ಇಳಕಲ್​ನಲ್ಲಿ ಬೈಕ್ ಸವಾರರ ದೇಶ ಪ್ರೇಮ: ಫೋಟೋಗಳಲ್ಲಿ ನೋಡಿ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2023 | 10:42 AM

Bagalkote News: ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

1 / 6
ಇಂದು(ಆ.15) ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಕರ್ನಾಟಕದ ರಾಮನಗರದಲ್ಲಿ ಬರೊಬ್ಬರಿ 600 ಅಡಿ ಎತ್ತರದ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಇಲ್ಲೊಬ್ಬ ಬೈಕ್ ‌ಸವಾರ ಮೇಲೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ್ದಾನೆ.

ಇಂದು(ಆ.15) ದೇಶದಾದ್ಯಂತ 77 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಕರ್ನಾಟಕದ ರಾಮನಗರದಲ್ಲಿ ಬರೊಬ್ಬರಿ 600 ಅಡಿ ಎತ್ತರದ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಇಲ್ಲೊಬ್ಬ ಬೈಕ್ ‌ಸವಾರ ಮೇಲೆ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿದ್ದಾನೆ.

2 / 6
ಹೌದು, ವಿವಿಧ ರೀತಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ  ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡಿದ್ದಾರೆ.

ಹೌದು, ವಿವಿಧ ರೀತಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದರಂತೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಿವಾಸಿ ವೀರೇಶ್ ಕುಂದರಗಿಮಠ ಎಂಬುವವರು ಇಳಕಲ್‌ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರಂಗಾ ಹಿಡಿದು ಬೈಕ್‌ ಮೇಲೆ ನಿಂತು ಸವಾರಿ ಮಾಡಿದ್ದಾರೆ.

3 / 6
ಕೈಯಲ್ಲಿ ರಾಷ್ಟ್ರಧ್ವಜ ಹಿಡಿದರೆ, ಇತ್ತ ಬೈಕ್ ಹ್ಯಾಂಡಲ್​ಗೆ ಕನ್ನಡ ಧ್ವಜವನ್ನು ಕಟ್ಟಿದ್ದಾರೆ. ಜೊತೆಗೆ ಒಂದು ಕಿಮೀ ಸವಾರಿ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವೀರೇಶ್ ಕುಂದರಗಿಮಠ ಸಂಭ್ರಮಿಸಿದ್ದಾರೆ.

ಕೈಯಲ್ಲಿ ರಾಷ್ಟ್ರಧ್ವಜ ಹಿಡಿದರೆ, ಇತ್ತ ಬೈಕ್ ಹ್ಯಾಂಡಲ್​ಗೆ ಕನ್ನಡ ಧ್ವಜವನ್ನು ಕಟ್ಟಿದ್ದಾರೆ. ಜೊತೆಗೆ ಒಂದು ಕಿಮೀ ಸವಾರಿ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವೀರೇಶ್ ಕುಂದರಗಿಮಠ ಸಂಭ್ರಮಿಸಿದ್ದಾರೆ.

4 / 6
ಇನ್ನು ವೀರೇಶ್ ಕುಂದರಗಿಮಠ ಈ ಹಿಂದೆ 500 ಕಿಮೀ ಹ್ಯಾಂಡಲ್‌ ಹಿಡಿಯದೆ ಬೈಕ್ ಓಡಿಸಿ ಸಾಧನೆ‌ ಮಾಡಿದ್ದಾರೆ. ಇದೀಗ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ತಮ್ಮ ಸ್ಟೈಲ್​ನಲ್ಲಿಯೇ ಸಂಭ್ರಮಿಸಿದ್ದಾರೆ.

ಇನ್ನು ವೀರೇಶ್ ಕುಂದರಗಿಮಠ ಈ ಹಿಂದೆ 500 ಕಿಮೀ ಹ್ಯಾಂಡಲ್‌ ಹಿಡಿಯದೆ ಬೈಕ್ ಓಡಿಸಿ ಸಾಧನೆ‌ ಮಾಡಿದ್ದಾರೆ. ಇದೀಗ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ತಮ್ಮ ಸ್ಟೈಲ್​ನಲ್ಲಿಯೇ ಸಂಭ್ರಮಿಸಿದ್ದಾರೆ.

5 / 6
ಇದೇ ರೀತಿಯಾಗಿ ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಟಿ ಗ್ರಾಮದ ಜಮೀನಿನಲ್ಲಿ ರೈತರ ಮಕ್ಕಳು ದ್ವಜಾರೋಹಣ ನೆರವೇರಿಸಿದ್ದಾರೆ.

ಇದೇ ರೀತಿಯಾಗಿ ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಟಿ ಗ್ರಾಮದ ಜಮೀನಿನಲ್ಲಿ ರೈತರ ಮಕ್ಕಳು ದ್ವಜಾರೋಹಣ ನೆರವೇರಿಸಿದ್ದಾರೆ.

6 / 6
ಹೌದು, ಮೆಕ್ಕೆಜೋಳದ ಬೆಳೆಯ ನಡುವೆ ರೈತ ಕುಟುಂಬದ ಮಕ್ಕಳು ಜಮೀನನಲ್ಲೂ ದ್ವಜಾರೋಹಣ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

ಹೌದು, ಮೆಕ್ಕೆಜೋಳದ ಬೆಳೆಯ ನಡುವೆ ರೈತ ಕುಟುಂಬದ ಮಕ್ಕಳು ಜಮೀನನಲ್ಲೂ ದ್ವಜಾರೋಹಣ ಮಾಡುವ ಮೂಲಕ ದೇಶಾಭಿಮಾನ ಮೆರೆದಿದ್ದಾರೆ.

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us