AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಬೀದರ್ ಜಿಲ್ಲೆಯ ಕಾಶೆಂಪುರ ರೈತ ರಾಮ್ ರೆಡ್ಡಿ ಸಾಂಪ್ರದಾಯಿಕ ಬೆಳೆಗಳ ಬದಲಾಗಿ ನಿಂಬೆ ಕೃಷಿಯಲ್ಲಿ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಕಾಗಜಿ 12 ತಳಿಯ ನಿಂಬೆ ಬೆಳೆದು ವಾರ್ಷಿಕ ಐದಾರು ಲಕ್ಷ ಲಾಭ ಗಳಿಸುತ್ತಿದ್ದಾರೆ. ಉತ್ತಮ ಬೆಲೆ ಪಡೆಯಲು ಶೇಖರಣಾ ಘಟಕ ನಿರ್ಮಿಸಿ, ಮಾರುಕಟ್ಟೆ ತಂತ್ರಗಳನ್ನು ಬಳಸುತ್ತಿದ್ದಾರೆ. ಇದು ಇತರ ರೈತರಿಗೆ ಮಾದರಿಯಾಗಿದೆ.

ಸುರೇಶ್ ನಾಯಕ್
| Edited By: |

Updated on: Jan 02, 2026 | 8:27 PM

Share
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ.

1 / 6
ಇಂತಹ ರೈತರ ಸಂಕಷ್ಟದ ನಡುವೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ಪ್ರಗತಿಪರ ರೈತರ ರಾಮ್ ರೆಡ್ಡಿ, ಕೃಷಿಯಿಂದಲೇ ವಾರ್ಷಿವಾಗಿ ಲಕ್ಷ ಲಕ್ಷ ಆದಾಯವನ್ನು ಸಂಪಾದಿಸುತ್ತಿದ್ದಾರೆ. ಇವರದ್ದು ಒಟ್ಟು 12 ಎಕರೆಯಷ್ಟು ಜಮೀನಿದ್ದು, ಒಂದೂವರೆ ಎಕರೆಯಲ್ಲಿ ಕಾಗಜಿ 12-ಅನ್ನೋ ತಳಿಯ ನಿಂಬೆ ಬೆಳೆಯುತ್ತಿದ್ದಾರೆ. 

ಇಂತಹ ರೈತರ ಸಂಕಷ್ಟದ ನಡುವೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ಪ್ರಗತಿಪರ ರೈತರ ರಾಮ್ ರೆಡ್ಡಿ, ಕೃಷಿಯಿಂದಲೇ ವಾರ್ಷಿವಾಗಿ ಲಕ್ಷ ಲಕ್ಷ ಆದಾಯವನ್ನು ಸಂಪಾದಿಸುತ್ತಿದ್ದಾರೆ. ಇವರದ್ದು ಒಟ್ಟು 12 ಎಕರೆಯಷ್ಟು ಜಮೀನಿದ್ದು, ಒಂದೂವರೆ ಎಕರೆಯಲ್ಲಿ ಕಾಗಜಿ 12-ಅನ್ನೋ ತಳಿಯ ನಿಂಬೆ ಬೆಳೆಯುತ್ತಿದ್ದಾರೆ. 

2 / 6
ಕೋವಿಡ್​​ನ ಲಾಕ್​ಡೌನ್ ಸಮಯದಲ್ಲಿ ನಿಂಬೆ ಗಿಡಗಳನ್ನ ನಾಟಿ ಮಾಡಿ ಎರಡು ವರ್ಷದ ಬಳಿಕ ನಿಂಬೆ ಹಣ್ಣು ಕೊಡುತ್ತಿದೆ. ಎಲ್ಲಾ ಖರ್ಚು ತೆಗೆದು ವರ್ಷಕ್ಕೆ ನಮಗೆ ಐದಾರು ಲಕ್ಷ ರೂ ಲಾಭವಾಗುತ್ತದೆ ಎಂದು  ರಾಮ್ ರೆಡ್ಡಿ ಹೇಳುತ್ತಾರೆ. 

ಕೋವಿಡ್​​ನ ಲಾಕ್​ಡೌನ್ ಸಮಯದಲ್ಲಿ ನಿಂಬೆ ಗಿಡಗಳನ್ನ ನಾಟಿ ಮಾಡಿ ಎರಡು ವರ್ಷದ ಬಳಿಕ ನಿಂಬೆ ಹಣ್ಣು ಕೊಡುತ್ತಿದೆ. ಎಲ್ಲಾ ಖರ್ಚು ತೆಗೆದು ವರ್ಷಕ್ಕೆ ನಮಗೆ ಐದಾರು ಲಕ್ಷ ರೂ ಲಾಭವಾಗುತ್ತದೆ ಎಂದು  ರಾಮ್ ರೆಡ್ಡಿ ಹೇಳುತ್ತಾರೆ. 

3 / 6
ನಿಂಬೆ ಹೆಚ್ಚು ಲಾಭದಾಯಕ ಕೃಷಿ ಎಂದು ಅರಿತುಕೊಂಡ ರಾಮ್​ ರೆಡ್ಡಿ, ತನ್ನ ಒಂದೂವರೆ ಎಕರೆಯಷ್ಟು ಜಮೀನಿನಲ್ಲಿ ನಿಂಬೆ ನಾಟಿ ಮಾಡಿದ್ದಾರೆ. ಒಂದೂವರೆ ಎಕರೆಯಲ್ಲಿ ಸುಮಾರು 360 ನಿಂಬೆ ಗಿಡಗಳನ್ನು ಹಚ್ಚಿದ್ದಾರೆ. ಕಳೆದ ಮೂರು ವರ್ಷದಿಂದ ಒಂದು ನಿಂಬೆ ಗಿಡ ಸರಾಸರಿ 40 ರಿಂದ 60 ಕೆ.ಜಿ ವರೆಗೆ ನಿಂಬೆ  ಕೊಡುತ್ತಿದೆ.

ನಿಂಬೆ ಹೆಚ್ಚು ಲಾಭದಾಯಕ ಕೃಷಿ ಎಂದು ಅರಿತುಕೊಂಡ ರಾಮ್​ ರೆಡ್ಡಿ, ತನ್ನ ಒಂದೂವರೆ ಎಕರೆಯಷ್ಟು ಜಮೀನಿನಲ್ಲಿ ನಿಂಬೆ ನಾಟಿ ಮಾಡಿದ್ದಾರೆ. ಒಂದೂವರೆ ಎಕರೆಯಲ್ಲಿ ಸುಮಾರು 360 ನಿಂಬೆ ಗಿಡಗಳನ್ನು ಹಚ್ಚಿದ್ದಾರೆ. ಕಳೆದ ಮೂರು ವರ್ಷದಿಂದ ಒಂದು ನಿಂಬೆ ಗಿಡ ಸರಾಸರಿ 40 ರಿಂದ 60 ಕೆ.ಜಿ ವರೆಗೆ ನಿಂಬೆ  ಕೊಡುತ್ತಿದೆ.

4 / 6
ನಿಂಬೆ ಗಿಡಗಳು ನಾಟಿ ಮಾಡಿದ 12 ವರ್ಷದವರೆಗೆ ಹಣ್ಣು ಕೊಡುತ್ತದೆ. ಆಮೇಲೆ ಇಳುವರಿ ಕಡಿಮೆಯಾಗುತ್ತಾ ಹೋಗುತ್ತದೆ, ಹೀಗಾಗಿ 12 ವರ್ಷ ಆದ ಮೇಲೆ ನಿಂಬೆ ಗಿಡಗಳನ್ನ ತೆಗೆದು ಮತ್ತೆ ಬೇರೆ ನಿಂಬೆ ಸಸಿ ನಾಟಿ ಮಾಡಲಾಗುತ್ತದೆ. ಈಗ ಒಂದೂವರೆ ಎಕರೆಯಷ್ಟು ನಿಂಬೆ ನಾಟಿ ಮಾಡಿ ಐದು ವರ್ಷ ಕಳೆದಿದ್ದು, ಹೀಗಾಗಿ ಮತ್ತೆ ಎರಡು ಎಕರೆ ಈ ವರ್ಷ ನಿಂಬೆ ನಾಟಿ ಮಾಡಿದ್ದಾರೆ.

ನಿಂಬೆ ಗಿಡಗಳು ನಾಟಿ ಮಾಡಿದ 12 ವರ್ಷದವರೆಗೆ ಹಣ್ಣು ಕೊಡುತ್ತದೆ. ಆಮೇಲೆ ಇಳುವರಿ ಕಡಿಮೆಯಾಗುತ್ತಾ ಹೋಗುತ್ತದೆ, ಹೀಗಾಗಿ 12 ವರ್ಷ ಆದ ಮೇಲೆ ನಿಂಬೆ ಗಿಡಗಳನ್ನ ತೆಗೆದು ಮತ್ತೆ ಬೇರೆ ನಿಂಬೆ ಸಸಿ ನಾಟಿ ಮಾಡಲಾಗುತ್ತದೆ. ಈಗ ಒಂದೂವರೆ ಎಕರೆಯಷ್ಟು ನಿಂಬೆ ನಾಟಿ ಮಾಡಿ ಐದು ವರ್ಷ ಕಳೆದಿದ್ದು, ಹೀಗಾಗಿ ಮತ್ತೆ ಎರಡು ಎಕರೆ ಈ ವರ್ಷ ನಿಂಬೆ ನಾಟಿ ಮಾಡಿದ್ದಾರೆ.

5 / 6
ವಾತಾವರಣಕ್ಕೆ ಅನುಗುಣವಾಗಿ ನಿಂಬೆ ದರ ನಿಗದಿಯಾಗುತ್ತದೆ. ಚಳಗಾಲಕ್ಕೆ ಹೋಲಿಸಿದರೆ ಬೆಸಿಗೆಯಲ್ಲಿ ಇದರ ಬೆಲೆ ಹೆಚ್ಚು. ಜೊತೆಗೆ ವಾರದಿಂದ ವಾರಕ್ಕೆ ದರ ಏರಿಳಿತವಾಗುವ ಕಾರಣಕ್ಕೆ ತೋಟಗಾರಿಕೆ ಇಲಾಖೆಯ ಸಹಾಯ ಪಡೆದುಕೊಂಡು 60 ಟನ್ ನಷ್ಟು ನಿಂಬೆ ಸ್ಟೋರೇಜ್ ನಿರ್ಮಿಸಿಕೊಂಡಿದ್ದಾರೆ. ಹೀಗಾಗಿ ಮಾರುಕಟ್ಟೆಯಲ್ಲಿ ಯಾವಾಗ ದರ ಹೆಚ್ಚಿಗೆ ಇರುತ್ತದೆಯೋ ಅಂದು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತದೆ. ಒಟ್ಟಿನಲ್ಲಿ ರೈತ ರಾಮ್ ರೆಡ್ಡಿ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ.

ವಾತಾವರಣಕ್ಕೆ ಅನುಗುಣವಾಗಿ ನಿಂಬೆ ದರ ನಿಗದಿಯಾಗುತ್ತದೆ. ಚಳಗಾಲಕ್ಕೆ ಹೋಲಿಸಿದರೆ ಬೆಸಿಗೆಯಲ್ಲಿ ಇದರ ಬೆಲೆ ಹೆಚ್ಚು. ಜೊತೆಗೆ ವಾರದಿಂದ ವಾರಕ್ಕೆ ದರ ಏರಿಳಿತವಾಗುವ ಕಾರಣಕ್ಕೆ ತೋಟಗಾರಿಕೆ ಇಲಾಖೆಯ ಸಹಾಯ ಪಡೆದುಕೊಂಡು 60 ಟನ್ ನಷ್ಟು ನಿಂಬೆ ಸ್ಟೋರೇಜ್ ನಿರ್ಮಿಸಿಕೊಂಡಿದ್ದಾರೆ. ಹೀಗಾಗಿ ಮಾರುಕಟ್ಟೆಯಲ್ಲಿ ಯಾವಾಗ ದರ ಹೆಚ್ಚಿಗೆ ಇರುತ್ತದೆಯೋ ಅಂದು ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತದೆ. ಒಟ್ಟಿನಲ್ಲಿ ರೈತ ರಾಮ್ ರೆಡ್ಡಿ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ.

6 / 6
Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ