AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

ಬೀದರ್‌ನ ಶ್ರೀಮಂಡಲ ಗ್ರಾಮದಲ್ಲಿ ಹೈಟೆಕ್ ಡಿಜಿಟಲ್ ಲೈಬ್ರರಿ ಒಂದು ತಲೆ ಎತ್ತಿದೆ. ಆ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿಯಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಜೊತೆಗೆ ಕಂಪ್ಯೂಟರ್ ಶಿಕ್ಷಣ ಹಾಗೂ ಆಧುನಿಕ ಸಂಪನ್ಮೂಲಗಳನ್ನು ಒದಗಿಸಲಾಗುತ್ತಿದೆ. ಸದ್ಯ ಈ ಹೈಟೆಕ್ ಡಿಜಿಟಲ್ ಲೈಬ್ರರಿ ಎಲ್ಲರ ಗಮನ ಸೆಳೆಯುತ್ತಿದೆ.

ಸುರೇಶ್ ನಾಯಕ್
| Edited By: |

Updated on: Jun 01, 2026 | 7:47 PM

Share
ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ.

ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ.

1 / 6
ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್ ನಗರಕ್ಕೆ ಹೋಗಿ ಓದುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಮಕ್ಕಳ ಈ ಪರಿಸ್ಥಿತಿಯನ್ನು ಮನಗಂಡ ಶ್ರೀಮಂಡಲ ಗ್ರಾಮ ಪಂಚಾಯಿತಿಯ ಪಿಡಿಓ ಶರತ್ ಅಭಿಮಾನ್ ಹಾಗೂ ಪಂಚಾಯಿತಿ ಸದಸ್ಯರು ಸೇರಿ, ತಮ್ಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಹೈಟೆಕ್ ಲೈಬ್ರರಿಯನ್ನು ನಿರ್ಮಿಸಿದ್ದಾರೆ.

ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್ ನಗರಕ್ಕೆ ಹೋಗಿ ಓದುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಮಕ್ಕಳ ಈ ಪರಿಸ್ಥಿತಿಯನ್ನು ಮನಗಂಡ ಶ್ರೀಮಂಡಲ ಗ್ರಾಮ ಪಂಚಾಯಿತಿಯ ಪಿಡಿಓ ಶರತ್ ಅಭಿಮಾನ್ ಹಾಗೂ ಪಂಚಾಯಿತಿ ಸದಸ್ಯರು ಸೇರಿ, ತಮ್ಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಹಳ್ಳಿಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಹೈಟೆಕ್ ಲೈಬ್ರರಿಯನ್ನು ನಿರ್ಮಿಸಿದ್ದಾರೆ.

2 / 6
ಈ ಲೈಬ್ರರಿಯಲ್ಲಿ ನಾಲ್ಕು ಕಂಪ್ಯೂಟರ್​ಗಳಿದ್ದು, ಅದಕ್ಕೆ ಹೈ ಸ್ಪೀಡ್ ಇಂಟರ್ನೆಟ್ ಕನೆಕ್ಷನ್ ಕೊಡಲಾಗಿದೆ. ಜೊತೆಗೆ ಯುಪಿಎಸ್, ಕೆಎಎಸ್, ಎಸ್​ಡಿಎ, ಎಫ್​ಡಿಎ, ಪಿಡಿಓ ಹೀಗೆ ಎಲ್ಲಾ ಪರೀಕ್ಷೆಗೂ ಅನೂಕುಲವಾಗುವಂತಹ ಲಕ್ಷಾಂತರ ರೂ ಮೌಲ್ಯದ ಪುಸ್ತಕಗಳಿವೆ.

ಈ ಲೈಬ್ರರಿಯಲ್ಲಿ ನಾಲ್ಕು ಕಂಪ್ಯೂಟರ್​ಗಳಿದ್ದು, ಅದಕ್ಕೆ ಹೈ ಸ್ಪೀಡ್ ಇಂಟರ್ನೆಟ್ ಕನೆಕ್ಷನ್ ಕೊಡಲಾಗಿದೆ. ಜೊತೆಗೆ ಯುಪಿಎಸ್, ಕೆಎಎಸ್, ಎಸ್​ಡಿಎ, ಎಫ್​ಡಿಎ, ಪಿಡಿಓ ಹೀಗೆ ಎಲ್ಲಾ ಪರೀಕ್ಷೆಗೂ ಅನೂಕುಲವಾಗುವಂತಹ ಲಕ್ಷಾಂತರ ರೂ ಮೌಲ್ಯದ ಪುಸ್ತಕಗಳಿವೆ.

3 / 6
ಉತ್ತಮ ದರ್ಜೆಯ ಲೈಬ್ರರಿಯ ಜೊತೆಗೆ ಹೈಟೆಕ್ ಡಿಜಿಟಲ್ ಮಾದರಿಯ ಕಂಪ್ಯೂಟರ್ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ. ಲೈಬ್ರರಿಯಲ್ಲಿ ಓದುತ್ತಿರುವ ಮಕ್ಕಳ ಮೇಲೆ ನಿಗಾ ಇಡುವ ಉದ್ದೇಶದಿಂದ ಲೈಬ್ರರಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

ಉತ್ತಮ ದರ್ಜೆಯ ಲೈಬ್ರರಿಯ ಜೊತೆಗೆ ಹೈಟೆಕ್ ಡಿಜಿಟಲ್ ಮಾದರಿಯ ಕಂಪ್ಯೂಟರ್ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ. ಲೈಬ್ರರಿಯಲ್ಲಿ ಓದುತ್ತಿರುವ ಮಕ್ಕಳ ಮೇಲೆ ನಿಗಾ ಇಡುವ ಉದ್ದೇಶದಿಂದ ಲೈಬ್ರರಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.

4 / 6
ಸದ್ಯ ಗ್ರಾಮದ ಮಕ್ಕಳು ಸೇರಿದಂತೆ ಜನರು ಹೈಟೆಕ್ ಲೈಬ್ರರಿಯ ಸೌಲಭ್ಯವನ್ನು ಬಳಸಿಕೊಳ್ಳುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಭದಲ್ಲಿ ಹೆಚ್ಚಿನ ಸಮಯ ಗ್ರಂಥಾಲಯದಲ್ಲಿಯೇ ಕಳೆಯುತ್ತಿದ್ದಾರೆ. ಈ ಗ್ರಾಮಕ್ಕೆ 2023-24ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸಹ ಸಿಕ್ಕಿದೆ.

ಸದ್ಯ ಗ್ರಾಮದ ಮಕ್ಕಳು ಸೇರಿದಂತೆ ಜನರು ಹೈಟೆಕ್ ಲೈಬ್ರರಿಯ ಸೌಲಭ್ಯವನ್ನು ಬಳಸಿಕೊಳ್ಳುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಭದಲ್ಲಿ ಹೆಚ್ಚಿನ ಸಮಯ ಗ್ರಂಥಾಲಯದಲ್ಲಿಯೇ ಕಳೆಯುತ್ತಿದ್ದಾರೆ. ಈ ಗ್ರಾಮಕ್ಕೆ 2023-24ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸಹ ಸಿಕ್ಕಿದೆ.

5 / 6
ಸಾಮಾನ್ಯವಾಗಿ ಸರ್ಕಾರಿ ಆಡಳಿತ ವ್ಯವಸ್ಥೆಯನ್ನು ಹಾಗೂ ಪಂಚಾಯಿತಿಗಳ ಕೆಲಸವನ್ನು ತೆಗಳುವ ಈ ಕಾಲದಲ್ಲಿ, ಮನಸ್ಸು ಮಾಡಿದರೆ ಏನೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಬಹುದು ಎಂಬುದನ್ನು ಈ ಪಂಚಾಯಿತಿಯ ಪಿಡಿಓ ಮತ್ತು ಸದಸ್ಯರು ಮಾಡಿ ತೋರಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಆಡಳಿತ ವ್ಯವಸ್ಥೆಯನ್ನು ಹಾಗೂ ಪಂಚಾಯಿತಿಗಳ ಕೆಲಸವನ್ನು ತೆಗಳುವ ಈ ಕಾಲದಲ್ಲಿ, ಮನಸ್ಸು ಮಾಡಿದರೆ ಏನೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಬಹುದು ಎಂಬುದನ್ನು ಈ ಪಂಚಾಯಿತಿಯ ಪಿಡಿಓ ಮತ್ತು ಸದಸ್ಯರು ಮಾಡಿ ತೋರಿಸಿದ್ದಾರೆ.

6 / 6
Follow Us
ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ