AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣ ಕಲ್ಪಿಸುವುದೇ‌ ನಮ್ಮ ಸಂಕಲ್ಪ: ಸಚಿವ ಅಶ್ವಿನಿ ವೈಷ್ಣವ್‌

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಜೊತೆಗೆ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೂ ಮುನ್ನ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಎಲ್ಲಾ ಸಿದ್ಧತೆಗಳನ್ನ ಪರಿಶೀಲಿಸಿದರು. ಬಳಿಕ ಹೇಳಿದ್ದಿಷ್ಟು.

ಗಂಗಾಧರ​ ಬ. ಸಾಬೋಜಿ
|

Updated on: Aug 10, 2025 | 8:55 AM

Share
ಇಂದು ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಶನಿವಾರ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಎಲ್ಲಾ ಸಿದ್ಧತೆಗಳನ್ನ ಪರಿಶೀಲನೆ ಮಾಡಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಶನಿವಾರ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಎಲ್ಲಾ ಸಿದ್ಧತೆಗಳನ್ನ ಪರಿಶೀಲನೆ ಮಾಡಿದರು.

1 / 6
ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮಾಹಿತಿ ನೀಡಿದೆ.

ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮಾಹಿತಿ ನೀಡಿದೆ.

2 / 6
ಬಹು ದಿನಗಳ ಬೇಡಿಕೆಯಾದ ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣೋ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.

ಬಹು ದಿನಗಳ ಬೇಡಿಕೆಯಾದ ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣೋ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.

3 / 6
ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣವನ್ನು ಕಲ್ಪಿಸಬೇಕು‌ ಎನ್ನುವ ಸಂಕಲ್ಪ ಹೊಂದಲಾಗಿದೆ. ವಂದೇ ಭಾರತ್ ರೈಲುಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆ ಮೂಲಕ ಕಡಿಮೆ ದರ, ಸಮಯದಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣವನ್ನು ಕಲ್ಪಿಸಬೇಕು‌ ಎನ್ನುವ ಸಂಕಲ್ಪ ಹೊಂದಲಾಗಿದೆ. ವಂದೇ ಭಾರತ್ ರೈಲುಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆ ಮೂಲಕ ಕಡಿಮೆ ದರ, ಸಮಯದಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

4 / 6
ಬೆಂಗಳೂರು ದೇಶದಲ್ಲೇ ಒಂದು ಪ್ರಮುಖ ಮಾಹಿತಿ ತಂತ್ರಜ್ಞಾನದ ನಗರವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೆಟ್ರೊ ಸೇವೆ ವಿಸ್ತರಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಇಲ್ಲಿನ ನಾಗರಿಕರಿಗೆ ಸುಲಲಿತ, ವೇಗವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.

ಬೆಂಗಳೂರು ದೇಶದಲ್ಲೇ ಒಂದು ಪ್ರಮುಖ ಮಾಹಿತಿ ತಂತ್ರಜ್ಞಾನದ ನಗರವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೆಟ್ರೊ ಸೇವೆ ವಿಸ್ತರಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಇಲ್ಲಿನ ನಾಗರಿಕರಿಗೆ ಸುಲಲಿತ, ವೇಗವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.

5 / 6
ಕರ್ನಾಟಕದಲ್ಲಿ ರೈಲ್ವೆ ಕ್ಷೇತ್ರದ ಅಭ್ಯುದಯಕ್ಕಾಗಿ 7564 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಹಾಸನ-ಬೆಂಗಳೂರು, ಶಿವಾನಿ-ಬೀರೂರು, ಹೊಸದುರ್ಗ-ಚಿಕ್ಕಜಾಜೂರು ಮಾರ್ಗಗಳ ನಡುವಿನ ಡಬ್ಲಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ತುಮಕೂರು-ಚಿತ್ರದುರ್ಗ ನಡುವಿನ ನೇರ ರೈಲು ಮಾರ್ಗ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿದ್ದು, ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ರೈಲ್ವೆ ಕ್ಷೇತ್ರದ ಅಭ್ಯುದಯಕ್ಕಾಗಿ 7564 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಹಾಸನ-ಬೆಂಗಳೂರು, ಶಿವಾನಿ-ಬೀರೂರು, ಹೊಸದುರ್ಗ-ಚಿಕ್ಕಜಾಜೂರು ಮಾರ್ಗಗಳ ನಡುವಿನ ಡಬ್ಲಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ತುಮಕೂರು-ಚಿತ್ರದುರ್ಗ ನಡುವಿನ ನೇರ ರೈಲು ಮಾರ್ಗ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿದ್ದು, ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ