- Kannada News Photo gallery BJP Leader BS Yediyurappa Birthday Know interesting facts and life of BS Yediyurappa Photos here
BS Yediyurappa: ರೈಸ್ ಮಿಲ್ ಕೆಲಸದಿಂದ ಮುಖ್ಯಮಂತ್ರಿವರೆಗೆ; ಬಿಎಸ್ ಯಡಿಯೂರಪ್ಪ ಬಗ್ಗೆ ಕುತೂಹಲಕಾರಿ ಮಾಹಿತಿ ಇಲ್ಲಿದೆ
ಬಿಎಸ್ ಯಡಿಯೂರಪ್ಪ ಹುಟ್ಟುಹಬ್ಬ: ಮಂಡ್ಯದಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ವಲಸೆ ಹೋದ ಬಿಎಸ್ ಯಡಿಯೂರಪ್ಪ, 1965ರಲ್ಲಿ ಅಲ್ಲಿನ ರೈಸ್ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿಂದ ಯಡಿಯೂರಪ್ಪನವರ ಅದೃಷ್ಟವೇ ಬದಲಾಯಿತು.
Updated on: Feb 27, 2022 | 8:00 AM

ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಬಡ ಕುಟುಂಬವೊಂದರಲ್ಲಿ ಸಿದ್ಧಲಿಂಗಪ್ಪ ಮತ್ತು ಪುಟ್ಟತಾಯಮ್ಮ ಅವರ ಮಗನಾಗಿ ಬಿ.ಎಸ್. ಯಡಿಯೂರಪ್ಪ ಜನಿಸಿದರು. ಅವರು ತಮ್ಮ ಕಾಲೇಜು ದಿನಗಳಲ್ಲಿಯೇ ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಚಿಕ್ಕ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಯಡಿಯೂರಪ್ಪ ಕಾಲೇಜು ಶಿಕ್ಷಣವನ್ನು ಮುಗಿಸಿದ ನಂತರ ಕೆಲಸಕ್ಕಾಗಿ ಹುಡುಕುತ್ತಿದ್ದರು. ಮಂಡ್ಯದಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ವಲಸೆ ಹೋಗಿ, 1965ರಲ್ಲಿ ಅಲ್ಲಿನ ರೈಸ್ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿಂದ ಯಡಿಯೂರಪ್ಪನವರ ಅದೃಷ್ಟವೇ ಬದಲಾಯಿತು.

ತಾವು ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿಕಾರಿಪುರದ ವೀರಭದ್ರಶಾಸ್ತ್ರಿ ಶಂಕರ್ ರೈಸ್ ಮಿಲ್ನ ಮಾಲೀಕರ ಮಗಳು ಮೈತ್ರಾದೇವಿಯನ್ನು ಪ್ರೀತಿಸಿದ ಯಡಿಯೂರಪ್ಪ 1967ರಲ್ಲಿ ಅವರನ್ನು ಮದುವೆಯಾದರು. ಸಾಕಷ್ಟು ಶ್ರೀಮಂತರಾಗಿದ್ದ ಮಾವನ ಮಿಲ್ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ಹೊಸ ಜೀವನವನ್ನು ಆರಂಭಿಸಿದರು.

Hindu and Muslims should lead life as brothers opines former cm bs yediyurappa in Bangalore

ಇದರಿಂದ ಸರ್ಕಾರ ಪತನಗೊಂಡು, ರಾಷ್ಟ್ರಪತಿ ಆಡಳಿತ ಶುರುವಾಯಿತು. ನಂತರ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡ ಪರಿಣಾಮ 2007ರ ನವೆಂಬರ್ 12ರಂದು ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದರು.

2007ರಲ್ಲಿ ಮೊದಲ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಮೂರು ದಿನ ಕೂಡ ಉಳಿಯಲಿಲ್ಲ. ದಕ್ಷಿಣ ಭಾರತದ ಮೊದಲ ಬಿಜೆಪಿ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಿಎಸ್ ಯಡಿಯೂರಪ್ಪ, 2012ರಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ ಜೈಲು ಸೇರುವ ಮೂಲಕ ಅಧಿಕಾರದಲ್ಲಿದ್ದಾಗಲೇ ಸೆರೆವಾಸ ಅನುಭವಿಸಿದ ಮೊದಲ ಮುಖ್ಯಮಂತ್ರಿಯೆಂಬ ಕುಖ್ಯಾತಿಯನ್ನೂ ಪಡೆದರು. ಈ ಘಟನೆ ಅವರ ರಾಜಕೀಯ ಜೀವನದಲ್ಲಿ ದೊಡ್ಡ ಕಪ್ಪುಚುಕ್ಕಿಯಾಗಿಯೇ ಉಳಿಯಿತು.

3 ದಶಕಗಳ ಕಾಲ ರೋಚಕವಾದ ರಾಜಕೀಯ ತಿರುವುಗಳನ್ನು ಕಂಡ ಯಡಿಯೂರಪ್ಪನವರಿಗೆ ಈ ಸರ್ಕಾರದಲ್ಲಿಯೂ ಸವಾಲುಗಳು ಎದುರಾಯಿತು. 17 ಶಾಸಕರು ರಾಜೀನಾಮೆ ನೀಡಿದ್ದ ಸ್ಥಾನಗಳಿಗೆ ಮತ್ತೆ ಚುನಾವಣೆ ಮಾಡಿಸಿ, ಅಲ್ಲಿಯೂ ಆ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿ, ಗೆಲ್ಲಿಸಿಕೊಂಡು ಬಂದರು. ಇದರಿಂದ ಆ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಗರ ಅಸಮಾಧಾನಕ್ಕೂ ಕಾರಣದರಾದರು.

ಮತ್ತೊಂದೆಡೆ ಚುನಾವಣೆಯಲ್ಲಿ ಗೆದ್ದಿದ್ದ ಸಚಿವರಿಗೆ ಈ ಮೊದಲೇ ಆಶ್ವಾಸನೆ ನೀಡಿದಂತೆ ಸಚಿವ ಸ್ಥಾನ ಕೊಡಲೇಬೇಕಾದ ಅನಿವಾರ್ಯತೆಯಿತ್ತು. ಮೂಲ ಬಿಜೆಪಿಗರು ಮತ್ತು ವಲಸಿಗ ಬಿಜೆಪಿಗರ ನಡುವಿನ ಅಂತರವನ್ನು ಕಡಿಮೆ ಮಾಡದಿದ್ದರೆ ತಮ್ಮ ಖುರ್ಚಿಗೆ ಕಂಟಕ ಖಚಿತ ಎಂದರಿತ ಯಡಿಯೂರಪ್ಪ ಸಚಿವ ಸಂಪುಟ ಪುನಾರಚನೆ ಮಾಡಿ ವಲಸಿಗ ಶಾಸಕರಿಗೆ ಸಚಿವ ಸ್ಥಾನ ನೀಡಿದರು.

ಬಿ.ಎಸ್. ಯಡಿಯೂರಪ್ಪ (ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ) ಇದು ಕರ್ನಾಟಕದ ರಾಜಕಾರಣದಲ್ಲಿ ಮರೆಯಲಾಗದ ಹೆಸರು. ಕರ್ನಾಟಕದಲ್ಲಿ ಹೇಳ ಹೆಸರಿಲ್ಲದಂತಿದ್ದ ಬಿಜೆಪಿ (Karnataka BJP) ಪಕ್ಷಕ್ಕೆ ಅಡಿಪಾಯ ಹಾಕಿ, ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದವರು ಯಡಿಯೂರಪ್ಪ (BS Yediyurappa) ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ.

ಬರೋಬ್ಬರಿ 4 ಬಾರಿ ಕರ್ನಾಟಕದ ಮುಖ್ಯಮಂತ್ರಿ (Karnataka Chief Minister) ಸ್ಥಾನವನ್ನು ಏರಿರುವ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಯಡಿಯೂರಪ್ಪನವರದು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೆ, ಆರ್ಎಸ್ಎಸ್ (RSS) ಕಾರ್ಯಕರ್ತನಾಗಿ ಗುರುತಿಸಿಕೊಂಡು ಬಳಿಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಯಡಿಯೂರಪ್ಪ 3 ದಶಕಗಳಿಗೂ ಹೆಚ್ಚು ಕಾಲ ರಾಜಕೀಯದಲ್ಲಿ ಸವೆಸಿದ ಹಾದಿ ಸುಲಭದ್ದೇನಾಗಿರಲಿಲ್ಲ.

ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್. ಯಡಿಯೂರಪ್ಪ ಎಷ್ಟು ವಿವಾದಗಳಿಗೆ ಗುರಿಯಾಗಿದ್ದಾರೋ ಅಷ್ಟೇ ಸಾಧನೆಗಳನ್ನೂ ಮಾಡಿದ್ದಾರೆ. ರೈತನ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ 2008ರಲ್ಲಿ ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಕೃಷಿ ಬಜೆಟ್ ಅನ್ನು ಮಂಡನೆ ಮಾಡುವ ಮೂಲಕ ತಾನು ರೈತರ ಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

4 ಬಾರಿ ಕರ್ನಾಟಕದ ಮುಖ್ಯಮಂತ್ರಿಯಾದರೂ ಯಡಿಯೂರಪ್ಪ ಎಷ್ಟು ಅದೃಷ್ಟವಂತ ರಾಜಕಾರಣಿಯೇ ಅಷ್ಟೇ ದುರಾದೃಷ್ಟವಂತರೂ ಹೌದು. 4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯೂ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

ವಿರೋಧ ಪಕ್ಷದವರ ಆರೋಪಗಳ ಜೊತೆಗೆ ಸ್ವಪಕ್ಷೀಯರ ಅಸಮಾಧಾನ, ಆರೋಪ, ಆಕ್ರೋಶವನ್ನು ಶಮನ ಮಾಡುವುದು ಯಡಿಯೂರಪ್ಪನವರಿಗೆ ಸವಾಲಿನ ಕೆಲಸವಾಗಿತ್ತು. ಯಡಿಯೂರಪ್ಪಗೆ ಈಗ 78 ವರ್ಷ ವಯಸ್ಸಾಗಿದೆ. ಹಾಗಂತ ಯಡಿಯೂರಪ್ಪ ತೆರೆಮರೆಗೆ ಸರಿಯದೆ, ಬಹಳ ಚಟುವಟಿಕೆಯಿಂದಲೇ ಇದ್ದಾರೆ. ಯಡಿಯೂರಪ್ಪ ರಾಜಕೀಯವಾಗಿ ಸಕ್ರಿಯವಾಗಿದ್ದಾರೆ.

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜೊತೆಗೆ ಬಿಎಸ್ ಯಡಿಯೂರಪ್ಪ.

ಬಿಎಸ್ ಯಡಿಯೂರಪ್ಪ ಅವರ ಹಳೆಯ ಭಾವಚಿತ್ರ



















