AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣ ಕಲ್ಪಿಸುವುದೇ‌ ನಮ್ಮ ಸಂಕಲ್ಪ: ಸಚಿವ ಅಶ್ವಿನಿ ವೈಷ್ಣವ್‌

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಜೊತೆಗೆ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೂ ಮುನ್ನ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಎಲ್ಲಾ ಸಿದ್ಧತೆಗಳನ್ನ ಪರಿಶೀಲಿಸಿದರು. ಬಳಿಕ ಹೇಳಿದ್ದಿಷ್ಟು.

ಗಂಗಾಧರ​ ಬ. ಸಾಬೋಜಿ
|

Updated on: Aug 10, 2025 | 8:55 AM

Share
ಇಂದು ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಶನಿವಾರ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಎಲ್ಲಾ ಸಿದ್ಧತೆಗಳನ್ನ ಪರಿಶೀಲನೆ ಮಾಡಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಶನಿವಾರ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಎಲ್ಲಾ ಸಿದ್ಧತೆಗಳನ್ನ ಪರಿಶೀಲನೆ ಮಾಡಿದರು.

1 / 6
ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮಾಹಿತಿ ನೀಡಿದೆ.

ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮಾಹಿತಿ ನೀಡಿದೆ.

2 / 6
ಬಹು ದಿನಗಳ ಬೇಡಿಕೆಯಾದ ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣೋ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.

ಬಹು ದಿನಗಳ ಬೇಡಿಕೆಯಾದ ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣೋ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.

3 / 6
ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣವನ್ನು ಕಲ್ಪಿಸಬೇಕು‌ ಎನ್ನುವ ಸಂಕಲ್ಪ ಹೊಂದಲಾಗಿದೆ. ವಂದೇ ಭಾರತ್ ರೈಲುಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆ ಮೂಲಕ ಕಡಿಮೆ ದರ, ಸಮಯದಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣವನ್ನು ಕಲ್ಪಿಸಬೇಕು‌ ಎನ್ನುವ ಸಂಕಲ್ಪ ಹೊಂದಲಾಗಿದೆ. ವಂದೇ ಭಾರತ್ ರೈಲುಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆ ಮೂಲಕ ಕಡಿಮೆ ದರ, ಸಮಯದಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

4 / 6
ಬೆಂಗಳೂರು ದೇಶದಲ್ಲೇ ಒಂದು ಪ್ರಮುಖ ಮಾಹಿತಿ ತಂತ್ರಜ್ಞಾನದ ನಗರವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೆಟ್ರೊ ಸೇವೆ ವಿಸ್ತರಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಇಲ್ಲಿನ ನಾಗರಿಕರಿಗೆ ಸುಲಲಿತ, ವೇಗವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.

ಬೆಂಗಳೂರು ದೇಶದಲ್ಲೇ ಒಂದು ಪ್ರಮುಖ ಮಾಹಿತಿ ತಂತ್ರಜ್ಞಾನದ ನಗರವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೆಟ್ರೊ ಸೇವೆ ವಿಸ್ತರಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಇಲ್ಲಿನ ನಾಗರಿಕರಿಗೆ ಸುಲಲಿತ, ವೇಗವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.

5 / 6
ಕರ್ನಾಟಕದಲ್ಲಿ ರೈಲ್ವೆ ಕ್ಷೇತ್ರದ ಅಭ್ಯುದಯಕ್ಕಾಗಿ 7564 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಹಾಸನ-ಬೆಂಗಳೂರು, ಶಿವಾನಿ-ಬೀರೂರು, ಹೊಸದುರ್ಗ-ಚಿಕ್ಕಜಾಜೂರು ಮಾರ್ಗಗಳ ನಡುವಿನ ಡಬ್ಲಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ತುಮಕೂರು-ಚಿತ್ರದುರ್ಗ ನಡುವಿನ ನೇರ ರೈಲು ಮಾರ್ಗ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿದ್ದು, ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ರೈಲ್ವೆ ಕ್ಷೇತ್ರದ ಅಭ್ಯುದಯಕ್ಕಾಗಿ 7564 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಹಾಸನ-ಬೆಂಗಳೂರು, ಶಿವಾನಿ-ಬೀರೂರು, ಹೊಸದುರ್ಗ-ಚಿಕ್ಕಜಾಜೂರು ಮಾರ್ಗಗಳ ನಡುವಿನ ಡಬ್ಲಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ತುಮಕೂರು-ಚಿತ್ರದುರ್ಗ ನಡುವಿನ ನೇರ ರೈಲು ಮಾರ್ಗ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿದ್ದು, ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

6 / 6
Follow Us
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ