AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರೇಶ್ವರ ಜಾತ್ರೆಯಲ್ಲಿ ಪಶು ಲೋಕ ಅನಾವರಣ: ದೇವಣಿ ಸೇರಿ ನಾನಾ ಜಾತಿಯ ಪಶುಗಳನ್ನ ನೋಡಲು ಮುಗಿಬಿದ್ದ ಜನ

ಬೀದರ್‌ನ ಅಮರೇಶ್ವರ ಜಾತ್ರೆಯಲ್ಲಿ ನಡೆದ ಬೃಹತ್ ಪಶುಪ್ರದರ್ಶನವು ವಿವಿಧ ತಳಿಯ ಜಾನುವಾರುಗಳನ್ನು ಪ್ರದರ್ಶಿಸಲಾಯಿತು. ದೇವಣಿ ತಳಿಯ ಜಾನುವಾರುಗಳು, ಜರ್ಸಿ, ಎಚ್‌.ಎಫ್‌., ಖಿಲಾರೆ ಎಮ್ಮೆಗಳು, ಕುದುರೆಗಳು ಮುಂತಾದವುಗಳನ್ನು ಪ್ರದರ್ಶಿಸಲಾಯಿತು. ಮಹಾರಾಷ್ಟ್ರ ಮತ್ತು ತೆಲಂಗಾಣದಿಂದಲೂ ಜಾನುವಾರುಗಳು ಭಾಗವಹಿಸಿದವು. ಉತ್ತಮ ತಳಿಯ ಜಾನುವಾರುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

ಸುರೇಶ ನಾಯಕ
| Edited By: |

Updated on:Mar 03, 2025 | 8:54 PM

Share
ಅಲ್ಲಿ ಪಶುಗಳ ಲೋಕವೇ ನಿರ್ಮಾಣವಾಗಿತ್ತು. ರೈತರ ಜೀವನಾಡಿ ಎಂದೇ ಪರಿಗಣಿಸಲಾಗುವ ಹತ್ತಾರು ಜಾತಿಯ ಪಶು, ಕುರಿ, ಕುದುರೆ ಒಂದೇ ಕಡೆ ನೋಡಬಹುದಾಗಿತ್ತು. ಒಂದಕ್ಕಿಂತ ಒಂದು ಭಿನ್ನವಾಗಿದ್ದ ಪಶುಗಳಲ್ಲಿ ಕೆಲವೊಂದು ಆಕಾರದಲ್ಲಿ ಅಜಾನುಬಾಹು ಲೆಕ್ಕದಲ್ಲಿದ್ದರೆ ಮತ್ತೆ ಕೆಲವು ಕಣ್ಣು ಕುಕ್ಕುವಂತಹ ಬಿಳಿಬಣ್ದದ ಜಾನುವಾರುಗಳಿದ್ದವು. ನಾನಾ ಜಾತಿಯ ಪಶುಗಳನ್ನ ನೋಡಲು ಜನ ಮುಗಿ ಬಿದ್ದಿದ್ದರು. 

ಅಲ್ಲಿ ಪಶುಗಳ ಲೋಕವೇ ನಿರ್ಮಾಣವಾಗಿತ್ತು. ರೈತರ ಜೀವನಾಡಿ ಎಂದೇ ಪರಿಗಣಿಸಲಾಗುವ ಹತ್ತಾರು ಜಾತಿಯ ಪಶು, ಕುರಿ, ಕುದುರೆ ಒಂದೇ ಕಡೆ ನೋಡಬಹುದಾಗಿತ್ತು. ಒಂದಕ್ಕಿಂತ ಒಂದು ಭಿನ್ನವಾಗಿದ್ದ ಪಶುಗಳಲ್ಲಿ ಕೆಲವೊಂದು ಆಕಾರದಲ್ಲಿ ಅಜಾನುಬಾಹು ಲೆಕ್ಕದಲ್ಲಿದ್ದರೆ ಮತ್ತೆ ಕೆಲವು ಕಣ್ಣು ಕುಕ್ಕುವಂತಹ ಬಿಳಿಬಣ್ದದ ಜಾನುವಾರುಗಳಿದ್ದವು. ನಾನಾ ಜಾತಿಯ ಪಶುಗಳನ್ನ ನೋಡಲು ಜನ ಮುಗಿ ಬಿದ್ದಿದ್ದರು. 

1 / 6
ಹೌದು..ಕರ್ನಾಟಕದ ಕಿರಿಟ ಗಡೀ ತಾಲೂಕು ಔರಾದ್​​ನಲ್ಲಿ ಸುಪ್ರಸಿದ್ಧ ಅಮರೇಶ್ವರ ಉದ್ಭವ ಲಿಂಗ ಜಾತ್ರೆಯ ನಿಮಿತ್ಯವಾಗಿ ಉತ್ತಮ ತಳಿಯ ಜಾನುವಾರ ಪ್ರದರ್ಶನವನ್ನ ಹಮ್ಮಿಕೊಳ್ಳಲಾಗಿತ್ತು. ನಗರದ ಎಪಿಎಂಸಿ ಜಾನುವಾರು ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ದೇವಣಿ ತಳಿಯ ಜಾನುವಾರು ಜಾತ್ರೆ ಎಲ್ಲರ ಗಮನ ಸೆಳೆಯಿತು.

ಹೌದು..ಕರ್ನಾಟಕದ ಕಿರಿಟ ಗಡೀ ತಾಲೂಕು ಔರಾದ್​​ನಲ್ಲಿ ಸುಪ್ರಸಿದ್ಧ ಅಮರೇಶ್ವರ ಉದ್ಭವ ಲಿಂಗ ಜಾತ್ರೆಯ ನಿಮಿತ್ಯವಾಗಿ ಉತ್ತಮ ತಳಿಯ ಜಾನುವಾರ ಪ್ರದರ್ಶನವನ್ನ ಹಮ್ಮಿಕೊಳ್ಳಲಾಗಿತ್ತು. ನಗರದ ಎಪಿಎಂಸಿ ಜಾನುವಾರು ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ದೇವಣಿ ತಳಿಯ ಜಾನುವಾರು ಜಾತ್ರೆ ಎಲ್ಲರ ಗಮನ ಸೆಳೆಯಿತು.

2 / 6
ಜಾತ್ರೆಯಲ್ಲಿ ಜರ್ಸಿ, ದೇವಣಿ, ಎಚ್‌.ಎಫ್‌. ತಳಿ, ಖಿಲಾರೆ, ಜವಾರಿ ಎಮ್ಮೆ, ಗೌಳೇರ ಎಮ್ಮೆ, ಜಾನುವಾರು ಹೆಚ್ಚಾಗಿ ಕಂಡು ಬಂದವು. ಜೊತೆಗೆ ಕುದುರೆಗಳು ಕೂಡ ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕುದುರೆಯ ಡ್ಯಾನ್ಸ್ ನೋಡಲು ಜನರು ಮುಗಿಬಿದ್ದರು. ಇನ್ನೂ ಜಾಣುವಾರು ಪ್ರದರ್ಶನದಲ್ಲಿ ಸುಮಾರು ಹತ್ತಾರು ತಳಿಗಳು ಇನ್ನೂರಕ್ಕೂ ಹೆಚ್ಚು ಜಾನುವಾರು ಪ್ರದರ್ಶನದಲ್ಲಿ ಭಾಗವಹಿಸಿ ಗಮನ ಸೆಳೆದವು.

ಜಾತ್ರೆಯಲ್ಲಿ ಜರ್ಸಿ, ದೇವಣಿ, ಎಚ್‌.ಎಫ್‌. ತಳಿ, ಖಿಲಾರೆ, ಜವಾರಿ ಎಮ್ಮೆ, ಗೌಳೇರ ಎಮ್ಮೆ, ಜಾನುವಾರು ಹೆಚ್ಚಾಗಿ ಕಂಡು ಬಂದವು. ಜೊತೆಗೆ ಕುದುರೆಗಳು ಕೂಡ ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕುದುರೆಯ ಡ್ಯಾನ್ಸ್ ನೋಡಲು ಜನರು ಮುಗಿಬಿದ್ದರು. ಇನ್ನೂ ಜಾಣುವಾರು ಪ್ರದರ್ಶನದಲ್ಲಿ ಸುಮಾರು ಹತ್ತಾರು ತಳಿಗಳು ಇನ್ನೂರಕ್ಕೂ ಹೆಚ್ಚು ಜಾನುವಾರು ಪ್ರದರ್ಶನದಲ್ಲಿ ಭಾಗವಹಿಸಿ ಗಮನ ಸೆಳೆದವು.

3 / 6
ನೆರೆಯ ರಾಜ್ಯಗಳಾದ ಮಹರಾಷ್ಟ್ರ, ತೆಲಂಗಾಣ ಸೇರಿದಂತೆ ಜಿಲ್ಲೆಮತ್ತು ಹೊರ ಜಿಲ್ಲೆಯಿಂದ ವಿವಿಧ ಊರುಗಳಿಂದ ರಾಸುಗಳು ಬಂದು ಸೇರಿದ್ದವು. ರಾಸುಗಳ ಮೈ ತೊಳೆದು ವಿವಿಧ ಅಲಂಕಾರಿ ಗೊಂಡೆಗಳನ್ನು ಹಾಕಿ ರೈತರು ತಮ್ಮ ಪಶುಗಳನ್ನ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಉತ್ತಮ ರೀತಿಯಲ್ಲಿಪೋಷಣೆ ಮಾಡಿದ ರಾಸುಗಳಿಗೆ ಬಹುಮಾನವನ್ನ ನೀಡಲಿದ್ದು ಜಾನುವಾರು ಸಾಕಾಣಿಕೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಜಾನುವಾರು ಪ್ರದರ್ಶನವನ್ನ ಮಾಡಲಾಗುತ್ತದೆ ಎಂದು ರೈತ ಖಂಡು ಮಾನೆ ಹೇಳಿದ್ದಾರೆ.

ನೆರೆಯ ರಾಜ್ಯಗಳಾದ ಮಹರಾಷ್ಟ್ರ, ತೆಲಂಗಾಣ ಸೇರಿದಂತೆ ಜಿಲ್ಲೆಮತ್ತು ಹೊರ ಜಿಲ್ಲೆಯಿಂದ ವಿವಿಧ ಊರುಗಳಿಂದ ರಾಸುಗಳು ಬಂದು ಸೇರಿದ್ದವು. ರಾಸುಗಳ ಮೈ ತೊಳೆದು ವಿವಿಧ ಅಲಂಕಾರಿ ಗೊಂಡೆಗಳನ್ನು ಹಾಕಿ ರೈತರು ತಮ್ಮ ಪಶುಗಳನ್ನ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಉತ್ತಮ ರೀತಿಯಲ್ಲಿಪೋಷಣೆ ಮಾಡಿದ ರಾಸುಗಳಿಗೆ ಬಹುಮಾನವನ್ನ ನೀಡಲಿದ್ದು ಜಾನುವಾರು ಸಾಕಾಣಿಕೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಜಾನುವಾರು ಪ್ರದರ್ಶನವನ್ನ ಮಾಡಲಾಗುತ್ತದೆ ಎಂದು ರೈತ ಖಂಡು ಮಾನೆ ಹೇಳಿದ್ದಾರೆ.

4 / 6
ರೈತ ಸಮೂಹವನ್ನು ಹೈನುಗಾರಿಕೆಯತ್ತ ಸೆಳೆಯುವ ಉದ್ದೇಶದಿಂದ ಆಯೋಜಿಸಲಾಗಿದ್ದ ಜಾತ್ರೆಯಲ್ಲಿ ಹತ್ತಾರು ಬಗೆಯ ತಳಿಗಳ ಜಾನುವಾರು ಪ್ರದರ್ಶನ ಮಾಡಲಾಗಿದೆ. ಅದರಲ್ಲಿಯೂ ವಿಶೇಷವಾಗಿ ಬೀದರ್ ಹಾಗೂ ಬೀದರ್ ಪಕ್ಕದಲ್ಲಿರುವ ದೇವಣಿಯಲ್ಲಿ ಕಂಡು ಬರುವ ದೇವನಿ ತಳಿಗಳಿ ಈ ಜಾನುವಾರು ಪ್ರದರ್ಶನದಲ್ಲಿ ಹೆಚ್ಚಾಗಿ ಕಂಡು ಬಂದವು. ದೈತ್ಯವಾದ ದೇಹ ಸುಂದರವಾದ ಆಕಾರ ಹಾಗು ಹಾಲು ಕೊಡಲು ರೈತರ ಹೊಲದಲ್ಲಿ ಉಳುಮೆ ಮಾಡಲು ಸಹ ಹೇಳಿ ಮಾಡಿಸಿದ ಈ ದೇವಣಿ ತಳು ಈ ಜಾನುವಾರು ಪ್ರದರ್ಶನದಲ್ಲಿ ಎಲ್ಲರ ಗಮನ ಸೇಳೆಯಿತು.

ರೈತ ಸಮೂಹವನ್ನು ಹೈನುಗಾರಿಕೆಯತ್ತ ಸೆಳೆಯುವ ಉದ್ದೇಶದಿಂದ ಆಯೋಜಿಸಲಾಗಿದ್ದ ಜಾತ್ರೆಯಲ್ಲಿ ಹತ್ತಾರು ಬಗೆಯ ತಳಿಗಳ ಜಾನುವಾರು ಪ್ರದರ್ಶನ ಮಾಡಲಾಗಿದೆ. ಅದರಲ್ಲಿಯೂ ವಿಶೇಷವಾಗಿ ಬೀದರ್ ಹಾಗೂ ಬೀದರ್ ಪಕ್ಕದಲ್ಲಿರುವ ದೇವಣಿಯಲ್ಲಿ ಕಂಡು ಬರುವ ದೇವನಿ ತಳಿಗಳಿ ಈ ಜಾನುವಾರು ಪ್ರದರ್ಶನದಲ್ಲಿ ಹೆಚ್ಚಾಗಿ ಕಂಡು ಬಂದವು. ದೈತ್ಯವಾದ ದೇಹ ಸುಂದರವಾದ ಆಕಾರ ಹಾಗು ಹಾಲು ಕೊಡಲು ರೈತರ ಹೊಲದಲ್ಲಿ ಉಳುಮೆ ಮಾಡಲು ಸಹ ಹೇಳಿ ಮಾಡಿಸಿದ ಈ ದೇವಣಿ ತಳು ಈ ಜಾನುವಾರು ಪ್ರದರ್ಶನದಲ್ಲಿ ಎಲ್ಲರ ಗಮನ ಸೇಳೆಯಿತು.

5 / 6
ರೈತರನ್ನ ಹೈನುಗಾರಿಕೆಗೆ ಉತ್ತೇಜಿಸುವ ಉದ್ದೇಶದಿಂದ ಪ್ರತಿ ವರ್ಷ ಕೂಡ ಅಮರೇಶ್ವರ ಜಾತ್ರೆಯಲ್ಲಿ ಜಾನುವಾರು ಪ್ರದರ್ಶಣವನ್ನ ಹಮ್ಮಿಕೊಳ್ಳಲಾಗುತ್ತದೆ. ಈ ಪ್ರದರ್ಶನದಲ್ಲಿ ರಾಜ್ಯ ಸೇರದಂತೆ ನೇರೆ ರಾಜ್ಯದ ಅಕ್ಕಪಕ್ಕದ ಗ್ರಾಮದಿಂದ ರೈತರು ತಮ್ಮ ತಮ್ಮ ಹಸು, ಎಮ್ಮೆ, ಆಡುಗಳನ್ನ ತಂದು ಈ ಪ್ರದರ್ಶನದಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಾರೆ.

ರೈತರನ್ನ ಹೈನುಗಾರಿಕೆಗೆ ಉತ್ತೇಜಿಸುವ ಉದ್ದೇಶದಿಂದ ಪ್ರತಿ ವರ್ಷ ಕೂಡ ಅಮರೇಶ್ವರ ಜಾತ್ರೆಯಲ್ಲಿ ಜಾನುವಾರು ಪ್ರದರ್ಶಣವನ್ನ ಹಮ್ಮಿಕೊಳ್ಳಲಾಗುತ್ತದೆ. ಈ ಪ್ರದರ್ಶನದಲ್ಲಿ ರಾಜ್ಯ ಸೇರದಂತೆ ನೇರೆ ರಾಜ್ಯದ ಅಕ್ಕಪಕ್ಕದ ಗ್ರಾಮದಿಂದ ರೈತರು ತಮ್ಮ ತಮ್ಮ ಹಸು, ಎಮ್ಮೆ, ಆಡುಗಳನ್ನ ತಂದು ಈ ಪ್ರದರ್ಶನದಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಾರೆ.

6 / 6

Published On - 4:53 pm, Mon, 3 March 25

Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ