AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿ ಜಗನ್ನಾಥ ಜಾತ್ರೆ ಮಾದರಿಯಲ್ಲಿ ನಡೆಯುತ್ತೆ ಬೀದರ್​ನ ಮರಿಗೆಮ್ಮ ದೇವಿ ಜಾತ್ರೆ: ಇಲ್ಲಿವೆ ಫೋಟೋಸ್​

ಬೀದರ್ ತಾಲೂಕಿನ ಕಾಶೆಂಪುರದ ಮರಿಗೆಮ್ಮ ದೇವಿ ಜಾತ್ರೆ ಅದ್ಭುತವಾದ ಏಕದಿನ ಆಚರಣೆಯಾಗಿದೆ. ಪುರಿಯ ಜಗನ್ನಾಥ ಜಾತ್ರೆಯಂತೆ, ಇಲ್ಲಿ ಹೊಸ ಮೂರ್ತಿಗಳನ್ನು ಒಂದೇ ದಿನ ತಯಾರಿಸಿ ಪ್ರತಿಷ್ಠಾಪಿಸಲಾಗುತ್ತದೆ. ಮದುವೆಯಾದ ಮಹಿಳೆಯರು ಈ ಜಾತ್ರೆಯಲ್ಲಿ ಭಾಗವಹಿಸುವುದು ಕಡ್ಡಾಯ. ದೇವಿಯ ಮೂರ್ತಿಯನ್ನು ಮೆರವಣಿಗೆಯ ಮೂಲಕ ದೇವಾಲಯಕ್ಕೆ ತರಲಾಗುತ್ತದೆ ಮತ್ತು ಗ್ರಾಮಸ್ಥರು ನೈವೇದ್ಯ ಅರ್ಪಿಸುತ್ತಾರೆ.

ಸುರೇಶ ನಾಯಕ
| Edited By: |

Updated on:Jul 17, 2025 | 1:25 PM

Share
ಈ ಗ್ರಾಮದಲ್ಲಿ ನಡೆಯುವ ಮರಿಗೆಮ್ಮ ದೇವಿಯ ಜಾತ್ರೆ ಬಹಳ ವಿಶೇಷವಾಗಿದೆ. ಪುರಿ ಜಗನ್ನಾಥ ಮಂದಿರದ ಜಾತ್ರೆಯಂತೆಯೇ ಇಲ್ಲಿನ ಮರಿಗೆಮ್ಮ ದೇವಿಯ ಜಾತ್ರೆ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಈ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿವಿಜೃಂಭಣೆಯಿಂದ ಆಚರಿಸುತ್ತಾರೆ.

ಈ ಗ್ರಾಮದಲ್ಲಿ ನಡೆಯುವ ಮರಿಗೆಮ್ಮ ದೇವಿಯ ಜಾತ್ರೆ ಬಹಳ ವಿಶೇಷವಾಗಿದೆ. ಪುರಿ ಜಗನ್ನಾಥ ಮಂದಿರದ ಜಾತ್ರೆಯಂತೆಯೇ ಇಲ್ಲಿನ ಮರಿಗೆಮ್ಮ ದೇವಿಯ ಜಾತ್ರೆ ನಡೆಯುತ್ತದೆ. ಪ್ರತಿ ವರ್ಷ ನಡೆಯುವ ಈ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿವಿಜೃಂಭಣೆಯಿಂದ ಆಚರಿಸುತ್ತಾರೆ.

1 / 6
ಬೀದರ್ ತಾಲೂಕಿನ ಕಾಶೆಂಪುರ ಗ್ರಾಮದಲ್ಲಿ ನಡೆಯುವ ಮರಿಗೆಮ್ಮ ದೇವಿ ಜಾತ್ರೆ ಪ್ರತಿ ವರ್ಷ ಕೂಡ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಬೇರೆಡೆ ನಡೆಯುವ ಜಾತ್ರೆಗೆ ತಿಂಗಳುಗಳ ಕಾಲ ಸಿದ್ಧತೆ ಮಾಡಲಾಗುತ್ತದೆ. ಆದರೆ ಇಲ್ಲಿ ನಡೆಯುವ ಈ ಜಾತ್ರೆ ಒಂದೇ ದಿನದಲ್ಲಿ ಎಲ್ಲಾ ಸಿದ್ಧತೆಯನ್ನ ಮಾಡಿಕೊಂಡು, ಒಂದೇ ದಿನದಲ್ಲಿ ಮುಗಿಸುತ್ತಾರೆ. ಹೀಗಾಗಿ ಈ ಜಾತ್ರೆ ತುಂಬಾ ವಿಶೇಷವಾಗಿದೆ. 

ಬೀದರ್ ತಾಲೂಕಿನ ಕಾಶೆಂಪುರ ಗ್ರಾಮದಲ್ಲಿ ನಡೆಯುವ ಮರಿಗೆಮ್ಮ ದೇವಿ ಜಾತ್ರೆ ಪ್ರತಿ ವರ್ಷ ಕೂಡ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಬೇರೆಡೆ ನಡೆಯುವ ಜಾತ್ರೆಗೆ ತಿಂಗಳುಗಳ ಕಾಲ ಸಿದ್ಧತೆ ಮಾಡಲಾಗುತ್ತದೆ. ಆದರೆ ಇಲ್ಲಿ ನಡೆಯುವ ಈ ಜಾತ್ರೆ ಒಂದೇ ದಿನದಲ್ಲಿ ಎಲ್ಲಾ ಸಿದ್ಧತೆಯನ್ನ ಮಾಡಿಕೊಂಡು, ಒಂದೇ ದಿನದಲ್ಲಿ ಮುಗಿಸುತ್ತಾರೆ. ಹೀಗಾಗಿ ಈ ಜಾತ್ರೆ ತುಂಬಾ ವಿಶೇಷವಾಗಿದೆ. 

2 / 6
ಇನ್ನು ಈ ಜಾತ್ರೆಗೆ ಗ್ರಾಮದಿಂದ ಮದುವೆಯಾಗಿ ಹೋದ ಮಹಿಳೆಯವರು ಭಾಗವಹಿಸಲೇಬೇಕು ಎಂಬ ನಿಯಮ ಹಿನ್ನಲೆ ಆಗಮಿಸುತ್ತಾರೆ. ಬೆಳಗ್ಗೆಯಿಂದಲೇ ಸಿದ್ಧತೆ ಆರಂಭಿಸಿ, ಸಂಜೆ ವೇಳೆಗೆ ಗ್ರಾಮ ದೇವತೆಯ ನೂತನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಮಾಡಲಾಗುತ್ತದೆ. 

ಇನ್ನು ಈ ಜಾತ್ರೆಗೆ ಗ್ರಾಮದಿಂದ ಮದುವೆಯಾಗಿ ಹೋದ ಮಹಿಳೆಯವರು ಭಾಗವಹಿಸಲೇಬೇಕು ಎಂಬ ನಿಯಮ ಹಿನ್ನಲೆ ಆಗಮಿಸುತ್ತಾರೆ. ಬೆಳಗ್ಗೆಯಿಂದಲೇ ಸಿದ್ಧತೆ ಆರಂಭಿಸಿ, ಸಂಜೆ ವೇಳೆಗೆ ಗ್ರಾಮ ದೇವತೆಯ ನೂತನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಮಾಡಲಾಗುತ್ತದೆ. 

3 / 6
ಈ ಮರಿಗೆಮ್ಮ ದೇವಿಯ ಮೂರ್ತಿಯನ್ನ ಪ್ರತಿ ವರ್ಷ ಬದಲಾವಣೆ ಮಾಡಲಾಗುತ್ತದೆ. ದೇವತೆ ಮರಿಗೆಮ್ಮ ದೇವಿಯ ಮೂರ್ತಿಗಳನ್ನು ಜಾತ್ರಾ ಮಹೋತ್ಸವ ದಿನದಂದೇ ಒಂದೇ ದಿನದಲ್ಲೇ ತಯಾರಿಸುವ ಸಂಪ್ರದಾಯ ಮೊದಲಿನಿಂದಲೂ ಜಾರಿಯಲಿದ್ದು, ಈ ವರ್ಷ ಕೂಡ ಅದನ್ನ ಪಾಲಿಕೊಂಡು ಬರಲಾಗಿದೆ.

ಈ ಮರಿಗೆಮ್ಮ ದೇವಿಯ ಮೂರ್ತಿಯನ್ನ ಪ್ರತಿ ವರ್ಷ ಬದಲಾವಣೆ ಮಾಡಲಾಗುತ್ತದೆ. ದೇವತೆ ಮರಿಗೆಮ್ಮ ದೇವಿಯ ಮೂರ್ತಿಗಳನ್ನು ಜಾತ್ರಾ ಮಹೋತ್ಸವ ದಿನದಂದೇ ಒಂದೇ ದಿನದಲ್ಲೇ ತಯಾರಿಸುವ ಸಂಪ್ರದಾಯ ಮೊದಲಿನಿಂದಲೂ ಜಾರಿಯಲಿದ್ದು, ಈ ವರ್ಷ ಕೂಡ ಅದನ್ನ ಪಾಲಿಕೊಂಡು ಬರಲಾಗಿದೆ.

4 / 6
ಜಾತ್ರೆ ನಡೆಯುವ ದಿನದಂದು ಅಂದರೆ ಬೆಳಿಗ್ಗೆ ಗ್ರಾಮಸ್ಥರು ಮರದ ತುಕಡಿಗಳನ್ನು ಮೂರ್ತಿ ತಯಾರಿಸುವವರಿಗೆ ನೀಡುತ್ತಾರೆ. ಆ ಮರದ ತುಂಡುಗಳಿಂದ ಅವರು ಹೊಸ ಮೂರ್ತಿಗಳನ್ನು ಸಿದ್ಧಪಡಿಸುತ್ತಾರೆ. ಸಂಜೆಯ ವೇಳೆಯಲ್ಲಿ ಗ್ರಾಮಸ್ಥರು ಬಡಿಗೇರ ಮನೆಯಿಂದ ಬಾಜಾ ಭಜಂತ್ರಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಮೆರವಣಿಗೆ ಮೂಲಕ ಮೂರ್ತಿಯನ್ನ ತಂದು ಮರಿಗೆಮ್ಮ ದೇವಿಯ ಮಂದಿರದಲ್ಲಿ ಪ್ರತಿಷ್ಠಾಪಿಸುತ್ತಾರೆ.

ಜಾತ್ರೆ ನಡೆಯುವ ದಿನದಂದು ಅಂದರೆ ಬೆಳಿಗ್ಗೆ ಗ್ರಾಮಸ್ಥರು ಮರದ ತುಕಡಿಗಳನ್ನು ಮೂರ್ತಿ ತಯಾರಿಸುವವರಿಗೆ ನೀಡುತ್ತಾರೆ. ಆ ಮರದ ತುಂಡುಗಳಿಂದ ಅವರು ಹೊಸ ಮೂರ್ತಿಗಳನ್ನು ಸಿದ್ಧಪಡಿಸುತ್ತಾರೆ. ಸಂಜೆಯ ವೇಳೆಯಲ್ಲಿ ಗ್ರಾಮಸ್ಥರು ಬಡಿಗೇರ ಮನೆಯಿಂದ ಬಾಜಾ ಭಜಂತ್ರಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಮೆರವಣಿಗೆ ಮೂಲಕ ಮೂರ್ತಿಯನ್ನ ತಂದು ಮರಿಗೆಮ್ಮ ದೇವಿಯ ಮಂದಿರದಲ್ಲಿ ಪ್ರತಿಷ್ಠಾಪಿಸುತ್ತಾರೆ.

5 / 6
ತಾವು ಮಾಡಿದ ನೈವೈದ್ಯವನ್ನ ಗ್ರಾಮದ ಪ್ರತಿಯೊಬ್ಬರು ತಂದು ದೇವಿಗೆ ಅರ್ಪಿಸಿ ಆ ನಂತರ ಜನರು ಊಟ ಮಾಡುವ ಸಂಪ್ರದಾಯವಿದೆ. ಮರಿಗೆಮ್ಮ ದೇವಿಯ ಜಾತ್ರೆಯ ಸಮಯದಲ್ಲಿ ಒಂದು ಸ್ವಲ್ಪವಾದರೂ ಮಳೆ ಬಂದೆ ಬರುತ್ತದೆ ಇದು ದೇವಿಯ ಶಕ್ತಿ ಎಂದು ಗ್ರಾಮಸ್ಥರ ನಂಬಿಕೆ ಆಗಿದೆ.

ತಾವು ಮಾಡಿದ ನೈವೈದ್ಯವನ್ನ ಗ್ರಾಮದ ಪ್ರತಿಯೊಬ್ಬರು ತಂದು ದೇವಿಗೆ ಅರ್ಪಿಸಿ ಆ ನಂತರ ಜನರು ಊಟ ಮಾಡುವ ಸಂಪ್ರದಾಯವಿದೆ. ಮರಿಗೆಮ್ಮ ದೇವಿಯ ಜಾತ್ರೆಯ ಸಮಯದಲ್ಲಿ ಒಂದು ಸ್ವಲ್ಪವಾದರೂ ಮಳೆ ಬಂದೆ ಬರುತ್ತದೆ ಇದು ದೇವಿಯ ಶಕ್ತಿ ಎಂದು ಗ್ರಾಮಸ್ಥರ ನಂಬಿಕೆ ಆಗಿದೆ.

6 / 6

Published On - 1:23 pm, Thu, 17 July 25

Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!