ಯಡಿಯೂರಪ್ಪರನ್ನ ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಿಟಿ ರವಿ, ಏನು ವಿಶೇಷ..?
ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ವಿಪಕ್ಷ ನಾಯಕ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿ ಯೂಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಸಂಚಲನ ಮೂಡಿಸಿದೆ.
Updated on: Jul 19, 2023 | 3:17 PM

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಖಾಸಗಿ ನಿವಾಸದಲ್ಲಿ ಭೇಟಿ ಮಾಡಿದ್ದು, ಈ ವೇಳೆ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಭೇಟಿ ಸಿಟಿ ರವಿ ನೀಡಿ ಯಡಿಯೂರಪ್ಪ ಜತೆ ಕೆಲ ಸಮಯ ಮಹತ್ವದ ಚರ್ಚೆ ನಡೆಸಿದರು.

ವಿಪಕ್ಷ ನಾಯಕ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿ ಯೂಡಿಯೂರಪ್ಪ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ನಮಸ್ಕರಿಸಿರುವುದು ಸಂಚಲನ ಮೂಡಿಸಿದೆ.

ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಲು ಹೈಕಮಾಂಡ್ ಮುಂದಾಗಿದ್ದು, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟಿಯಲ್ಲಿ ಸಿಟಿ ರವಿ ಹೆಸರು ಸಹ ಇದೆ

ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಕರ್ನಾಟಕ ಬಿಜೆಪಿಯಲ್ಲಿ ಗುಂಪುಗಾರಿ, ಕಲಹಗಳು ಬಹಿರಂಗವಾಗಿವೆ. ಇದರ ಮಧ್ಯೆ ಸಿಟಿ ರವಿ ಅವರು ದಿಢೀರ್ ಬಿಎಸ್ವೈ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ



















