AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2024: ಗೌರಿ ಗಣೇಶ ಹಬ್ಬಕ್ಕೆ ಗಣೇಶ ಮೂರ್ತಿಗಳ ಬುಕ್ಕಿಂಗ್ ಶುರು, ರಸ್ತೆ ರಸ್ತೆಗಳಲ್ಲಿ ಕಂಗೊಳಿಸುತ್ತಿದ್ದಾನೆ ಗಣಪ

ಗೌರಿ ಗಣೇಶ ಹಬ್ಬಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಗಣೇಶ ಮೂರ್ತಿಗಳಿಗೆ ಫುಲ್ ಡಿಮ್ಯಾಂಡ್ ಹೆಚ್ಚಾಗಿದೆ. ನಗರದ ರಸ್ತೆಗಳಲ್ಲಿ ಗಣೇಶ ಮೂರ್ತಿಗಳು ಕಂಗೊಳಿಸುತ್ತಿವೆ. ನಗರದ ಮಾವಳ್ಳಿ ರಸ್ತೆಯಲ್ಲಿ ಗಣೇಶ ಮೂರ್ತಿಗಳ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಅನೇಕರು ಈಗಲೇ ತಮಗೆ ಇಷ್ಟ ಆಗುವ ಗಣೇಶನ ಮೂರ್ತಿಗಳನ್ನು ಬುಕ್ ಮಾಡ್ತಿದ್ದಾರೆ.

Poornima Agali Nagaraj
| Edited By: |

Updated on:Aug 27, 2024 | 12:12 PM

Share
ಬೆಂಗಳೂರಿನಲ್ಲಿ ಗೌರಿ-ಗಣೇಶನ ಚತುರ್ಥಿಗೆ ಗಣೇಶ ಮೂರ್ತಿಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಫುಲ್ ಬುಕಿಂಗ್ ನಡೆಯುತ್ತಿದೆ. ಈ ಬಾರಿ ಗಣೇಶ ಮೂರ್ತಿಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

ಬೆಂಗಳೂರಿನಲ್ಲಿ ಗೌರಿ-ಗಣೇಶನ ಚತುರ್ಥಿಗೆ ಗಣೇಶ ಮೂರ್ತಿಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಫುಲ್ ಬುಕಿಂಗ್ ನಡೆಯುತ್ತಿದೆ. ಈ ಬಾರಿ ಗಣೇಶ ಮೂರ್ತಿಗಳಿಗೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

1 / 7
ಅದ್ರಲ್ಲೂ ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನ ಮೂರ್ತಿಗಳಿಗೆ ವ್ಯಾಪಾರಸ್ಥರು ಹೆಚ್ಚು ಆದ್ಯತೆ ನೀಡುತ್ತಿದ್ದು, ಮಣ್ಣಿನ ಗಣೇಶ ಮೂರ್ತಿಗಳನ್ನೆ ಹೆಚ್ಚಿನ ಸಂಖ್ಯೆಯಲ್ಲಿ ಮಾಡಿದ್ದಾರೆ.

ಅದ್ರಲ್ಲೂ ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನ ಮೂರ್ತಿಗಳಿಗೆ ವ್ಯಾಪಾರಸ್ಥರು ಹೆಚ್ಚು ಆದ್ಯತೆ ನೀಡುತ್ತಿದ್ದು, ಮಣ್ಣಿನ ಗಣೇಶ ಮೂರ್ತಿಗಳನ್ನೆ ಹೆಚ್ಚಿನ ಸಂಖ್ಯೆಯಲ್ಲಿ ಮಾಡಿದ್ದಾರೆ.

2 / 7
ಕಳೆದ ವರ್ಷ ಪಿಒಪಿ ಗಣೇಶಗಳನ್ನ ಮಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಅಂಗಡಿಗಳಿಗೆ ಬೀಗ ಜಡಿದಿದ್ರು. ಹೀಗಾಗಿ ಈ ವರ್ಷ ಹೆಚ್ಚು ಮಣ್ಣಿನ ಮೂರ್ತಿಗಳಿಗೆ ಹೆಚ್ಚಿನ ಆಧ್ಯಾತೆ ನೀಡುತ್ತಿದ್ದು, ಮೂರ್ತಿಗಳ ಬೆಲೆಯನ್ನ ಸಹ ಹೆಚ್ಚಳ ಮಾಡಲಾಗಿದೆ.

ಕಳೆದ ವರ್ಷ ಪಿಒಪಿ ಗಣೇಶಗಳನ್ನ ಮಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಅಂಗಡಿಗಳಿಗೆ ಬೀಗ ಜಡಿದಿದ್ರು. ಹೀಗಾಗಿ ಈ ವರ್ಷ ಹೆಚ್ಚು ಮಣ್ಣಿನ ಮೂರ್ತಿಗಳಿಗೆ ಹೆಚ್ಚಿನ ಆಧ್ಯಾತೆ ನೀಡುತ್ತಿದ್ದು, ಮೂರ್ತಿಗಳ ಬೆಲೆಯನ್ನ ಸಹ ಹೆಚ್ಚಳ ಮಾಡಲಾಗಿದೆ.

3 / 7
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ 20% ರಷ್ಟು ಬೆಲೆ ಏರಿಕೆಯಾಗಿದ್ದು, 1 ರಿಂದ 7 ಅಡಿಯವರೆಗೂ ಗಣೇಶ ಮೂರ್ತಿಗಳನ್ನ ಮಾಡಲಾಗಿದೆ. ಇನ್ನು ಮೂರ್ತಿಗಳು 1000 ದಿಂದ 35 ಸಾವಿರದ ವರೆಗೂ ಮಾರಾಟವಾಗುತ್ತಿದ್ದು, ವ್ಯಾಪಾರಸ್ಥರು ಹೆಚ್ಚಿನ ಲಾಭವನ್ನ ಸಹ ನೋಡ್ತಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ 20% ರಷ್ಟು ಬೆಲೆ ಏರಿಕೆಯಾಗಿದ್ದು, 1 ರಿಂದ 7 ಅಡಿಯವರೆಗೂ ಗಣೇಶ ಮೂರ್ತಿಗಳನ್ನ ಮಾಡಲಾಗಿದೆ. ಇನ್ನು ಮೂರ್ತಿಗಳು 1000 ದಿಂದ 35 ಸಾವಿರದ ವರೆಗೂ ಮಾರಾಟವಾಗುತ್ತಿದ್ದು, ವ್ಯಾಪಾರಸ್ಥರು ಹೆಚ್ಚಿನ ಲಾಭವನ್ನ ಸಹ ನೋಡ್ತಿದ್ದಾರೆ.

4 / 7
ಗಣೇಶ ಚತುರ್ಥಿ ಎಂದ್ರೆ ಹಿಂದೂಗಳಿಗೆ ತುಂಬ ವಿಶೇಷ ಹಬ್ಬ. ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಅಂದ್ರೆ ಹಬ್ಬನೇ ಆಗೋದಿಲ್ಲ. ಹೀಗಾಗಿ ಗಣೇಶ ಮೂರ್ತಿಗಳನ್ನ ಖರೀದಿ ಮಾಡುವುದಕ್ಕೆ ಬಂದಿದ್ವಿ. ಈ ಬಾರಿ ಗಣೇಶ ಮೂರ್ತಿಗಳ ಬೆಲೆ ಜಾಸ್ತಿಯಾಗಿದೆ.‌ ಆದ್ರೂ ಹಬ್ಬ ಮಾಡುವ ಸಲುವಾಗಿ ಬೆಲೆ ಜಾಸ್ತಿಯಾದ್ರು ಖರೀದಿ ಮಾಡ್ತಿದಿವಿ‌ ಅಂತ ಗ್ರಾಹಕರು ಹೇಳಿದ್ರು.

ಗಣೇಶ ಚತುರ್ಥಿ ಎಂದ್ರೆ ಹಿಂದೂಗಳಿಗೆ ತುಂಬ ವಿಶೇಷ ಹಬ್ಬ. ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಅಂದ್ರೆ ಹಬ್ಬನೇ ಆಗೋದಿಲ್ಲ. ಹೀಗಾಗಿ ಗಣೇಶ ಮೂರ್ತಿಗಳನ್ನ ಖರೀದಿ ಮಾಡುವುದಕ್ಕೆ ಬಂದಿದ್ವಿ. ಈ ಬಾರಿ ಗಣೇಶ ಮೂರ್ತಿಗಳ ಬೆಲೆ ಜಾಸ್ತಿಯಾಗಿದೆ.‌ ಆದ್ರೂ ಹಬ್ಬ ಮಾಡುವ ಸಲುವಾಗಿ ಬೆಲೆ ಜಾಸ್ತಿಯಾದ್ರು ಖರೀದಿ ಮಾಡ್ತಿದಿವಿ‌ ಅಂತ ಗ್ರಾಹಕರು ಹೇಳಿದ್ರು.

5 / 7
ಕಳೆದ ವರ್ಷ ಪಿಒಪಿ ಗಣೇಶ ಮೂರ್ತಿಗಳನ್ನ ಹೆಚ್ಚಿನದಾಗಿ ಇಟ್ಟಿದ್ದರಿಂದ ಗಣೇಶ ಮೂರ್ತಿ ವ್ಯಾಪಾರಸ್ಥರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ರು. ಈ ವರ್ಷ ಅದರ ಪರಿಣಾಮದಿಂದಾಗಿ ಮಣ್ಣಿನ ಮೂರ್ತಿಗಳು ಹೆಚ್ಚು ಸೇಲ್ ಆಗುತ್ತಿವೆ.

ಕಳೆದ ವರ್ಷ ಪಿಒಪಿ ಗಣೇಶ ಮೂರ್ತಿಗಳನ್ನ ಹೆಚ್ಚಿನದಾಗಿ ಇಟ್ಟಿದ್ದರಿಂದ ಗಣೇಶ ಮೂರ್ತಿ ವ್ಯಾಪಾರಸ್ಥರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ರು. ಈ ವರ್ಷ ಅದರ ಪರಿಣಾಮದಿಂದಾಗಿ ಮಣ್ಣಿನ ಮೂರ್ತಿಗಳು ಹೆಚ್ಚು ಸೇಲ್ ಆಗುತ್ತಿವೆ.

6 / 7
ಹಬ್ಬಕ್ಕೆ 10 ದಿನಗಳಿದ್ದು, ಗಣೇಶ ಮೂರ್ತಿಗಳ ಡಿಮ್ಯಾಂಡ್ ಗೆ ತಕ್ಕಂತೆ ಬೆಲೆಯು ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಹೀಗಾಗಿ ಗಣೇಶ ಮೂರ್ತಿಗಳಿಗೆ ಬುಕ್ಕಿಂಗ್ ಆರಂಭವಾಗಿದ್ದು ಅನೇಕರು ತಮಗೆ ಇಷ್ಟ ಬಂದ ಗಣೇಶಗಳನ್ನು ಖರೀದಿಸುತ್ತಿದ್ದಾರೆ.

ಹಬ್ಬಕ್ಕೆ 10 ದಿನಗಳಿದ್ದು, ಗಣೇಶ ಮೂರ್ತಿಗಳ ಡಿಮ್ಯಾಂಡ್ ಗೆ ತಕ್ಕಂತೆ ಬೆಲೆಯು ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಹೀಗಾಗಿ ಗಣೇಶ ಮೂರ್ತಿಗಳಿಗೆ ಬುಕ್ಕಿಂಗ್ ಆರಂಭವಾಗಿದ್ದು ಅನೇಕರು ತಮಗೆ ಇಷ್ಟ ಬಂದ ಗಣೇಶಗಳನ್ನು ಖರೀದಿಸುತ್ತಿದ್ದಾರೆ.

7 / 7

Published On - 8:14 am, Mon, 19 August 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್