ಡಿಪೋಗಳಿಗೆ ಬರಲಿದೆ ಬಿಎಂಟಿಸಿ ‘ಭೋಜನ ಬಂಡಿ’: ಬನ್ನಿ ಕುಳಿತು ಊಟ ಮಾಡೋಣ
BMTC mobile canteen: ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಮಾಡಲಾಗಿದೆ.
Updated on: Feb 22, 2024 | 10:23 PM

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕೆಲವು ನೌಕರರು ಹಳೆಯ ಸ್ಕ್ರ್ಯಾಪ್ ಆದ ಬಸ್ ಅನ್ನು ತಮ್ಮ ಸಹೋದ್ಯೋಗಿಗಳಿಗಾಗಿ ಮೊಬೈಲ್ ಕ್ಯಾಂಟೀನ್ ಆಗಿ ನವೀಕರಿಸಿದ್ದಾರೆ. ಪೀಣ್ಯ ಮತ್ತು ಯಶವಂತಪುರ ಬಸ್ ಡಿಪೋಗಳಲ್ಲಿ ಈ ಬಸ್ ಕ್ಯಾಂಟೀನ್ ಸದ್ಯ ಚಾಲ್ತಿಯಲ್ಲಿ ಎನ್ನಲಾಗುತ್ತಿದೆ. ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಬಿಎಂಟಿಸಿ ನೌಕರರಿಗೆ ಉಪಹಾರ ಮತ್ತು ಮಧ್ಯಾಹ್ನದ ಊಟ ಮಾಡುವುದಕ್ಕೆ ಈ ಕ್ಯಾಂಟೀನ್ ಸಹಕಾರಿಯಾಗಲಿದೆ.

ಕ್ಯಾಂಟಿನ್ಗಳು ಇಲ್ಲದ ಬಿಎಂಟಿಸಿ ಡಿಪೋಗಳಿಗೆ ಈ ಮೊಬೈಲ್ ಕ್ಯಾಂಟೀನ್ ಸಿದ್ಧಪಡಿಸಲಾಗಿದೆ. ಹಳೆ BMTC ಬಸ್ಗಳನ್ನೇ ಕ್ಯಾಂಟೀನ್ಗಳಾಗಿ ಮಾಡಿದ್ದು, ಡಿಪೋಗಳಿಗೆ ಬರಲಿದೆ. ಭೋಜನ ಬಂಡಿ ಹೆಸರಿನ ಈ ಬಸ್ ಕ್ಯಾಂಟೀನ್ನ್ನು ಹೋಟೆಲ್ ಮಾದರಿಯಲ್ಲೇ ನಿರ್ಮಿಸಲಾಗಿದೆ.

ಈ ಕುರಿತಾಗಿ ಬಿಎಂಟಿಸಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ನೋಡಿ ಭೋಜನ ಬಂಡಿ. ಸ್ಕ್ರ್ಯಾಪ್ ವಾಹನದಿಂದ ಮೊಬೈಲ್ ಕ್ಯಾಂಟೀನ್ವರೆಗೆ ರೂಪಾಂತರಗೊಂಡಿದೆ. ನಮ್ಮ ನುರಿತ ತಾಂತ್ರಿಕ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ಉತ್ಸಾಹ ಮತ್ತು ಹೆಮ್ಮೆಯಿಂದ ರಚಿಸಲಾಗಿದೆ. ನಾವೀನ್ಯತೆ ಮತ್ತು ಪಾಕಶಾಲೆಯ ಆನಂದವನ್ನು ಒಟ್ಟಿಗೆ ಆಚರಿಸೋಣ. ಭೋಜನ ಬಂಡಿ ಹೆಮ್ಮೆಯ ಪರಿವರ್ತನೆ ಎಂದು ಹೇಳಿದೆ.

ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಬಸ್ ಅನ್ನು ನವೀಕರಣ ಮಾಡಲಾಗಿದೆ. ಮೊಬೈಲ್ ಕ್ಯಾಂಟೀನ್ ಆಗಿ ಪರಿವರ್ತನೆಯಾಗುವ ಮೊದಲು ಬಸ್ 10,64,298 ಕಿಲೋಮೀಟರ್ ದೂರ ಕ್ರಮಿಸಿತ್ತು.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್ ಅವರು ಹೊಸ ಕ್ಯಾಂಟೀನ್ ವೀಕ್ಷಣೆ ಮಾಡಿದ್ದು, ತಾಂತ್ರಿಕ ಸಿಬ್ಬಂದಿಯನ್ನು ಶ್ಲಾಘಿಸಿದರು. ಈ ಮೊಬೈಲ್ ಕ್ಯಾಂಟೀನ್ ಊಟ ಸೇವನೆ ಮಾಡುವುದರೊಂದಿಗೆ ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

ಮೊಬೈಲ್ ಕ್ಯಾಂಟೀನ್ನಲ್ಲಿ ಆಸನ, ಟೇಬಲ್, ಫ್ಯಾನ್ ಮತ್ತು ವಾಶ್ ಬೇಸಿನ್ ಇದೆ. ಇದಲ್ಲದೆ, ಇದು ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಹೊಂದಿದೆ. ಕ್ಯಾಂಟೀನ್ನ ಮೇಲ್ಭಾಗದಲ್ಲಿ ಗಾಜಿನ ಕಿಟಕಿ ಹೊಂದಿದ್ದು, ಗಾಳಿ ಮತ್ತು ಬೆಳಕು ಬರುವಂತೆ ವಿನ್ಯಾಸಗೊಳಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
Read More
