ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶನ: 8 ದಿನ, ಒಟ್ಟು 135 ಕಿಮೀ ಪಾದಯಾತ್ರೆ ಅಂತ್ಯ

Updated on: Aug 10, 2024 | 8:48 PM

ಬಿಜೆಪಿ-ಜೆಡಿಎಸ್​ ಪಾದಯಾತ್ರೆ ಇಂದು ಅಂತ್ಯವಾಗಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ದೋಸ್ತಿ ನಾಯಕರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ನಾಯಕರು ಪಾದಯಾತ್ರೆ ಮಾಡಿದ್ದಾರೆ. ಸಾಕಷ್ಟು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

1 / 6
ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿ ಭರ್ಜರಿ ಶಕ್ತಿ ಪ್ರದರ್ಶಿಸಿದೆ. ಮುಡಾ ಯಾತ್ರೆ ಸಮಾರೋಪ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕು ಅಂತಾ ದೋಸ್ತಿ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಿಎಂಗಳು, ಹೆಚ್‌ಡಿ ಕುಮಾರಸ್ವಾಮಿ, ಬಿಎಸ್‌ ಯಡಿಯೂರಪ್ಪ ಸೇರಿ ಘಟಾನುಘಟಿ ನಾಯಕರು ಹಾಗೂ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

2 / 6
ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

ಬಿಜೆಪಿ-ಜೆಡಿಎಸ್​​ ಎಂಟು ದಿನಗಳ ಕಾಲ ಒಟ್ಟು 135 ಕಿ.ಮೀ. ಪಾದಯಾತ್ರೆ ಮಾಡಿದೆ. ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಸಮಾರೋಪ ಸಮಾರಂಭ ಮಾಡುವ ಮೂಲಕ ಪಾದಯಾತ್ರೆ ಅಂತ್ಯವಾಗಿದೆ.

3 / 6
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮುಖ್ಯಮಂತ್ರಿ ಮತ್ತು ಡಿಸಿಎಂ ವಿರುದ್ಧ ಗುಡುಗಿದ್ದಾರೆ. ಸಿದ್ದರಾಮಯ್ಯ ನಿಮ್ಮನ್ನು ಮನೆಗೆ ಕಳುಹಿಸುತ್ತೇನೆ ಎಂದ ಅವರು, ಶಿವಕುಮಾರ್‌ ಮುಂದಿನ ಭವಿಷ್ಯ ನೋಡ್ಕೊಳ್ಳಿ ಅಂತ ಅಬ್ಬರಿಸಿದ್ದಾರೆ.

4 / 6
ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನೇ ಮುಖ್ಯವಾಗಿ ಟಾರ್ಗೆಟ್ ಮಾಡಿ ಮಾತ್ನಾಡಿದಾರೆ. ನಿನ್ನೆ ಡಿಕೆ ಶಿವಕುಮಾರ್​ ನೀಡಿದ್ದ ಒಂದೊಂದು ಮಾತಿಗೂ ತಿರುಗೇಟು ಕೊಟ್ಟಿದ್ದಾರೆ.

5 / 6
5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

5,000 ನಿವೇಶನಗಳನ್ನ ನುಂಗಿದ ಆ 14 ನಿವೇಶನ ಅಂತಾ ಮುಡಾ ಹಗರಣದ ಪುಸ್ತಕವನ್ನು ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗಿದೆ.

6 / 6
ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಬಿಜೆಪಿ, ಜೆಡಿಎಸ್ ದೋಸ್ತಿ ಪಾದಯಾತ್ರೆಗೆ ಎರಡೂ ಪಕ್ಷದ ಸಾವಿರಾರು ಸಂಖ್ಯೆ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದರು.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us