BS Yediyurappa Photos: ಧೀಮಂತ ನಾಯಕ ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನದ ಚಿತ್ರನೋಟ

TV9 Digital Desk

| Edited By: ganapathi bhat

Updated on: Jul 26, 2021 | 7:29 PM

BS Yediyurappa Photos: ಬಿ.ಎಸ್. ಯಡಿಯೂರಪ್ಪ. ಇದು ಕರ್ನಾಟಕದ ರಾಜಕಾರಣದಲ್ಲಿ ಮರೆಯಲಾಗದ ಹೆಸರು. ಕರ್ನಾಟಕದಲ್ಲಿ ಹೇಳ ಹೆಸರಿಲ್ಲದಂತಿದ್ದ ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿ, ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದವರು ಯಡಿಯೂರಪ್ಪ ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ.

Jul 26, 2021 | 7:29 PM
ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಬಡ ಕುಟುಂಬವೊಂದರಲ್ಲಿ ಸಿದ್ಧಲಿಂಗಪ್ಪ ಮತ್ತು ಪುಟ್ಟತಾಯಮ್ಮ ಅವರ ಮಗನಾಗಿ ಹುಟ್ಟಿದ ಬಿ.ಎಸ್. ಯಡಿಯೂರಪ್ಪ ತಮ್ಮ ಕಾಲೇಜು ದಿನಗಳಲ್ಲಿಯೇ ಆರ್​ಎಸ್​ಎಸ್​ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಚಿಕ್ಕ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಯಡಿಯೂರಪ್ಪ ಕಾಲೇಜು ಶಿಕ್ಷಣವನ್ನು ಮುಗಿಸಿದ ನಂತರ ಕೆಲಸಕ್ಕಾಗಿ ಹುಡುಕುತ್ತಿದ್ದರು. ಮಂಡ್ಯದಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ವಲಸೆ ಹೋಗಿ, 1965ರಲ್ಲಿ ಅಲ್ಲಿನ ರೈಸ್ ಮಿಲ್​ನಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿಂದ ಯಡಿಯೂರಪ್ಪನವರ ಅದೃಷ್ಟವೇ ಬದಲಾಯಿತು.

ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಬಡ ಕುಟುಂಬವೊಂದರಲ್ಲಿ ಸಿದ್ಧಲಿಂಗಪ್ಪ ಮತ್ತು ಪುಟ್ಟತಾಯಮ್ಮ ಅವರ ಮಗನಾಗಿ ಹುಟ್ಟಿದ ಬಿ.ಎಸ್. ಯಡಿಯೂರಪ್ಪ ತಮ್ಮ ಕಾಲೇಜು ದಿನಗಳಲ್ಲಿಯೇ ಆರ್​ಎಸ್​ಎಸ್​ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಚಿಕ್ಕ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಯಡಿಯೂರಪ್ಪ ಕಾಲೇಜು ಶಿಕ್ಷಣವನ್ನು ಮುಗಿಸಿದ ನಂತರ ಕೆಲಸಕ್ಕಾಗಿ ಹುಡುಕುತ್ತಿದ್ದರು. ಮಂಡ್ಯದಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ವಲಸೆ ಹೋಗಿ, 1965ರಲ್ಲಿ ಅಲ್ಲಿನ ರೈಸ್ ಮಿಲ್​ನಲ್ಲಿ ಕೆಲಸಕ್ಕೆ ಸೇರಿದರು. ಅಲ್ಲಿಂದ ಯಡಿಯೂರಪ್ಪನವರ ಅದೃಷ್ಟವೇ ಬದಲಾಯಿತು.

1 / 15
ತಾವು ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿಕಾರಿಪುರದ ವೀರಭದ್ರಶಾಸ್ತ್ರಿ ಶಂಕರ್ ರೈಸ್ ಮಿಲ್​ನ ಮಾಲೀಕರ ಮಗಳು ಮೈತ್ರಾದೇವಿಯನ್ನು ಪ್ರೀತಿಸಿದ ಯಡಿಯೂರಪ್ಪ 1967ರಲ್ಲಿ ಅವರನ್ನು ಮದುವೆಯಾದರು. ಸಾಕಷ್ಟು ಶ್ರೀಮಂತರಾಗಿದ್ದ ಮಾವನ ಮಿಲ್ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ಹೊಸ ಜೀವನವನ್ನು ಆರಂಭಿಸಿದರು.

ತಾವು ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿಕಾರಿಪುರದ ವೀರಭದ್ರಶಾಸ್ತ್ರಿ ಶಂಕರ್ ರೈಸ್ ಮಿಲ್​ನ ಮಾಲೀಕರ ಮಗಳು ಮೈತ್ರಾದೇವಿಯನ್ನು ಪ್ರೀತಿಸಿದ ಯಡಿಯೂರಪ್ಪ 1967ರಲ್ಲಿ ಅವರನ್ನು ಮದುವೆಯಾದರು. ಸಾಕಷ್ಟು ಶ್ರೀಮಂತರಾಗಿದ್ದ ಮಾವನ ಮಿಲ್ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ಹೊಸ ಜೀವನವನ್ನು ಆರಂಭಿಸಿದರು.

2 / 15
2006ರಲ್ಲಿ ಬಿಜೆಪಿ- ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅಧಿಕಾರ ವಹಿಸಿಕೊಂಡರು. ಆಗ ಹೆಚ್​.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. 20 ತಿಂಗಳು ಕುಮಾರಸ್ವಾಮಿ ಮತ್ತು ಉಳಿದ 20 ತಿಂಗಳು ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುತ್ತಾರೆ ಎಂಬುದು ಮೊದಲೇ ಮಾಡಿಕೊಂಡ ಒಪ್ಪಂದವಾಗಿತ್ತು. ಆದರೆ, ಯಡಿಯೂರಪ್ಪನಿಗೆ ಅಧಿಕಾರ ಬಿಟ್ಟುಕೊಡಲು ಕುಮಾರಸ್ವಾಮಿ ಒಪ್ಪದ ಕಾರಣ ಜೆಡಿಎಸ್​ಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ವಾಪಾಸ್ ಪಡೆಯಿತು. ಇದರಿಂದ ಸರ್ಕಾರ ಪತನಗೊಂಡು, ರಾಷ್ಟ್ರಪತಿ ಆಡಳಿತ ಶುರುವಾಯಿತು. ನಂತರ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡ ಪರಿಣಾಮ 2007ರ ನವೆಂಬರ್ 12ರಂದು ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದರು.

2006ರಲ್ಲಿ ಬಿಜೆಪಿ- ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅಧಿಕಾರ ವಹಿಸಿಕೊಂಡರು. ಆಗ ಹೆಚ್​.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. 20 ತಿಂಗಳು ಕುಮಾರಸ್ವಾಮಿ ಮತ್ತು ಉಳಿದ 20 ತಿಂಗಳು ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುತ್ತಾರೆ ಎಂಬುದು ಮೊದಲೇ ಮಾಡಿಕೊಂಡ ಒಪ್ಪಂದವಾಗಿತ್ತು. ಆದರೆ, ಯಡಿಯೂರಪ್ಪನಿಗೆ ಅಧಿಕಾರ ಬಿಟ್ಟುಕೊಡಲು ಕುಮಾರಸ್ವಾಮಿ ಒಪ್ಪದ ಕಾರಣ ಜೆಡಿಎಸ್​ಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ವಾಪಾಸ್ ಪಡೆಯಿತು. ಇದರಿಂದ ಸರ್ಕಾರ ಪತನಗೊಂಡು, ರಾಷ್ಟ್ರಪತಿ ಆಡಳಿತ ಶುರುವಾಯಿತು. ನಂತರ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡ ಪರಿಣಾಮ 2007ರ ನವೆಂಬರ್ 12ರಂದು ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದರು.

3 / 15
2007ರಲ್ಲಿ ಮೊದಲ ಬಾರಿ ಸಿಎಂ​​ ಆಗಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಮೂರು ದಿನ ಕೂಡ ಉಳಿಯಲಿಲ್ಲ. ದಕ್ಷಿಣ ಭಾರತದ ಮೊದಲ ಬಿಜೆಪಿ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಿಎಸ್ ಯಡಿಯೂರಪ್ಪ, 2012ರಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ ಜೈಲು ಸೇರುವ ಮೂಲಕ ಅಧಿಕಾರದಲ್ಲಿದ್ದಾಗಲೇ ಸೆರೆವಾಸ ಅನುಭವಿಸಿದ ಮೊದಲ ಮುಖ್ಯಮಂತ್ರಿಯೆಂಬ ಕುಖ್ಯಾತಿಯನ್ನೂ ಪಡೆದರು. ಈ ಘಟನೆ ಅವರ ರಾಜಕೀಯ ಜೀವನದಲ್ಲಿ ದೊಡ್ಡ ಕಪ್ಪುಚುಕ್ಕಿಯಾಗಿಯೇ ಉಳಿಯಿತು.

2007ರಲ್ಲಿ ಮೊದಲ ಬಾರಿ ಸಿಎಂ​​ ಆಗಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಮೂರು ದಿನ ಕೂಡ ಉಳಿಯಲಿಲ್ಲ. ದಕ್ಷಿಣ ಭಾರತದ ಮೊದಲ ಬಿಜೆಪಿ ಮುಖ್ಯಮಂತ್ರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಿಎಸ್ ಯಡಿಯೂರಪ್ಪ, 2012ರಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ ಜೈಲು ಸೇರುವ ಮೂಲಕ ಅಧಿಕಾರದಲ್ಲಿದ್ದಾಗಲೇ ಸೆರೆವಾಸ ಅನುಭವಿಸಿದ ಮೊದಲ ಮುಖ್ಯಮಂತ್ರಿಯೆಂಬ ಕುಖ್ಯಾತಿಯನ್ನೂ ಪಡೆದರು. ಈ ಘಟನೆ ಅವರ ರಾಜಕೀಯ ಜೀವನದಲ್ಲಿ ದೊಡ್ಡ ಕಪ್ಪುಚುಕ್ಕಿಯಾಗಿಯೇ ಉಳಿಯಿತು.

4 / 15
3 ದಶಕಗಳ ಕಾಲ ರೋಚಕವಾದ ರಾಜಕೀಯ ತಿರುವುಗಳನ್ನು ಕಂಡ ಯಡಿಯೂರಪ್ಪನವರಿಗೆ ಈ ಸರ್ಕಾರದಲ್ಲಿಯೂ ಸವಾಲುಗಳು ಎದುರಾಯಿತು. 17 ಶಾಸಕರು ರಾಜೀನಾಮೆ ನೀಡಿದ್ದ ಸ್ಥಾನಗಳಿಗೆ ಮತ್ತೆ ಚುನಾವಣೆ ಮಾಡಿಸಿ, ಅಲ್ಲಿಯೂ ಆ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿ, ಗೆಲ್ಲಿಸಿಕೊಂಡು ಬಂದರು. ಇದರಿಂದ ಆ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಗರ ಅಸಮಾಧಾನಕ್ಕೂ ಕಾರಣದರಾದರು.

3 ದಶಕಗಳ ಕಾಲ ರೋಚಕವಾದ ರಾಜಕೀಯ ತಿರುವುಗಳನ್ನು ಕಂಡ ಯಡಿಯೂರಪ್ಪನವರಿಗೆ ಈ ಸರ್ಕಾರದಲ್ಲಿಯೂ ಸವಾಲುಗಳು ಎದುರಾಯಿತು. 17 ಶಾಸಕರು ರಾಜೀನಾಮೆ ನೀಡಿದ್ದ ಸ್ಥಾನಗಳಿಗೆ ಮತ್ತೆ ಚುನಾವಣೆ ಮಾಡಿಸಿ, ಅಲ್ಲಿಯೂ ಆ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿ, ಗೆಲ್ಲಿಸಿಕೊಂಡು ಬಂದರು. ಇದರಿಂದ ಆ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಗರ ಅಸಮಾಧಾನಕ್ಕೂ ಕಾರಣದರಾದರು.

5 / 15
ಮತ್ತೊಂದೆಡೆ ಚುನಾವಣೆಯಲ್ಲಿ ಗೆದ್ದಿದ್ದ ಸಚಿವರಿಗೆ ಈ ಮೊದಲೇ ಆಶ್ವಾಸನೆ ನೀಡಿದಂತೆ ಸಚಿವ ಸ್ಥಾನ ಕೊಡಲೇಬೇಕಾದ ಅನಿವಾರ್ಯತೆಯಿತ್ತು. ಮೂಲ ಬಿಜೆಪಿಗರು ಮತ್ತು ವಲಸಿಗ ಬಿಜೆಪಿಗರ ನಡುವಿನ ಅಂತರವನ್ನು ಕಡಿಮೆ ಮಾಡದಿದ್ದರೆ ತಮ್ಮ ಖುರ್ಚಿಗೆ ಕಂಟಕ ಖಚಿತ ಎಂದರಿತ ಯಡಿಯೂರಪ್ಪ ಸಚಿವ ಸಂಪುಟ ಪುನಾರಚನೆ ಮಾಡಿ ವಲಸಿಗ ಶಾಸಕರಿಗೆ ಸಚಿವ ಸ್ಥಾನ ನೀಡಿದರು.

ಮತ್ತೊಂದೆಡೆ ಚುನಾವಣೆಯಲ್ಲಿ ಗೆದ್ದಿದ್ದ ಸಚಿವರಿಗೆ ಈ ಮೊದಲೇ ಆಶ್ವಾಸನೆ ನೀಡಿದಂತೆ ಸಚಿವ ಸ್ಥಾನ ಕೊಡಲೇಬೇಕಾದ ಅನಿವಾರ್ಯತೆಯಿತ್ತು. ಮೂಲ ಬಿಜೆಪಿಗರು ಮತ್ತು ವಲಸಿಗ ಬಿಜೆಪಿಗರ ನಡುವಿನ ಅಂತರವನ್ನು ಕಡಿಮೆ ಮಾಡದಿದ್ದರೆ ತಮ್ಮ ಖುರ್ಚಿಗೆ ಕಂಟಕ ಖಚಿತ ಎಂದರಿತ ಯಡಿಯೂರಪ್ಪ ಸಚಿವ ಸಂಪುಟ ಪುನಾರಚನೆ ಮಾಡಿ ವಲಸಿಗ ಶಾಸಕರಿಗೆ ಸಚಿವ ಸ್ಥಾನ ನೀಡಿದರು.

6 / 15
ಬಿ.ಎಸ್. ಯಡಿಯೂರಪ್ಪ (ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ) ಇದು ಕರ್ನಾಟಕದ ರಾಜಕಾರಣದಲ್ಲಿ ಮರೆಯಲಾಗದ ಹೆಸರು. ಕರ್ನಾಟಕದಲ್ಲಿ ಹೇಳ ಹೆಸರಿಲ್ಲದಂತಿದ್ದ ಬಿಜೆಪಿ (Karnataka BJP) ಪಕ್ಷಕ್ಕೆ ಅಡಿಪಾಯ ಹಾಕಿ, ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದವರು ಯಡಿಯೂರಪ್ಪ (BS Yediyurappa) ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ.

ಬಿ.ಎಸ್. ಯಡಿಯೂರಪ್ಪ (ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ) ಇದು ಕರ್ನಾಟಕದ ರಾಜಕಾರಣದಲ್ಲಿ ಮರೆಯಲಾಗದ ಹೆಸರು. ಕರ್ನಾಟಕದಲ್ಲಿ ಹೇಳ ಹೆಸರಿಲ್ಲದಂತಿದ್ದ ಬಿಜೆಪಿ (Karnataka BJP) ಪಕ್ಷಕ್ಕೆ ಅಡಿಪಾಯ ಹಾಕಿ, ಇಡೀ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದವರು ಯಡಿಯೂರಪ್ಪ (BS Yediyurappa) ಎಂಬುದು ಗೊತ್ತಿಲ್ಲದ ವಿಚಾರವೇನಲ್ಲ.

7 / 15
 ಬರೋಬ್ಬರಿ 4 ಬಾರಿ ಕರ್ನಾಟಕದ ಮುಖ್ಯಮಂತ್ರಿ (Karnataka Chief Minister) ಸ್ಥಾನವನ್ನು ಏರಿರುವ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಯಡಿಯೂರಪ್ಪನವರದು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೆ, ಆರ್​ಎಸ್​ಎಸ್​ (RSS) ಕಾರ್ಯಕರ್ತನಾಗಿ ಗುರುತಿಸಿಕೊಂಡು ಬಳಿಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಯಡಿಯೂರಪ್ಪ 3 ದಶಕಗಳಿಗೂ ಹೆಚ್ಚು ಕಾಲ ರಾಜಕೀಯದಲ್ಲಿ ಸವೆಸಿದ ಹಾದಿ ಸುಲಭದ್ದೇನಾಗಿರಲಿಲ್ಲ.

ಬರೋಬ್ಬರಿ 4 ಬಾರಿ ಕರ್ನಾಟಕದ ಮುಖ್ಯಮಂತ್ರಿ (Karnataka Chief Minister) ಸ್ಥಾನವನ್ನು ಏರಿರುವ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಯಡಿಯೂರಪ್ಪನವರದು. ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೆ, ಆರ್​ಎಸ್​ಎಸ್​ (RSS) ಕಾರ್ಯಕರ್ತನಾಗಿ ಗುರುತಿಸಿಕೊಂಡು ಬಳಿಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಯಡಿಯೂರಪ್ಪ 3 ದಶಕಗಳಿಗೂ ಹೆಚ್ಚು ಕಾಲ ರಾಜಕೀಯದಲ್ಲಿ ಸವೆಸಿದ ಹಾದಿ ಸುಲಭದ್ದೇನಾಗಿರಲಿಲ್ಲ.

8 / 15
ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್

Former CM BS Yediyurappa gets New Toyota Vellfire Luxury Car to Travel in Preparation to 2023 Karnataka Assembly Election

9 / 15
ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್. ಯಡಿಯೂರಪ್ಪ ಎಷ್ಟು ವಿವಾದಗಳಿಗೆ ಗುರಿಯಾಗಿದ್ದಾರೋ ಅಷ್ಟೇ ಸಾಧನೆಗಳನ್ನೂ ಮಾಡಿದ್ದಾರೆ. ರೈತನ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ 2008ರಲ್ಲಿ ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಕೃಷಿ ಬಜೆಟ್ ಅನ್ನು ಮಂಡನೆ ಮಾಡುವ ಮೂಲಕ ತಾನು ರೈತರ ಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್. ಯಡಿಯೂರಪ್ಪ ಎಷ್ಟು ವಿವಾದಗಳಿಗೆ ಗುರಿಯಾಗಿದ್ದಾರೋ ಅಷ್ಟೇ ಸಾಧನೆಗಳನ್ನೂ ಮಾಡಿದ್ದಾರೆ. ರೈತನ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ 2008ರಲ್ಲಿ ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಕೃಷಿ ಬಜೆಟ್ ಅನ್ನು ಮಂಡನೆ ಮಾಡುವ ಮೂಲಕ ತಾನು ರೈತರ ಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

10 / 15
4 ಬಾರಿ ಕರ್ನಾಟಕದ ಮುಖ್ಯಮಂತ್ರಿಯಾದರೂ ಯಡಿಯೂರಪ್ಪ ಎಷ್ಟು ಅದೃಷ್ಟವಂತ ರಾಜಕಾರಣಿಯೇ ಅಷ್ಟೇ ದುರಾದೃಷ್ಟವಂತರೂ ಹೌದು. 4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯೂ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಕ್ರಮೇಣ ತಮ್ಮದೇ ಪಕ್ಷದಲ್ಲಿ ಮೂಲೆಗುಂಪಾಗತೊಡಗಿದರು. ವಿರೋಧ ಪಕ್ಷದವರ ಆರೋಪಗಳ ಜೊತೆಗೆ ಸ್ವಪಕ್ಷೀಯರ ಅಸಮಾಧಾನ, ಆರೋಪ, ಆಕ್ರೋಶವನ್ನು ಶಮನ ಮಾಡುವುದು ಯಡಿಯೂರಪ್ಪನವರಿಗೆ ಸವಾಲಿನ ಕೆಲಸವಾಗಿತ್ತು.

4 ಬಾರಿ ಕರ್ನಾಟಕದ ಮುಖ್ಯಮಂತ್ರಿಯಾದರೂ ಯಡಿಯೂರಪ್ಪ ಎಷ್ಟು ಅದೃಷ್ಟವಂತ ರಾಜಕಾರಣಿಯೇ ಅಷ್ಟೇ ದುರಾದೃಷ್ಟವಂತರೂ ಹೌದು. 4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯೂ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಕ್ರಮೇಣ ತಮ್ಮದೇ ಪಕ್ಷದಲ್ಲಿ ಮೂಲೆಗುಂಪಾಗತೊಡಗಿದರು. ವಿರೋಧ ಪಕ್ಷದವರ ಆರೋಪಗಳ ಜೊತೆಗೆ ಸ್ವಪಕ್ಷೀಯರ ಅಸಮಾಧಾನ, ಆರೋಪ, ಆಕ್ರೋಶವನ್ನು ಶಮನ ಮಾಡುವುದು ಯಡಿಯೂರಪ್ಪನವರಿಗೆ ಸವಾಲಿನ ಕೆಲಸವಾಗಿತ್ತು.

11 / 15
ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿರುವ ಯಡಿಯೂರಪ್ಪ ರಾಜಕೀಯ ಪುನರ್ ವಸತಿ ಹುದ್ದೆಗಳನ್ನು ಪಡೆಯುವ ಅವಕಾಶ ಇದೆ. ಸಿಎಂ ಹುದ್ದೆಯಿಂದ ಕೆಳಗಿಳಿದ ಹಿರಿಯ ರಾಜಕಾರಣಿಗಳಿಗೆ ನಮ್ಮ ದೇಶದಲ್ಲಿ ಯಾವುದಾದಾರೊಂದು ರಾಜ್ಯದ ರಾಜ್ಯಪಾಲರಾಗಿ ನೇಮಿಸಿ ಅವರ ಆಡಳಿತ ಅನುಭವ, ಸೇವೆಯನ್ನು ರಾಜ್ಯದ ಅಭಿವೃದ್ದಿ, ಆಡಳಿತ ನಿರ್ವಹಣೆಗೆ ಪಡೆದುಕೊಳ್ಳುವ ಸಂಪ್ರದಾಯ ಇದೆ. ಯಡಿಯೂರಪ್ಪಗೂ ಪ್ರಧಾನಿ ಮೋದಿ ರಾಜ್ಯಪಾಲರ ಹುದ್ದೆಯ ಆಫರ್ ನೀಡಿದ್ದಾರೆ. ಈ ತಿಂಗಳ 17 ರಂದು ದೆಹಲಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಆಗ ಪ್ರಧಾನಿ ಮೋದಿ, ಯಾವ ರಾಜ್ಯದ ರಾಜ್ಯಪಾಲರಾಗಲು ಬಯಸುತ್ತೀರಾ ಎಂದು ಕೇಳಿದ್ದಾರೆ. ಆದರೆ, ಇದು ಗಂಭೀರವಾಗಿ ಕೇಳಿದ್ದಲ್ಲ. ತಮಾಷೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ ಮುಂದೆ ಈ ಪ್ರಶ್ನೆ ಇಟ್ಟಿದ್ದಾರೆ. ಆದರೆ, ಯಡಿಯೂರಪ್ಪ ರಾಜ್ಯಪಾಲರ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಇದನ್ನು ಇಂದು ಖುದ್ದಾಗಿ ಯಡಿಯೂರಪ್ಪ ಅವರೇ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿರುವ ಯಡಿಯೂರಪ್ಪ ರಾಜಕೀಯ ಪುನರ್ ವಸತಿ ಹುದ್ದೆಗಳನ್ನು ಪಡೆಯುವ ಅವಕಾಶ ಇದೆ. ಸಿಎಂ ಹುದ್ದೆಯಿಂದ ಕೆಳಗಿಳಿದ ಹಿರಿಯ ರಾಜಕಾರಣಿಗಳಿಗೆ ನಮ್ಮ ದೇಶದಲ್ಲಿ ಯಾವುದಾದಾರೊಂದು ರಾಜ್ಯದ ರಾಜ್ಯಪಾಲರಾಗಿ ನೇಮಿಸಿ ಅವರ ಆಡಳಿತ ಅನುಭವ, ಸೇವೆಯನ್ನು ರಾಜ್ಯದ ಅಭಿವೃದ್ದಿ, ಆಡಳಿತ ನಿರ್ವಹಣೆಗೆ ಪಡೆದುಕೊಳ್ಳುವ ಸಂಪ್ರದಾಯ ಇದೆ. ಯಡಿಯೂರಪ್ಪಗೂ ಪ್ರಧಾನಿ ಮೋದಿ ರಾಜ್ಯಪಾಲರ ಹುದ್ದೆಯ ಆಫರ್ ನೀಡಿದ್ದಾರೆ. ಈ ತಿಂಗಳ 17 ರಂದು ದೆಹಲಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಆಗ ಪ್ರಧಾನಿ ಮೋದಿ, ಯಾವ ರಾಜ್ಯದ ರಾಜ್ಯಪಾಲರಾಗಲು ಬಯಸುತ್ತೀರಾ ಎಂದು ಕೇಳಿದ್ದಾರೆ. ಆದರೆ, ಇದು ಗಂಭೀರವಾಗಿ ಕೇಳಿದ್ದಲ್ಲ. ತಮಾಷೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ ಮುಂದೆ ಈ ಪ್ರಶ್ನೆ ಇಟ್ಟಿದ್ದಾರೆ. ಆದರೆ, ಯಡಿಯೂರಪ್ಪ ರಾಜ್ಯಪಾಲರ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಇದನ್ನು ಇಂದು ಖುದ್ದಾಗಿ ಯಡಿಯೂರಪ್ಪ ಅವರೇ ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದಾರೆ.

12 / 15
ಯಡಿಯೂರಪ್ಪಗೆ ಈಗ 78 ವರ್ಷ ವಯಸ್ಸಾಗಿದೆ. ಹಾಗಂತ ಯಡಿಯೂರಪ್ಪ ಸಿಎಂ ಹುದ್ದೆಯಿಂದ ಇಳಿದಾಕ್ಷಣ ರಾಜಕೀಯ ತೆರೆಮರೆಗೆ ಸರಿಯುತ್ತಾರೆ ಎಂಬುದು ಮೂರ್ಖತನ, ತಪ್ಪು ಲೆಕ್ಕಾಚಾರ. ಯಡಿಯೂರಪ್ಪ ರಾಜಕೀಯವಾಗಿ ಸಕ್ರಿಯವಾಗಿರುತ್ತಾರೆ. ರಾಜಕೀಯವಾಗಿ ಯಡಿಯೂರಪ್ಪ ಈಗ ಬಿಜೆಪಿ ಪಕ್ಷದಲ್ಲೇ ಹಿರಿಯ ರಾಜಕಾರಣಿಯಾಗಿ ಮುಂದುವರಿಯುವ ಅವಕಾಶ ಇದೆ.

ಯಡಿಯೂರಪ್ಪಗೆ ಈಗ 78 ವರ್ಷ ವಯಸ್ಸಾಗಿದೆ. ಹಾಗಂತ ಯಡಿಯೂರಪ್ಪ ಸಿಎಂ ಹುದ್ದೆಯಿಂದ ಇಳಿದಾಕ್ಷಣ ರಾಜಕೀಯ ತೆರೆಮರೆಗೆ ಸರಿಯುತ್ತಾರೆ ಎಂಬುದು ಮೂರ್ಖತನ, ತಪ್ಪು ಲೆಕ್ಕಾಚಾರ. ಯಡಿಯೂರಪ್ಪ ರಾಜಕೀಯವಾಗಿ ಸಕ್ರಿಯವಾಗಿರುತ್ತಾರೆ. ರಾಜಕೀಯವಾಗಿ ಯಡಿಯೂರಪ್ಪ ಈಗ ಬಿಜೆಪಿ ಪಕ್ಷದಲ್ಲೇ ಹಿರಿಯ ರಾಜಕಾರಣಿಯಾಗಿ ಮುಂದುವರಿಯುವ ಅವಕಾಶ ಇದೆ.

13 / 15
2012 ರಲ್ಲಿ ತಮ್ಮನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದ ಬಳಿಕ ಯಡಿಯೂರಪ್ಪ ಹೊಸ ಪಕ್ಷ ಸ್ಥಾಪಿಸಿದ್ದರು. ಆದರೆ, ಈಗ ಯಡಿಯೂರಪ್ಪ ಈ ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಯಡಿಯೂರಪ್ಪ ಈಗ ಸದ್ಯಕ್ಕೆ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರಿಯುವ ಇಚ್ಛೆಯನ್ನು ಮಾತ್ರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕತ್ವದ ವಿರುದ್ಧ ಬಂಡಾಯ ಎದ್ದು ಹೊಸ ಪಕ್ಷ ಸ್ಥಾಪಿಸುವ ವಯಸ್ಸು, ಮನಸ್ಸು ನನಗೆ ಇಲ್ಲ ಎಂದು ಯಡಿಯೂರಪ್ಪ ತಮ್ಮನ್ನು ಭೇಟಿಯಾದ ಸ್ವಾಮೀಜಿಗಳಿಗೆ ಇತ್ತೀಚೆಗೆ ತಿಳಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಈಗ ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳುತ್ತಾರೆ.

2012 ರಲ್ಲಿ ತಮ್ಮನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದ ಬಳಿಕ ಯಡಿಯೂರಪ್ಪ ಹೊಸ ಪಕ್ಷ ಸ್ಥಾಪಿಸಿದ್ದರು. ಆದರೆ, ಈಗ ಯಡಿಯೂರಪ್ಪ ಈ ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಯಡಿಯೂರಪ್ಪ ಈಗ ಸದ್ಯಕ್ಕೆ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಮುಂದುವರಿಯುವ ಇಚ್ಛೆಯನ್ನು ಮಾತ್ರ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕತ್ವದ ವಿರುದ್ಧ ಬಂಡಾಯ ಎದ್ದು ಹೊಸ ಪಕ್ಷ ಸ್ಥಾಪಿಸುವ ವಯಸ್ಸು, ಮನಸ್ಸು ನನಗೆ ಇಲ್ಲ ಎಂದು ಯಡಿಯೂರಪ್ಪ ತಮ್ಮನ್ನು ಭೇಟಿಯಾದ ಸ್ವಾಮೀಜಿಗಳಿಗೆ ಇತ್ತೀಚೆಗೆ ತಿಳಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಈಗ ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳುತ್ತಾರೆ.

14 / 15
ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿರುವ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ಮುಂದೆ ಯಾರುನ್ನು ನೇಮಿಸಬೇಕು ಎಂದು ಸೂಚಿಸಬಹುದಿತ್ತು. ಆದರೆ, ಈ ಬಾರಿ ಯಡಿಯೂರಪ್ಪ ಮುಂದೆ ಯಾರು ಸಿಎಂ ಆಗಬೇಕೆಂಬ ಬಗ್ಗೆ ಯಾರ ಹೆಸರುನ್ನು ಕೂಡ ತಾವು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲ್ಲ ಎಂದಿದ್ದಾರೆ. ಮುಂದಿನ ಸಿಎಂ ಆಯ್ಕೆ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಬಿಟ್ಟಿದ್ದಾರೆ.

ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದಿರುವ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ಮುಂದೆ ಯಾರುನ್ನು ನೇಮಿಸಬೇಕು ಎಂದು ಸೂಚಿಸಬಹುದಿತ್ತು. ಆದರೆ, ಈ ಬಾರಿ ಯಡಿಯೂರಪ್ಪ ಮುಂದೆ ಯಾರು ಸಿಎಂ ಆಗಬೇಕೆಂಬ ಬಗ್ಗೆ ಯಾರ ಹೆಸರುನ್ನು ಕೂಡ ತಾವು ಹೈಕಮಾಂಡ್ ಗೆ ಶಿಫಾರಸ್ಸು ಮಾಡಲ್ಲ ಎಂದಿದ್ದಾರೆ. ಮುಂದಿನ ಸಿಎಂ ಆಯ್ಕೆ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಬಿಟ್ಟಿದ್ದಾರೆ.

15 / 15

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada