AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾದ 3 ತಿಂಗಳಿಗೆ ಬೆಂಗಳೂರಿನಲ್ಲಿ ಕೋಟ್ಯಾಧಿಪತಿ ಮಂಗಳಮುಖಿ ಹತ್ಯೆ!

ಕೋಟ್ಯಾಧಿಪತಿಯಾಗಿರುವ ಬೆಂಗಳೂರಿನ ಮಂಗಳಮುಖಿ ತನುಶ್ರೀ ಕೊಲೆಯಾಗಿದೆ. ಮದುವೆಯಾದ ಮೂರು ತಿಂಗಳಿಗೆ ತನುಶ್ರೀ ಹತ್ಯೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಮೂರು ದಿನಗಳ ಹಿಂದೆ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳಮುಖಿ ತನುಶ್ರೀ ಕನ್ನಡಪರ ಸಂಘಟನೆಗಳ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.

ರಮೇಶ್ ಬಿ. ಜವಳಗೇರಾ
|

Updated on:Apr 20, 2025 | 5:51 PM

Share
ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ (Transgender) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಕೆ.ಆರ್.ಪುರಂನ ಬಸವೇಶ್ವರನಗರದ (Basaveshwarnagar) ಗಾಯತ್ರಿ ಲೇಔಟ್​​ನಲ್ಲಿ ನಡೆದಿದೆ.

ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ (Transgender) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಕೆ.ಆರ್.ಪುರಂನ ಬಸವೇಶ್ವರನಗರದ (Basaveshwarnagar) ಗಾಯತ್ರಿ ಲೇಔಟ್​​ನಲ್ಲಿ ನಡೆದಿದೆ.

1 / 8
ಕೋಟಿ ಕೋಟಿ ರೂಪಾಯಿ ಹಣವನ್ನು ಸಂಪಾದಿಸಿ ಕೋಟ್ಯಾಧಿಪತಿ ಆಗಿದ್ದ ಹಾಗೂ ಕನ್ನಡಪರ ಸಂಘಟನೆಗಳ ಮೂಲಕ ನಾಡಿನ ಸೇವೆಗೆ ಹೋರಾಡುತ್ತಿದ್ದ ಮಂಗಳಮುಖಿ ತನುಶ್ರೀ, ಮದುವೆ ಮಾಡಿಕೊಂಡು ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ.

ಕೋಟಿ ಕೋಟಿ ರೂಪಾಯಿ ಹಣವನ್ನು ಸಂಪಾದಿಸಿ ಕೋಟ್ಯಾಧಿಪತಿ ಆಗಿದ್ದ ಹಾಗೂ ಕನ್ನಡಪರ ಸಂಘಟನೆಗಳ ಮೂಲಕ ನಾಡಿನ ಸೇವೆಗೆ ಹೋರಾಡುತ್ತಿದ್ದ ಮಂಗಳಮುಖಿ ತನುಶ್ರೀ, ಮದುವೆ ಮಾಡಿಕೊಂಡು ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ.

2 / 8
 ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿದ್ದು, ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಮೂರು ದಿನಗಳ ಹಿಂದೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯಿತ್ರಿ ಲೇಔಟ್‌ನ ಮನೆಯಲ್ಲಿ ಮಾರಕಾಸ್ತ್ರದಿಂದ ಇರಿದು ಬರ್ಬರ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿದ್ದು, ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಮೂರು ದಿನಗಳ ಹಿಂದೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯಿತ್ರಿ ಲೇಔಟ್‌ನ ಮನೆಯಲ್ಲಿ ಮಾರಕಾಸ್ತ್ರದಿಂದ ಇರಿದು ಬರ್ಬರ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

3 / 8
ಇನ್ನು ಮಂಗಳಮುಖಿ ತನುಶ್ರೀ ಅವರು ಕಳೆದ ಮೂರು ದಿನಗಳ ಹಿಂದೆಯೇ ಕೊಲೆ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೃತ್ಯದ ಬಳಿಕ ಪತಿ ಜಗನ್ನಾತ್ ಹಾಗೂ ತನುಶ್ರೀ ಅವರ ಮನೆಗೆಲಸದಾಕೆ ಇಬ್ಬರೂ ಪರಾರಿ ಆಗಿದ್ದಾರೆ.

ಇನ್ನು ಮಂಗಳಮುಖಿ ತನುಶ್ರೀ ಅವರು ಕಳೆದ ಮೂರು ದಿನಗಳ ಹಿಂದೆಯೇ ಕೊಲೆ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೃತ್ಯದ ಬಳಿಕ ಪತಿ ಜಗನ್ನಾತ್ ಹಾಗೂ ತನುಶ್ರೀ ಅವರ ಮನೆಗೆಲಸದಾಕೆ ಇಬ್ಬರೂ ಪರಾರಿ ಆಗಿದ್ದಾರೆ.

4 / 8
 40 ವರ್ಷಕ್ಕೆ ಬರುವ ವೇಳೆಗೆ ತನುಶ್ರೀ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತೆ ಆಗಿದ್ದರು. ಹಾಗೇ ಸಂಗಮ ಎನ್ ಜಿಓ ನಡೆಸುತ್ತಿದ್ದ ತನುಶ್ರೀ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.  ಆಸ್ತಿವಂತೆ ಎಂಬುದನ್ನು ನೋಡಿದ್ದ ಜಗನ್ನಾಥ್ ಮದುವೆ ಮಾಡಿಕೊಂಡು 3 ತಿಂಗಳು ಜೊತೆಯಲ್ಲಿದ್ದು, ಇದೀಗ ಹಣಕ್ಕಾಗಿ ಕೊಲೆ ಬೆನ್ನಲ್ಲಿಯೇ ಪರಾರಿ ಆಗಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ.

40 ವರ್ಷಕ್ಕೆ ಬರುವ ವೇಳೆಗೆ ತನುಶ್ರೀ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತೆ ಆಗಿದ್ದರು. ಹಾಗೇ ಸಂಗಮ ಎನ್ ಜಿಓ ನಡೆಸುತ್ತಿದ್ದ ತನುಶ್ರೀ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆಸ್ತಿವಂತೆ ಎಂಬುದನ್ನು ನೋಡಿದ್ದ ಜಗನ್ನಾಥ್ ಮದುವೆ ಮಾಡಿಕೊಂಡು 3 ತಿಂಗಳು ಜೊತೆಯಲ್ಲಿದ್ದು, ಇದೀಗ ಹಣಕ್ಕಾಗಿ ಕೊಲೆ ಬೆನ್ನಲ್ಲಿಯೇ ಪರಾರಿ ಆಗಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ.

5 / 8
ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆ.ಆರ್.ಪುರಂ ಠಾಣೆಯ ಪೋಲಿಸರು ಪರಿಶೀಲನೆ ಮಾಡಿದ್ದಾರೆ. ಇನ್ನು ನೂರಾರು ಮಂಗಳಮುಖಿಯರು ಜಮಾವಣೆಗೊಂಡಿದ್ದು,  ಮಂಗಳಮುಖಿಯರಿಗೆ ನಾಯಕಿಯಂತಿದ್ದ ತನುಶ್ರೀಯನ್ನು ಕಳೆದುಕೊಂಡು ದುಃಖಿತರಾಗಿದ್ದಾರೆ.

ಈ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆ.ಆರ್.ಪುರಂ ಠಾಣೆಯ ಪೋಲಿಸರು ಪರಿಶೀಲನೆ ಮಾಡಿದ್ದಾರೆ. ಇನ್ನು ನೂರಾರು ಮಂಗಳಮುಖಿಯರು ಜಮಾವಣೆಗೊಂಡಿದ್ದು, ಮಂಗಳಮುಖಿಯರಿಗೆ ನಾಯಕಿಯಂತಿದ್ದ ತನುಶ್ರೀಯನ್ನು ಕಳೆದುಕೊಂಡು ದುಃಖಿತರಾಗಿದ್ದಾರೆ.

6 / 8
ತನುಶ್ರೀ ಬಳಿ ಕೋಟಿ ಕೋಟಿ ಆಸ್ತಿ ಇರುವುದನ್ನು ನೋಡಿದ್ದ ಜಗನ್ನಾಥ್ ಆಸ್ತಿ ಹೊಡೆಯುವುದಕ್ಕೆಂದಲೇ ಮದುವೆ ಮಾಡಿಕೊಂಡಿದ್ದಾನೆಯೇ ಎಂಬ ಶಂಕೆಯೂ ಪೊಲೀಸರಿಗೆ ವ್ಯಕ್ತವಾಗಿದೆ. ಹೀಗಾಗಿ ನಾಪತ್ತೆಯಾಗಿರುವ ಪತಿ ಜಗನ್ನಾಥ್ ಹಾಗೂ ತನುಶ್ರೀ ಮನೆಯ ಕೆಲಸದಾಕೆ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ತನುಶ್ರೀ ಬಳಿ ಕೋಟಿ ಕೋಟಿ ಆಸ್ತಿ ಇರುವುದನ್ನು ನೋಡಿದ್ದ ಜಗನ್ನಾಥ್ ಆಸ್ತಿ ಹೊಡೆಯುವುದಕ್ಕೆಂದಲೇ ಮದುವೆ ಮಾಡಿಕೊಂಡಿದ್ದಾನೆಯೇ ಎಂಬ ಶಂಕೆಯೂ ಪೊಲೀಸರಿಗೆ ವ್ಯಕ್ತವಾಗಿದೆ. ಹೀಗಾಗಿ ನಾಪತ್ತೆಯಾಗಿರುವ ಪತಿ ಜಗನ್ನಾಥ್ ಹಾಗೂ ತನುಶ್ರೀ ಮನೆಯ ಕೆಲಸದಾಕೆ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

7 / 8
40 ವರ್ಷದ ಮಂಗಳಮುಖಿಯನ್ನು ಜೀವನ ಕೊಡುವುದಾಗಿ ಮದುವೆ ಮಾಡಿಕೊಂಡು, ಆಸ್ತಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಇದಕ್ಕೆ ತನುಶ್ರೀ ಮನೆ ಕೆಲಸದಾಕೆಯೂ ಸಾಥ್ ನೀಡಿರುವ ಅನುಮಾನವೂ ಸಹ ಇದೆ. ಹೀಗಾಗಿ ಜಗನ್ನಾಥ್ ಮತ್ತು ಮನೆ ಕೆಲಸದ ಮಹಿಳೆ ಇಬ್ಬರೂ ಸಂಬಂಧ ಹೊಂದಿದ್ದರೇ ಎಂಬುದನ್ನು ಪತ್ತೆ ಮಾಡಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

40 ವರ್ಷದ ಮಂಗಳಮುಖಿಯನ್ನು ಜೀವನ ಕೊಡುವುದಾಗಿ ಮದುವೆ ಮಾಡಿಕೊಂಡು, ಆಸ್ತಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಇದಕ್ಕೆ ತನುಶ್ರೀ ಮನೆ ಕೆಲಸದಾಕೆಯೂ ಸಾಥ್ ನೀಡಿರುವ ಅನುಮಾನವೂ ಸಹ ಇದೆ. ಹೀಗಾಗಿ ಜಗನ್ನಾಥ್ ಮತ್ತು ಮನೆ ಕೆಲಸದ ಮಹಿಳೆ ಇಬ್ಬರೂ ಸಂಬಂಧ ಹೊಂದಿದ್ದರೇ ಎಂಬುದನ್ನು ಪತ್ತೆ ಮಾಡಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

8 / 8

Published On - 5:49 pm, Sun, 20 April 25

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ