ ಓವರ್ ಮೂಲಕ ತೆರಳಿದ ಸಿಎಂ ಸಿದ್ದರಾಮಯ್ಯ, ರಸ್ತೆ ಮಧ್ಯೆ ವಾಹನಗಳ ಮಧ್ಯೆ ಸಿಲುಕಿದ ಆಂಬುಲೆನ್ಸ್ ಗಳಿಗೆ ದಾರಿ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದರು.

2 / 5
ಬಳಗೆರೆಯ ರಸ್ತೆಯಲ್ಲೇ ಸಾಗಿದ ಸಿಎಂ ಸಿದ್ದರಾಮಯ್ಯ ಈ ಮಾರ್ಗದ ರಸ್ತೆಗಳಲ್ಲಿ ಆಗಿರುವ ಟಾರ್ ಹಾಕುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು. ಇತ್ತ ವಿಬ್ ಗಯರ್ ಸ್ಕೂಲ್ ರಸ್ತೆ ಸೇರಿ ಹಲವೆಡೆ ರಸ್ತೆಗುಂಡಿಗಳನ್ನ ಮುಚ್ಚುವ ಕೆಲಸದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಗುಂಡಿಬಿದ್ದ ರಸ್ತೆಗಳನ್ನ ಸರಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತ ಕೆಲವೆಡೆ ಟಾರ್ ಸರಿಯಾಗಿ ಹಾಕಿಲ್ಲ ಅಂತಾ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ಆಯಾ ಗುತ್ತಿಗೆದಾರರು ರಸ್ತೆಗಳನ್ನ ಸರಿಯಾಗಿ ನಿರ್ವಹಣೆ ಮಾಡಬೇಕು ಅಂತಾ ಸೂಚನೆ ನೀಡಿದರು.

ಬಳಗೆರೆಯ ರಸ್ತೆಯಲ್ಲೇ ಸಾಗಿದ ಸಿಎಂ ಸಿದ್ದರಾಮಯ್ಯ ಈ ಮಾರ್ಗದ ರಸ್ತೆಗಳಲ್ಲಿ ಆಗಿರುವ ಟಾರ್ ಹಾಕುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು. ಇತ್ತ ವಿಬ್ ಗಯರ್ ಸ್ಕೂಲ್ ರಸ್ತೆ ಸೇರಿ ಹಲವೆಡೆ ರಸ್ತೆಗುಂಡಿಗಳನ್ನ ಮುಚ್ಚುವ ಕೆಲಸದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಗುಂಡಿಬಿದ್ದ ರಸ್ತೆಗಳನ್ನ ಸರಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತ ಕೆಲವೆಡೆ ಟಾರ್ ಸರಿಯಾಗಿ ಹಾಕಿಲ್ಲ ಅಂತಾ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ಆಯಾ ಗುತ್ತಿಗೆದಾರರು ರಸ್ತೆಗಳನ್ನ ಸರಿಯಾಗಿ ನಿರ್ವಹಣೆ ಮಾಡಬೇಕು ಅಂತಾ ಸೂಚನೆ ನೀಡಿದರು.

3 / 5
ಅತಿಹೆಚ್ಚು ತೆರಿಗೆ ಸಂಗ್ರಹ ಆಗುವ ಮಹದೇವಪುರ ಕ್ಷೇತ್ರದಲ್ಲಿ ರಸ್ತೆಗುಂಡಿಗಳ ಕಾಟ ಹೆಚ್ಚಾಗಿರೋ ಬಗ್ಗೆ ಟಿವಿ9 ಜೊತೆ ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಅಳಲು ತೋಡಿಕೊಂಡರು. ನಮ್ಮ ಕ್ಷೇತ್ರದಿಂದ ಅತಿಹೆಚ್ಚು ತೆರಿಗೆ ಸಂಗ್ರಹ ಆಗುತ್ತೆ, ಆದರೆ ಈ ಭಾಗದಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚಿದೆ ಅಂತಾ ಐಟಿ ಉದ್ಯೋಗಿಗಳು, ಸಾರ್ವಜನಿಕರಿಂದ ಸಾಲು ಸಾಲು ದೂರು ಬರ್ತಿದೆ, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಗುಂಡಿಗಳನ್ನ ಮುಚ್ಚಿಸಲು ಮನವಿ ಮಾಡ್ತೀನಿ ಎಂದರು.

ಅತಿಹೆಚ್ಚು ತೆರಿಗೆ ಸಂಗ್ರಹ ಆಗುವ ಮಹದೇವಪುರ ಕ್ಷೇತ್ರದಲ್ಲಿ ರಸ್ತೆಗುಂಡಿಗಳ ಕಾಟ ಹೆಚ್ಚಾಗಿರೋ ಬಗ್ಗೆ ಟಿವಿ9 ಜೊತೆ ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಅಳಲು ತೋಡಿಕೊಂಡರು. ನಮ್ಮ ಕ್ಷೇತ್ರದಿಂದ ಅತಿಹೆಚ್ಚು ತೆರಿಗೆ ಸಂಗ್ರಹ ಆಗುತ್ತೆ, ಆದರೆ ಈ ಭಾಗದಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚಿದೆ ಅಂತಾ ಐಟಿ ಉದ್ಯೋಗಿಗಳು, ಸಾರ್ವಜನಿಕರಿಂದ ಸಾಲು ಸಾಲು ದೂರು ಬರ್ತಿದೆ, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಗುಂಡಿಗಳನ್ನ ಮುಚ್ಚಿಸಲು ಮನವಿ ಮಾಡ್ತೀನಿ ಎಂದರು.

4 / 5
ಒಟ್ಟಿನಲ್ಲಿ ಸಾಲು ಸಾಲು ಅವಾಂತರಗಳ ಬಳಿಕ ರಾಜಧಾನಿಯ ರಸ್ತೆಗುಂಡಿಗಳನ್ನ ಮುಚ್ಚುವಂತೆ ಟಿವಿ9 ಮಾಡಿದ್ದ ನಿರಂತರ ಅಭಿಯಾನದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇತ್ತ ರಾಜಧಾನಿಯ ಬಹುತೇಕ ರಸ್ತೆಗಳಿಗೆ ತೇಪೆ ಹಚ್ಚುವ ಕೆಲಸ ಕೂಡ ಆರಂಭವಾಗಿದೆ. ಸದ್ಯ ಇಂದು ಸಿಟಿರೌಂಡ್ಸ್ ನಡೆಸಿರೋ ಸಿಎಂ ಸಿದ್ದರಾಮಯ್ಯ ಕೂಡ ಅಧಿಕಾರಿಗಳಿಗೆ ರಸ್ತೆಗುಂಡಿಗಳನ್ನ ಮುಚ್ಚುವಂತೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ರಾಜಧಾನಿಯ ರಸ್ತೆಗಳು ಇನ್ನಾದ್ರೂ ಗುಂಡಿಮುಕ್ತ ಆಗುತ್ತವೆಯಾ ಎಂಬುದನ್ನು ಕಾದುನೋಡಬೇಕಿದೆ.

ಒಟ್ಟಿನಲ್ಲಿ ಸಾಲು ಸಾಲು ಅವಾಂತರಗಳ ಬಳಿಕ ರಾಜಧಾನಿಯ ರಸ್ತೆಗುಂಡಿಗಳನ್ನ ಮುಚ್ಚುವಂತೆ ಟಿವಿ9 ಮಾಡಿದ್ದ ನಿರಂತರ ಅಭಿಯಾನದ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದೆ. ಇತ್ತ ರಾಜಧಾನಿಯ ಬಹುತೇಕ ರಸ್ತೆಗಳಿಗೆ ತೇಪೆ ಹಚ್ಚುವ ಕೆಲಸ ಕೂಡ ಆರಂಭವಾಗಿದೆ. ಸದ್ಯ ಇಂದು ಸಿಟಿರೌಂಡ್ಸ್ ನಡೆಸಿರೋ ಸಿಎಂ ಸಿದ್ದರಾಮಯ್ಯ ಕೂಡ ಅಧಿಕಾರಿಗಳಿಗೆ ರಸ್ತೆಗುಂಡಿಗಳನ್ನ ಮುಚ್ಚುವಂತೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ರಾಜಧಾನಿಯ ರಸ್ತೆಗಳು ಇನ್ನಾದ್ರೂ ಗುಂಡಿಮುಕ್ತ ಆಗುತ್ತವೆಯಾ ಎಂಬುದನ್ನು ಕಾದುನೋಡಬೇಕಿದೆ.

5 / 5
Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​