AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಪೋಗಳಿಗೆ ಬರಲಿದೆ ಬಿಎಂಟಿಸಿ ‘ಭೋಜನ ಬಂಡಿ’: ಬನ್ನಿ ಕುಳಿತು ಊಟ ಮಾಡೋಣ

BMTC mobile canteen: ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಮಾಡಲಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Feb 22, 2024 | 10:23 PM

Share
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕೆಲವು ನೌಕರರು ಹಳೆಯ ಸ್ಕ್ರ್ಯಾಪ್​ ಆದ ಬಸ್ ಅನ್ನು ತಮ್ಮ ಸಹೋದ್ಯೋಗಿಗಳಿಗಾಗಿ ಮೊಬೈಲ್ ಕ್ಯಾಂಟೀನ್‌ ಆಗಿ ನವೀಕರಿಸಿದ್ದಾರೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್​ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕೆಲವು ನೌಕರರು ಹಳೆಯ ಸ್ಕ್ರ್ಯಾಪ್​ ಆದ ಬಸ್ ಅನ್ನು ತಮ್ಮ ಸಹೋದ್ಯೋಗಿಗಳಿಗಾಗಿ ಮೊಬೈಲ್ ಕ್ಯಾಂಟೀನ್‌ ಆಗಿ ನವೀಕರಿಸಿದ್ದಾರೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್​ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ.

1 / 6
ಕ್ಯಾಂಟಿನ್​ಗಳು ಇಲ್ಲದ ಬಿಎಂಟಿಸಿ ಡಿಪೋಗಳಿಗೆ ಈ ಮೊಬೈಲ್​ ಕ್ಯಾಂಟೀನ್ ಸಿದ್ಧಪಡಿಸಲಾಗಿದೆ. ಹಳೆ BMTC ಬಸ್​ಗಳನ್ನೇ ಕ್ಯಾಂಟೀನ್​ಗಳಾಗಿ ಮಾಡಿದ್ದು, ಡಿಪೋಗಳಿಗೆ ಬರಲಿದೆ. ಭೋಜನ ಬಂಡಿ ಹೆಸರಿನ ಈ ಬಸ್ ಕ್ಯಾಂಟೀನ್​​ನ್ನು ಹೋಟೆಲ್ ಮಾದರಿಯಲ್ಲೇ ನಿರ್ಮಿಸಲಾಗಿದೆ.

ಕ್ಯಾಂಟಿನ್​ಗಳು ಇಲ್ಲದ ಬಿಎಂಟಿಸಿ ಡಿಪೋಗಳಿಗೆ ಈ ಮೊಬೈಲ್​ ಕ್ಯಾಂಟೀನ್ ಸಿದ್ಧಪಡಿಸಲಾಗಿದೆ. ಹಳೆ BMTC ಬಸ್​ಗಳನ್ನೇ ಕ್ಯಾಂಟೀನ್​ಗಳಾಗಿ ಮಾಡಿದ್ದು, ಡಿಪೋಗಳಿಗೆ ಬರಲಿದೆ. ಭೋಜನ ಬಂಡಿ ಹೆಸರಿನ ಈ ಬಸ್ ಕ್ಯಾಂಟೀನ್​​ನ್ನು ಹೋಟೆಲ್ ಮಾದರಿಯಲ್ಲೇ ನಿರ್ಮಿಸಲಾಗಿದೆ.

2 / 6
ಈ ಕುರಿತಾಗಿ ಬಿಎಂಟಿಸಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಎಂದು ಹೇಳಿದೆ.

ಈ ಕುರಿತಾಗಿ ಬಿಎಂಟಿಸಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್‌ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಎಂದು ಹೇಳಿದೆ.

3 / 6
ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಬಸ್‌ ಅನ್ನು ನವೀಕರಣ ಮಾಡಲಾಗಿದೆ. ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತನೆಯಾಗುವ ಮೊದಲು ಬಸ್ 10,64,298 ಕಿಲೋಮೀಟರ್ ದೂರ ಕ್ರಮಿಸಿತ್ತು.

ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಬಸ್‌ ಅನ್ನು ನವೀಕರಣ ಮಾಡಲಾಗಿದೆ. ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತನೆಯಾಗುವ ಮೊದಲು ಬಸ್ 10,64,298 ಕಿಲೋಮೀಟರ್ ದೂರ ಕ್ರಮಿಸಿತ್ತು.

4 / 6
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್ ಅವರು ಹೊಸ ಕ್ಯಾಂಟೀನ್ ವೀಕ್ಷಣೆ ಮಾಡಿದ್ದು, 
ತಾಂತ್ರಿಕ ಸಿಬ್ಬಂದಿಯನ್ನು ಶ್ಲಾಘಿಸಿದರು. ಈ ಮೊಬೈಲ್ ಕ್ಯಾಂಟೀನ್ ಊಟ ಸೇವನೆ ಮಾಡುವುದರೊಂದಿಗೆ ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್ ಅವರು ಹೊಸ ಕ್ಯಾಂಟೀನ್ ವೀಕ್ಷಣೆ ಮಾಡಿದ್ದು, ತಾಂತ್ರಿಕ ಸಿಬ್ಬಂದಿಯನ್ನು ಶ್ಲಾಘಿಸಿದರು. ಈ ಮೊಬೈಲ್ ಕ್ಯಾಂಟೀನ್ ಊಟ ಸೇವನೆ ಮಾಡುವುದರೊಂದಿಗೆ ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

5 / 6
ಮೊಬೈಲ್ ಕ್ಯಾಂಟೀನ್‌ನಲ್ಲಿ ಆಸನ, ಟೇಬಲ್, ಫ್ಯಾನ್ ಮತ್ತು ವಾಶ್ ಬೇಸಿನ್ ಇದೆ. ಇದಲ್ಲದೆ, ಇದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಹೊಂದಿದೆ. ಕ್ಯಾಂಟೀನ್‌ನ ಮೇಲ್ಭಾಗದಲ್ಲಿ ಗಾಜಿನ ಕಿಟಕಿ ಹೊಂದಿದ್ದು, ಗಾಳಿ ಮತ್ತು ಬೆಳಕು ಬರುವಂತೆ ವಿನ್ಯಾಸಗೊಳಿಸಲಾಗಿದೆ.

ಮೊಬೈಲ್ ಕ್ಯಾಂಟೀನ್‌ನಲ್ಲಿ ಆಸನ, ಟೇಬಲ್, ಫ್ಯಾನ್ ಮತ್ತು ವಾಶ್ ಬೇಸಿನ್ ಇದೆ. ಇದಲ್ಲದೆ, ಇದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಹೊಂದಿದೆ. ಕ್ಯಾಂಟೀನ್‌ನ ಮೇಲ್ಭಾಗದಲ್ಲಿ ಗಾಜಿನ ಕಿಟಕಿ ಹೊಂದಿದ್ದು, ಗಾಳಿ ಮತ್ತು ಬೆಳಕು ಬರುವಂತೆ ವಿನ್ಯಾಸಗೊಳಿಸಲಾಗಿದೆ.

6 / 6
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ