AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು: ಯಾರು ಯಾವ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ರು? ಇಲ್ಲಿವೆ ಫೋಟೋಸ್

ಲೋಕಸಭಾ ಟಿಕೆಟ್​ ಘೋಷಣೆ ಆಗಿದ್ದು, ಈಗಾಗಲೇ ಅಭ್ಯರ್ಥಿಗಳು ಪ್ರಚಾರವನ್ನ ಕೈಗೊಂಡಿದ್ದಾರೆ. ಅದರಂತೆ ಇಂದು(ಏ.01) ಬಿಜೆಪಿಯ ಹಲವಾರು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಕಿರಣ್ ಹನುಮಂತ್​ ಮಾದಾರ್
|

Updated on:Apr 01, 2024 | 3:33 PM

Share
ತುಮಕೂರಿನಲ್ಲಿ ವಿ.ಸೋಮಣ್ಣ ಅವರು ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರು ಸಾಥ್​ ನೀಡಿದರು.

ತುಮಕೂರಿನಲ್ಲಿ ವಿ.ಸೋಮಣ್ಣ ಅವರು ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರು ಸಾಥ್​ ನೀಡಿದರು.

1 / 6
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್​ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಯದುವೀರ್‌ಗೆ ತಾಯಿ ಪ್ರಮೋದಾದೇವಿ, ಶಾಸಕ ಶ್ರೀವತ್ಸ ಸಾಥ್ ನೀಡಿದರು. ಮೈಸೂರು ಡಿಸಿ ಕಚೇರಿಯಲ್ಲಿ ಜ್ಯೋತಿಷಿಗಳ ಸೂಚನೆಯಂತೆ ಯದುವೀರ್ ನಾಮಪತ್ರ ಸಲ್ಲಿಸಿದರು.

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್​ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಯದುವೀರ್‌ಗೆ ತಾಯಿ ಪ್ರಮೋದಾದೇವಿ, ಶಾಸಕ ಶ್ರೀವತ್ಸ ಸಾಥ್ ನೀಡಿದರು. ಮೈಸೂರು ಡಿಸಿ ಕಚೇರಿಯಲ್ಲಿ ಜ್ಯೋತಿಷಿಗಳ ಸೂಚನೆಯಂತೆ ಯದುವೀರ್ ನಾಮಪತ್ರ ಸಲ್ಲಿಸಿದರು.

2 / 6
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಇಂದು ಗೋವಿಂದ್​ ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಜಿ ಎಚ್ ತಿಪ್ಪಾರೆಡ್ಡಿ, ಶ್ರೀ ಎಸ್.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಎಸ್ ನವೀನ್ ಹಾಗೂ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರು, ಜೆಡಿಸ್ ಪಕ್ಷದ ಜಿಲ್ಲಾಧ್ಯಕ್ಷರು ಜೊತೆಗಿದ್ದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿಯಾಗಿ ಇಂದು ಗೋವಿಂದ್​ ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಜಿ ಎಚ್ ತಿಪ್ಪಾರೆಡ್ಡಿ, ಶ್ರೀ ಎಸ್.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಎಸ್ ನವೀನ್ ಹಾಗೂ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರು, ಜೆಡಿಸ್ ಪಕ್ಷದ ಜಿಲ್ಲಾಧ್ಯಕ್ಷರು ಜೊತೆಗಿದ್ದರು.

3 / 6
 ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಸುಧಾಕರ್​ಗೆ ದೊಡ್ಡಬಳ್ಳಾಪುರ ಶಾಸಕ ದೀರಜ್, ತಂದೆ ಕೇಶವರೆಡ್ಡಿ ಸಾಥ್ ನೀಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿ ಸುಧಾಕರ್​ಗೆ ದೊಡ್ಡಬಳ್ಳಾಪುರ ಶಾಸಕ ದೀರಜ್, ತಂದೆ ಕೇಶವರೆಡ್ಡಿ ಸಾಥ್ ನೀಡಿದರು.

4 / 6
4ನೇ ಬಾರಿ ಬೆಂಗಳೂರು ಸೆಂಟ್ರಲ್​ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಅವರು ಇಂದು(ಏ.01) ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.  ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಸಾಥ್‌ ನೀಡಿದರು.

4ನೇ ಬಾರಿ ಬೆಂಗಳೂರು ಸೆಂಟ್ರಲ್​ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಅವರು ಇಂದು(ಏ.01) ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.  ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಸಾಥ್‌ ನೀಡಿದರು.

5 / 6
ಕೋಲಾರ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಇಂದು ನಾಮಪತ್ರ ಸಲ್ಲಿಸಿದರು. ತಾಯಿ ಹಾಗೂ ಪತ್ನಿ ಜೊತೆಗೆ ಬಂದಿದ್ದ ಅವರು ಕೋಲಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ ಅವರಿಗೆ ನಾಮಪತ್ರ ಸಲ್ಲಿಸಿದರು.

ಕೋಲಾರ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಇಂದು ನಾಮಪತ್ರ ಸಲ್ಲಿಸಿದರು. ತಾಯಿ ಹಾಗೂ ಪತ್ನಿ ಜೊತೆಗೆ ಬಂದಿದ್ದ ಅವರು ಕೋಲಾರ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷಾ ಅವರಿಗೆ ನಾಮಪತ್ರ ಸಲ್ಲಿಸಿದರು.

6 / 6

Published On - 3:32 pm, Mon, 1 April 24