ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣ ಕಲ್ಪಿಸುವುದೇ‌ ನಮ್ಮ ಸಂಕಲ್ಪ: ಸಚಿವ ಅಶ್ವಿನಿ ವೈಷ್ಣವ್‌

Updated on: Aug 10, 2025 | 8:55 AM

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಜೊತೆಗೆ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೂ ಮುನ್ನ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಎಲ್ಲಾ ಸಿದ್ಧತೆಗಳನ್ನ ಪರಿಶೀಲಿಸಿದರು. ಬಳಿಕ ಹೇಳಿದ್ದಿಷ್ಟು.

1 / 6
ಇಂದು ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಶನಿವಾರ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಎಲ್ಲಾ ಸಿದ್ಧತೆಗಳನ್ನ ಪರಿಶೀಲನೆ ಮಾಡಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಜೊತೆಗೆ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಶನಿವಾರ ಮಧ್ಯರಾತ್ರಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಎಲ್ಲಾ ಸಿದ್ಧತೆಗಳನ್ನ ಪರಿಶೀಲನೆ ಮಾಡಿದರು.

2 / 6
ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮಾಹಿತಿ ನೀಡಿದೆ.

ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಮಾಹಿತಿ ನೀಡಿದೆ.

3 / 6
ಬಹು ದಿನಗಳ ಬೇಡಿಕೆಯಾದ ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣೋ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.

ಬಹು ದಿನಗಳ ಬೇಡಿಕೆಯಾದ ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣೋ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚರಿಸಲಿವೆ ಎಂದು ಅವರು ಹೇಳಿದ್ದಾರೆ.

4 / 6
ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣವನ್ನು ಕಲ್ಪಿಸಬೇಕು‌ ಎನ್ನುವ ಸಂಕಲ್ಪ ಹೊಂದಲಾಗಿದೆ. ವಂದೇ ಭಾರತ್ ರೈಲುಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆ ಮೂಲಕ ಕಡಿಮೆ ದರ, ಸಮಯದಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಎಲ್ಲರಿಗೂ ಗುಣಮಟ್ಟದ ರೈಲ್ವೆ ಪ್ರಯಾಣವನ್ನು ಕಲ್ಪಿಸಬೇಕು‌ ಎನ್ನುವ ಸಂಕಲ್ಪ ಹೊಂದಲಾಗಿದೆ. ವಂದೇ ಭಾರತ್ ರೈಲುಗಳಿಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಆ ಮೂಲಕ ಕಡಿಮೆ ದರ, ಸಮಯದಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

5 / 6
ಬೆಂಗಳೂರು ದೇಶದಲ್ಲೇ ಒಂದು ಪ್ರಮುಖ ಮಾಹಿತಿ ತಂತ್ರಜ್ಞಾನದ ನಗರವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೆಟ್ರೊ ಸೇವೆ ವಿಸ್ತರಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಇಲ್ಲಿನ ನಾಗರಿಕರಿಗೆ ಸುಲಲಿತ, ವೇಗವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.

ಬೆಂಗಳೂರು ದೇಶದಲ್ಲೇ ಒಂದು ಪ್ರಮುಖ ಮಾಹಿತಿ ತಂತ್ರಜ್ಞಾನದ ನಗರವಾಗಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮೆಟ್ರೊ ಸೇವೆ ವಿಸ್ತರಿಸುತ್ತಿರುವುದು ಸಂತಸದ ಸಂಗತಿ. ಇದರಿಂದ ಇಲ್ಲಿನ ನಾಗರಿಕರಿಗೆ ಸುಲಲಿತ, ವೇಗವಾಗಿ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.

6 / 6
ಕರ್ನಾಟಕದಲ್ಲಿ ರೈಲ್ವೆ ಕ್ಷೇತ್ರದ ಅಭ್ಯುದಯಕ್ಕಾಗಿ 7564 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಹಾಸನ-ಬೆಂಗಳೂರು, ಶಿವಾನಿ-ಬೀರೂರು, ಹೊಸದುರ್ಗ-ಚಿಕ್ಕಜಾಜೂರು ಮಾರ್ಗಗಳ ನಡುವಿನ ಡಬ್ಲಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ತುಮಕೂರು-ಚಿತ್ರದುರ್ಗ ನಡುವಿನ ನೇರ ರೈಲು ಮಾರ್ಗ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿದ್ದು, ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ರೈಲ್ವೆ ಕ್ಷೇತ್ರದ ಅಭ್ಯುದಯಕ್ಕಾಗಿ 7564 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಹಾಸನ-ಬೆಂಗಳೂರು, ಶಿವಾನಿ-ಬೀರೂರು, ಹೊಸದುರ್ಗ-ಚಿಕ್ಕಜಾಜೂರು ಮಾರ್ಗಗಳ ನಡುವಿನ ಡಬ್ಲಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ತುಮಕೂರು-ಚಿತ್ರದುರ್ಗ ನಡುವಿನ ನೇರ ರೈಲು ಮಾರ್ಗ ಕಾಮಗಾರಿ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿದ್ದು, ಸಂಪರ್ಕದ ಹೊಸ ಶಕೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us