Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರ್ಟರ್ ಫೈನಲ್‌ ತಲುಪಿದ ಎಚ್‌ಎಸ್ ಪ್ರಣಯ್; ಟೂರ್ನಿಯಿಂದ ಹೊರಬಿದ್ದ ಲಕ್ಷ್ಯ ಸೇನ್

BWF World Championship 2023: ನಡೆಯುತ್ತಿರುವ BWF ವಿಶ್ವ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತದ ಅಗ್ರ ಶ್ರೇಯಾಂಕದ ಬ್ಯಾಡ್ಮಿಂಟನ್ ಆಟಗಾರ ಎಚ್‌ಎಸ್ ಪ್ರಣಯ್ ಅವರು ಪ್ರೀ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಗೆಲುವು ದಾಖಲಿಸಿ ಇದೀಗ ಕ್ವಾರ್ಟರ್‌ಫೈನಲ್​ಗೆ ಎಂಟ್ರಿಕೊಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Aug 25, 2023 | 11:26 AM

ನಡೆಯುತ್ತಿರುವ BWF ವಿಶ್ವ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತದ ಅಗ್ರ ಶ್ರೇಯಾಂಕದ ಬ್ಯಾಡ್ಮಿಂಟನ್ ಆಟಗಾರ ಎಚ್‌ಎಸ್ ಪ್ರಣಯ್ ಅವರು ಪ್ರೀ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಗೆಲುವು ದಾಖಲಿಸಿ ಇದೀಗ ಕ್ವಾರ್ಟರ್‌ಫೈನಲ್​ಗೆ ಎಂಟ್ರಿಕೊಟ್ಟಿದ್ದಾರೆ.

ನಡೆಯುತ್ತಿರುವ BWF ವಿಶ್ವ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತದ ಅಗ್ರ ಶ್ರೇಯಾಂಕದ ಬ್ಯಾಡ್ಮಿಂಟನ್ ಆಟಗಾರ ಎಚ್‌ಎಸ್ ಪ್ರಣಯ್ ಅವರು ಪ್ರೀ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಗೆಲುವು ದಾಖಲಿಸಿ ಇದೀಗ ಕ್ವಾರ್ಟರ್‌ಫೈನಲ್​ಗೆ ಎಂಟ್ರಿಕೊಟ್ಟಿದ್ದಾರೆ.

1 / 8
ಪ್ರಣಯ್ ತಮ್ಮ ಪ್ರೀ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಮಾಜಿ ಚಾಂಪಿಯನ್ ಲೋಹ್ ಕೀನ್ ಯೂ ಅವರನ್ನು 21-18, 15-21, 21-19 ಅಂತರದಿಂದ ಸೋಲಿಸಿ ಕೊನೆಯ ಎಂಟರ ಘಟಕ್ಕೆ  ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ.

ಪ್ರಣಯ್ ತಮ್ಮ ಪ್ರೀ ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ ಮಾಜಿ ಚಾಂಪಿಯನ್ ಲೋಹ್ ಕೀನ್ ಯೂ ಅವರನ್ನು 21-18, 15-21, 21-19 ಅಂತರದಿಂದ ಸೋಲಿಸಿ ಕೊನೆಯ ಎಂಟರ ಘಟಕ್ಕೆ ಟಿಕೆಟ್ ಖಚಿತಪಡಿಸಿಕೊಂಡಿದ್ದಾರೆ.

2 / 8
ಮೊದಲ ಗೇಮ್ ಅನ್ನು 21-18 ರಿಂದ ಗೆದ್ದು ಶುಭಾರಂಭ ಮಾಡಿದ ಪ್ರಣಯ್, ಎರಡನೇ ಗೇಮ್‌ನಲ್ಲಿ 15-21ರಿಂದ ಹಿನ್ನಡೆ ಅನುಭವಿಸಿದರು. ಆದರೆ 21-19 ಅಂತರದಿಂದ ಮೂರನೇ ಸೆಟ್ ಗೆದ್ದ ಪ್ರಣಯ್, ಕ್ವಾರ್ಟರ್ ಫೈನಲ್ ತಲುಪಿದರು.

ಮೊದಲ ಗೇಮ್ ಅನ್ನು 21-18 ರಿಂದ ಗೆದ್ದು ಶುಭಾರಂಭ ಮಾಡಿದ ಪ್ರಣಯ್, ಎರಡನೇ ಗೇಮ್‌ನಲ್ಲಿ 15-21ರಿಂದ ಹಿನ್ನಡೆ ಅನುಭವಿಸಿದರು. ಆದರೆ 21-19 ಅಂತರದಿಂದ ಮೂರನೇ ಸೆಟ್ ಗೆದ್ದ ಪ್ರಣಯ್, ಕ್ವಾರ್ಟರ್ ಫೈನಲ್ ತಲುಪಿದರು.

3 / 8
ಇದೀಗ ಪ್ರಣಯ್ ತಮ್ಮ ಮುಂದಿನ ಸುತ್ತಿನಲ್ಲಿ ಡೆನ್ಮಾರ್ಕ್‌ನ ವಿಶ್ವದ ನಂಬರ್ ಒನ್ ಷಟ್ಲರ್ ವಿಕ್ಟರ್ ಆಕ್ಸೆಲ್ಸನ್ ಅವರನ್ನು ಎದುರಿಸಲಿದ್ದಾರೆ.

ಇದೀಗ ಪ್ರಣಯ್ ತಮ್ಮ ಮುಂದಿನ ಸುತ್ತಿನಲ್ಲಿ ಡೆನ್ಮಾರ್ಕ್‌ನ ವಿಶ್ವದ ನಂಬರ್ ಒನ್ ಷಟ್ಲರ್ ವಿಕ್ಟರ್ ಆಕ್ಸೆಲ್ಸನ್ ಅವರನ್ನು ಎದುರಿಸಲಿದ್ದಾರೆ.

4 / 8
ಮತ್ತೊಂದೆಡೆ, ಪ್ರಸ್ತುತ ವಿಶ್ವದ 11ನೇ ಶ್ರೇಯಾಂಕದ 22 ವರ್ಷದ ಲಕ್ಷ್ಯ ಸೇನ್ ಥಾಯ್ಲೆಂಡ್‌ನ ಕುನ್ಲಾವುಟ್ ವಿಟಿಡ್ಸರ್ನ್ ವಿರುದ್ಧ 21-14, 16-21, 21-13 ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಮತ್ತೊಂದೆಡೆ, ಪ್ರಸ್ತುತ ವಿಶ್ವದ 11ನೇ ಶ್ರೇಯಾಂಕದ 22 ವರ್ಷದ ಲಕ್ಷ್ಯ ಸೇನ್ ಥಾಯ್ಲೆಂಡ್‌ನ ಕುನ್ಲಾವುಟ್ ವಿಟಿಡ್ಸರ್ನ್ ವಿರುದ್ಧ 21-14, 16-21, 21-13 ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

5 / 8
ಪುರುಷರ ಡಬಲ್ಸ್‌ ವಿಭಾಗದಲ್ಲಿ ವಿಶ್ವದ ನಂ.2 ಜೋಡಿ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಇಂಡೋನೇಷ್ಯಾದ ಲಿಯೊ ರೋಲಿ ಕಾರ್ನಾಂಡೊ ಮತ್ತು ಡೇನಿಯಲ್‌ ಮಾರ್ಟಿನ್‌ ವಿರುದ್ಧ 21-15, 19-21, 21-9 ಸೆಟ್‌ಗಳಿಂದ ಜಯಗಳಿಸಿ ಕ್ವಾರ್ಟರ್‌ಫೈನಲ್‌ಗೆ ಮುನ್ನಡೆದರು.

ಪುರುಷರ ಡಬಲ್ಸ್‌ ವಿಭಾಗದಲ್ಲಿ ವಿಶ್ವದ ನಂ.2 ಜೋಡಿ ಸಾತ್ವಿಕ್‌ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರು ಇಂಡೋನೇಷ್ಯಾದ ಲಿಯೊ ರೋಲಿ ಕಾರ್ನಾಂಡೊ ಮತ್ತು ಡೇನಿಯಲ್‌ ಮಾರ್ಟಿನ್‌ ವಿರುದ್ಧ 21-15, 19-21, 21-9 ಸೆಟ್‌ಗಳಿಂದ ಜಯಗಳಿಸಿ ಕ್ವಾರ್ಟರ್‌ಫೈನಲ್‌ಗೆ ಮುನ್ನಡೆದರು.

6 / 8
ಸಾತ್ವಿಕ್-ಸಿರಾಜ್ ಜೋಡಿ ಕಳೆದ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಈ ವರ್ಷ ಚಿನ್ನದ ಪದಕವನ್ನು ಬಾಚಿಕೊಳ್ಳುವ ನಿರೀಕ್ಷೆಯಿದೆ. ಅವರು ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ 11 ನೇ ಶ್ರೇಯಾಂಕದ ಕಿಮ್ ಅಸ್ಟ್ರಪ್ ಮತ್ತು ಡೆನ್ಮಾರ್ಕ್‌ನ ಆಂಡರ್ಸ್ ಸ್ಕಾರಪ್ ರಾಸ್ಮುಸ್ಸೆನ್ ಅವರನ್ನು ಎದುರಿಸಲಿದ್ದಾರೆ.

ಸಾತ್ವಿಕ್-ಸಿರಾಜ್ ಜೋಡಿ ಕಳೆದ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ ಈ ವರ್ಷ ಚಿನ್ನದ ಪದಕವನ್ನು ಬಾಚಿಕೊಳ್ಳುವ ನಿರೀಕ್ಷೆಯಿದೆ. ಅವರು ಕ್ವಾರ್ಟರ್‌ಫೈನಲ್ ಸುತ್ತಿನಲ್ಲಿ 11 ನೇ ಶ್ರೇಯಾಂಕದ ಕಿಮ್ ಅಸ್ಟ್ರಪ್ ಮತ್ತು ಡೆನ್ಮಾರ್ಕ್‌ನ ಆಂಡರ್ಸ್ ಸ್ಕಾರಪ್ ರಾಸ್ಮುಸ್ಸೆನ್ ಅವರನ್ನು ಎದುರಿಸಲಿದ್ದಾರೆ.

7 / 8
ಆದರೆ, ಗುರುವಾರ ನಡೆದ 16ರ ಘಟ್ಟದ ಪಂದ್ಯದಲ್ಲಿ ಭಾರತದ ಮಹಿಳಾ ಷಟ್ಲರ್‌ಗಳಿಗೆ ಇದು ಸ್ಮರಣೀಯ ದಿನವಾಗಿರಲಿಲ್ಲ. ಮಹಿಳೆಯರ ಡಬಲ್ಸ್ ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಅವರು 16 ರ ಸುತ್ತಿನ ಪಂದ್ಯದಲ್ಲಿ 14-21, 9-21 ರಿಂದ ಚೀನಾದ ಅಗ್ರ ಶ್ರೇಯಾಂಕದ ಜೋಡಿಯಾದ ಚೆನ್ ಕಿಂಗ್ ಚೆನ್ ಮತ್ತು ಜಿಯಾ ಯಿ ಫ್ಯಾನ್ ವಿರುದ್ಧ ದೊಡ್ಡ ಸೋಲನ್ನು ಅನುಭವಿಸಿ ಪಂದ್ಯಾವಳಿಯಿಂದ ಹೊರಬಿದ್ದರು.

ಆದರೆ, ಗುರುವಾರ ನಡೆದ 16ರ ಘಟ್ಟದ ಪಂದ್ಯದಲ್ಲಿ ಭಾರತದ ಮಹಿಳಾ ಷಟ್ಲರ್‌ಗಳಿಗೆ ಇದು ಸ್ಮರಣೀಯ ದಿನವಾಗಿರಲಿಲ್ಲ. ಮಹಿಳೆಯರ ಡಬಲ್ಸ್ ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಅವರು 16 ರ ಸುತ್ತಿನ ಪಂದ್ಯದಲ್ಲಿ 14-21, 9-21 ರಿಂದ ಚೀನಾದ ಅಗ್ರ ಶ್ರೇಯಾಂಕದ ಜೋಡಿಯಾದ ಚೆನ್ ಕಿಂಗ್ ಚೆನ್ ಮತ್ತು ಜಿಯಾ ಯಿ ಫ್ಯಾನ್ ವಿರುದ್ಧ ದೊಡ್ಡ ಸೋಲನ್ನು ಅನುಭವಿಸಿ ಪಂದ್ಯಾವಳಿಯಿಂದ ಹೊರಬಿದ್ದರು.

8 / 8
Follow us
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ