AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನೆರವೇರಿದ ಬಿಳಿಗಿರಿ ರಂಗನಾಥನ ಬ್ರಹ್ಮ ರಥೋತ್ಸವ; ಸ್ವಾಮಿಯ ಅಲಂಕಾರ ರೂಪ ಫೋಟೋಗಳಲ್ಲಿ ನೋಡಿ

ಚಂಪಕಾರಣ್ಯ ಕ್ಷೇತ್ರ ಎಂದೇ ಹೆಸರುವಾಸಿಯಾದ ಬಿಳಿಗಿರಿರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವ ನಿನ್ನೆ(ಮೇ.4) ಅದ್ದೂರಿಯಾಗಿ ನೆರವೇರಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ರಂಗನಾಥ ಸ್ವಾಮಿ ಕೃಪೆಗೆ ಪಾತ್ರರಾದರು.

ಕಿರಣ್ ಹನುಮಂತ್​ ಮಾದಾರ್
|

Updated on: May 05, 2023 | 10:47 AM

Share
ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ. ಚಾಮರಾಜನಗರ ನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನಲ್ಲಿರುವ ಪ್ರಸಿದ್ದ ತೀರ್ಥಕ್ಷೇತ್ರ. ಇಲ್ಲಿ ಪ್ರತಿವರ್ಷ ಚೈತ್ರಮಾಸದ ಹುಣ್ಣಿಮೆಯ ದಿನ ಬಿಳಿಗಿರಿ ರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯುತ್ತದೆ.

ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ. ಚಾಮರಾಜನಗರ ನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನಲ್ಲಿರುವ ಪ್ರಸಿದ್ದ ತೀರ್ಥಕ್ಷೇತ್ರ. ಇಲ್ಲಿ ಪ್ರತಿವರ್ಷ ಚೈತ್ರಮಾಸದ ಹುಣ್ಣಿಮೆಯ ದಿನ ಬಿಳಿಗಿರಿ ರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯುತ್ತದೆ.

1 / 7
ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾದ ದಿನ ಇವತ್ತು(ಮೇ.4) ಎಂಬುದು ನಂಬಿಕೆ. ವಸಿಷ್ಠ ಮಹರ್ಷಿಗಳು ನೆಲೆಸಿದ ಪುಣ್ಯಕ್ಷೇತ್ರ ಎಂಬ ಹೆಗ್ಗಳಿಕೆಗೂ ಬಿಳಿಗಿರಿ ರಂಗನ ಬೆಟ್ಟ ಸಾಕ್ಷಿಯಾಗಿದೆ.

ದೇವಾಲಯದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾದ ದಿನ ಇವತ್ತು(ಮೇ.4) ಎಂಬುದು ನಂಬಿಕೆ. ವಸಿಷ್ಠ ಮಹರ್ಷಿಗಳು ನೆಲೆಸಿದ ಪುಣ್ಯಕ್ಷೇತ್ರ ಎಂಬ ಹೆಗ್ಗಳಿಕೆಗೂ ಬಿಳಿಗಿರಿ ರಂಗನ ಬೆಟ್ಟ ಸಾಕ್ಷಿಯಾಗಿದೆ.

2 / 7
ಗುರುವಾರ ಮಧ್ಯಾಹ್ನ 12.24ರ ಶುಭ ಕರ್ಕಾಟಕ ಧನುರ್ಗುರು ನಾರ್ವಾಂಶ ಮೂಹುರ್ತದಲ್ಲಿ ರಥೋತ್ಸವ ನಡೆಯಿತು. ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ಹಲವೆಡೆಯಿಂದ ಬಂದಿದ್ದ 50 ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಬೆಳಗ್ಗೆ 5ರಿಂದ ಸ್ವಾಮಿಗೆ ವಿಶೇಷ ಪೂಜೆ ನೆರವೇರಿದೆ. ಎಲ್ಲ ಭಕ್ತರು ಸರದಿ ಸಾಲಿನಲ್ಲಿ ಬಂದು ಜಾತ್ರೆ ಯಶಸ್ವಿಗೊಳಿಸಿದ್ದಾರೆ ಅಂತಾರೆ ದೇವಾಲಯ ಪ್ರಧಾನ ಅರ್ಚಕ.

ಗುರುವಾರ ಮಧ್ಯಾಹ್ನ 12.24ರ ಶುಭ ಕರ್ಕಾಟಕ ಧನುರ್ಗುರು ನಾರ್ವಾಂಶ ಮೂಹುರ್ತದಲ್ಲಿ ರಥೋತ್ಸವ ನಡೆಯಿತು. ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ಹಲವೆಡೆಯಿಂದ ಬಂದಿದ್ದ 50 ಸಾವಿರಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಬೆಳಗ್ಗೆ 5ರಿಂದ ಸ್ವಾಮಿಗೆ ವಿಶೇಷ ಪೂಜೆ ನೆರವೇರಿದೆ. ಎಲ್ಲ ಭಕ್ತರು ಸರದಿ ಸಾಲಿನಲ್ಲಿ ಬಂದು ಜಾತ್ರೆ ಯಶಸ್ವಿಗೊಳಿಸಿದ್ದಾರೆ ಅಂತಾರೆ ದೇವಾಲಯ ಪ್ರಧಾನ ಅರ್ಚಕ.

3 / 7
ರಥೋತ್ಸವ ಬಳಿಕ ಒಂದೇ ಸಾರಿ ಭಕ್ತರು ರಸ್ತೆಗೆ ನುಗ್ಗುವುದನ್ನು ತಡೆಯಲು ಸಿಆರ್​ಪಿಎಫ್ ಪೊಲೀಸರು ಬ್ಯಾರಿಕೇಡ್ ಹಾಕಿ ಕಟ್ಟೆಚ್ಚರ ವಹಿಸಿದ್ದರು. ಸರದಿ ಸಾಲಿನಲ್ಲೇ ಬಂದು ಕೆಎಸ್ ಆರ್ ಟಿಸಿ ಬಸ್ ಹತ್ತುವ ವ್ಯವಸ್ಥೆ ಮಾಡಲಾಗಿತ್ತು.

ರಥೋತ್ಸವ ಬಳಿಕ ಒಂದೇ ಸಾರಿ ಭಕ್ತರು ರಸ್ತೆಗೆ ನುಗ್ಗುವುದನ್ನು ತಡೆಯಲು ಸಿಆರ್​ಪಿಎಫ್ ಪೊಲೀಸರು ಬ್ಯಾರಿಕೇಡ್ ಹಾಕಿ ಕಟ್ಟೆಚ್ಚರ ವಹಿಸಿದ್ದರು. ಸರದಿ ಸಾಲಿನಲ್ಲೇ ಬಂದು ಕೆಎಸ್ ಆರ್ ಟಿಸಿ ಬಸ್ ಹತ್ತುವ ವ್ಯವಸ್ಥೆ ಮಾಡಲಾಗಿತ್ತು.

4 / 7
ಇನ್ನು ಬಿಳಿಗಿರಿ ರಂಗನಾಥ ಸ್ವಾಮಿಯ ಅಲಂಕಾರ ರೂಪ ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಬಂದಿದ್ದರು. ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಪೂರ್ಣ ನಿಷೇಧಿಸಲಾಗಿತ್ತು. ಬೆಟ್ಟದಿಂದ ಎರಡು ಕಿ.ಮೀ. ದೂರದಲ್ಲೇ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಬರುವಂತೆ ಪೊಲೀಸರು ಸೂಚನೆ ನೀಡಿದ್ದರು. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬರುವವರಿಗೆ ಯಳಂದೂರು ಮತ್ತು ಕೆ.ಗುಡಿ ಚೆಕ್ ಪೋಸ್ಟ್ ನಿಂದ ವ್ಯವಸ್ಥೆ ಮಾಡಲಾಗಿತ್ತು. ಒಟ್ಟು 80 ಬಸ್ ಗಳನ್ನು ಜಾತ್ರೆಗೆ ಬರುವ ಭಕ್ತರಿಗಾಗಿ ನಿಯೋಜಿಸಲಾಗಿತ್ತು.

ಇನ್ನು ಬಿಳಿಗಿರಿ ರಂಗನಾಥ ಸ್ವಾಮಿಯ ಅಲಂಕಾರ ರೂಪ ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ಬಂದಿದ್ದರು. ವಾಹನ ದಟ್ಟಣೆ ನಿಯಂತ್ರಣಕ್ಕಾಗಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಪೂರ್ಣ ನಿಷೇಧಿಸಲಾಗಿತ್ತು. ಬೆಟ್ಟದಿಂದ ಎರಡು ಕಿ.ಮೀ. ದೂರದಲ್ಲೇ ವಾಹನ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಬರುವಂತೆ ಪೊಲೀಸರು ಸೂಚನೆ ನೀಡಿದ್ದರು. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬರುವವರಿಗೆ ಯಳಂದೂರು ಮತ್ತು ಕೆ.ಗುಡಿ ಚೆಕ್ ಪೋಸ್ಟ್ ನಿಂದ ವ್ಯವಸ್ಥೆ ಮಾಡಲಾಗಿತ್ತು. ಒಟ್ಟು 80 ಬಸ್ ಗಳನ್ನು ಜಾತ್ರೆಗೆ ಬರುವ ಭಕ್ತರಿಗಾಗಿ ನಿಯೋಜಿಸಲಾಗಿತ್ತು.

5 / 7
ಹೀಗಾಗಿ ಕಳೆದ ವರ್ಷದಂತೆ ಯಾವುದೇ ಗೊಂದಲ ಆಗಲಿಲ್ಲ. ಕಳೆದ ಬಾರಿ ಜಿಲ್ಲಾಡಳಿತದ ಅವೈಜ್ಞಾನಿಕ ನಿರ್ಧಾರದಿಂದ ಭಕ್ತರು ತೀವ್ರ ಪ್ರಯಾಸ ಪಟ್ಟಿದ್ದರು.

ಹೀಗಾಗಿ ಕಳೆದ ವರ್ಷದಂತೆ ಯಾವುದೇ ಗೊಂದಲ ಆಗಲಿಲ್ಲ. ಕಳೆದ ಬಾರಿ ಜಿಲ್ಲಾಡಳಿತದ ಅವೈಜ್ಞಾನಿಕ ನಿರ್ಧಾರದಿಂದ ಭಕ್ತರು ತೀವ್ರ ಪ್ರಯಾಸ ಪಟ್ಟಿದ್ದರು.

6 / 7
ರಾಜ್ಯಾದ್ಯಂತ ಚುನಾವಣೆ ಕಾವು ರಂಗೇರಿದೆ. ಈ ನಡುವೆ ರಾಜಕೀಯ ಜಂಜಾಟ ಬಿಟ್ಟು ಭಕ್ತರು ಬಿಳಿಗಿರಿ ರಂಗನಬೆಟ್ಟದ ಪ್ರಕೃತಿ ಸೌಂದರ್ಯ ಸವಿದರು. ಒಟ್ಟಾರೆ ಈ ವರ್ಷ ಯಾವುದೇ ಗೊಂದಲವಿಲ್ಲದೆ ಬಿಳಿಗಿರಿ ರಂಗನಾಥಸ್ವಾಮಿ ರತೋತ್ಸವ ನೆರವೇರಿತು.

ರಾಜ್ಯಾದ್ಯಂತ ಚುನಾವಣೆ ಕಾವು ರಂಗೇರಿದೆ. ಈ ನಡುವೆ ರಾಜಕೀಯ ಜಂಜಾಟ ಬಿಟ್ಟು ಭಕ್ತರು ಬಿಳಿಗಿರಿ ರಂಗನಬೆಟ್ಟದ ಪ್ರಕೃತಿ ಸೌಂದರ್ಯ ಸವಿದರು. ಒಟ್ಟಾರೆ ಈ ವರ್ಷ ಯಾವುದೇ ಗೊಂದಲವಿಲ್ಲದೆ ಬಿಳಿಗಿರಿ ರಂಗನಾಥಸ್ವಾಮಿ ರತೋತ್ಸವ ನೆರವೇರಿತು.

7 / 7
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ