Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಅಂತಿಮ ಹಂತದಲ್ಲಿ ಬಜೆಟ್​ ಸಿದ್ಧತೆ; ಹಲ್ವಾ ಸಮಾರಂಭ ನಡೆಸಿ ಸಿಬ್ಬಂದಿಗೆ ಸಿಹಿ ಹಂಚಿದ ನಿರ್ಮಲಾ ಸೀತಾರಾಮನ್

ಕೇಂದ್ರ ಬಜೆಟ್​ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಸಾಂಪ್ರದಾಯಿಕ ಹಲ್ವಾ ಸಮಾರಂಭ (Halwa Ceremony) ಗುರುವಾರ ನಡೆಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ನಾರ್ಥ್ ಬ್ಲಾಕ್​ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಬಜೆಟ್ ಸಿದ್ಧತೆಗೆ ಚಾಲನೆ ನೀಡಿದರು.

Ganapathi Sharma
|

Updated on: Jan 26, 2023 | 5:00 PM

Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಕೇಂದ್ರ ಬಜೆಟ್ ಪ್ರಯುಕ್ತ ದೆಹಲಿಯ ನಾರ್ಥ್ ಬ್ಲಾಕ್​ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಹಲ್ವಾ ಸಮಾರಂಭ ನಡೆಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಬಜೆಟ್ ಸಿದ್ಧತೆಗೆ ಚಾಲನೆ ನೀಡಿದರು.

1 / 7
Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಬಜೆಟ್ ಮಂಡನೆ ದಿನದ ವರೆಗೂ ಅಧಿಕಾರಿಗಳು ಕಚೇರಿಯಲ್ಲೇ ಇರಬೇಕಾಗುತ್ತದೆ. ಅಂದರೆ ಸಿಬ್ಬಂದಿಯು ಸಂಪೂರ್ಣವಾಗಿ ಲಾಕ್ ಇನ್ ಆಗಿ ಬಜೆಟ್ ಪ್ರತಿಗಳ ತಯಾರಿಕೆಯಲ್ಲಿ ತೊಡಗಿಕೊಳ್ಳುತ್ತಾರೆ. ಬಜೆಟ್ ಮಾಹಿತಿಯ ಗೋಪ್ಯತೆ ಕಾಪಾಡಿಕೊಳ್ಳುವುದಕ್ಕಾಗಿ ಈ ನಿಯಮ ಅನುಸರಿಸಲಾಗುತ್ತದೆ.

2 / 7
Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಅಂತಿಮ ಹಂತದ ಬಜೆಟ್​ ಸಿದ್ಧತೆ ಆರಂಭವಾಗಿದೆ. ಇದಕ್ಕೆ, ಹಲ್ವಾ ಸಮಾರಂಭ ನಡೆಸುವ ಮೂಲಕ ಹಣಕಾಸು ಸಚಿವರು ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವರ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

3 / 7
Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಹಲ್ವಾ ಸಮಾರಂಭದಲ್ಲಿ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು, ಸಹಾಯಕ ಸಚಿವರು, ಕಾರ್ಯದರ್ಶಿಗಳು ಹಾಗೂ ಇತರ ಸಿಬ್ಬಂದಿ ಪಾಲ್ಗೊಂಡರು.

4 / 7
Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಈ ಬಾರಿಯೂ ಕಾಗದರಹಿತ ಮಾದರಿಯಲ್ಲಿ ಬಜೆಟ್ ಮಂಡನೆಯಾಗಲಿದೆ. ಇದರೊಂದಿಗೆ ಸತತ ಮೂರನೇ ಬಾರಿಗೆ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

5 / 7
Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬಜೆಟ್ ಪ್ರತಿಗಳು ದೊರೆಯಲಿವೆ. ಆ್ಯಂಡ್ರಾಯ್ಡ್ ಮತ್ತು ಆ್ಯಪಲ್ ಒಎಸ್​​ಗಳಲ್ಲಿ ‘ಯೂನಿಯನ್ ಬಜೆಟ್ ಮೊಬೈಲ್ ಆ್ಯಪ್’ ಲಭ್ಯವಿದ್ದು, ಹಣಕಾಸು ಸಚಿವರು ಬಜೆಟ್ ಮಂಡನೆ ಮಾಡಿದ ಬಳಿಕ ಬಜೆಟ್ ಪ್ರತಿ ದೊರೆಯಲಿದೆ ಎಂದು ಸಚಿವಾಲಯ ತಿಳಿಸಿದೆ.

6 / 7
Budget 2023 Halwa Ceremony Finance Minister Nirmala Sitharaman distributed halwa to members of Budget Press along with other staff of the ministry

ಹಲ್ವಾ ಸಮಾರಂಭ ದಶಕಗಳಿಂದಲೂ ಆಚರಣೆಯಲ್ಲಿದೆ. ಬಜೆಟ್ ಅನ್ನು ಬಹುತೇಕ ಅಂತಿಮ ರೂಪಿಗೆ ಕೊಂಡೊಯ್ಯಲಾಗುತ್ತಿರುವ ಸಂದರ್ಭದ ಖುಷಿಯನ್ನು ಹೀಗೆ ಸಿಹಿ ತಿನಿಸುವ ಮೂಲಕ ಹಂಚಿಕೊಳ್ಳಲಾಗುತ್ತದೆ. ಜತೆಗೆ, ಸಿಬ್ಬಂದಿ ವರ್ಗದ ಲಾಕ್ ಇನ್ ಅವಧಿಯ ಏಕತಾನತೆ ಕಳೆಯುವುದಕ್ಕಾಗಿ ಹೀಗೊಂದು ಸಂಭ್ರಮ ಆಚರಿಸಲಾಗುತ್ತಿದೆ ಎನ್ನಲಾಗಿದೆ. 2021ರಲ್ಲಿ ಕೋವಿಡ್ ಸಾಂಕ್ರಾಮಿಕದ ಕಾರಣ ಹಲ್ವಾ ಕಾರ್ಯಕ್ರಮವನ್ನು ಮೊದಲ ಬಾರಿಗೆ ಕೈಬಿಡಲಾಗಿತ್ತು.

7 / 7
Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್