Army Chopper Crash: ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ; ಲಭ್ಯ ವಿವರಗಳು ಇಲ್ಲಿದೆ

Edited By:

Updated on: Dec 08, 2021 | 2:35 PM

Army Helicopter Crash in Ooty: ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

1 / 6
ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್​ವೊಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು ಎಂದು ಹೇಳಲಾಗಿದೆ.

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್​ವೊಂದು ತಮಿಳುನಾಡಿನ ಕುನ್ನೂರಿನಲ್ಲಿ ಪತನಗೊಂಡಿದೆ. ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 9 ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು ಎಂದು ಹೇಳಲಾಗಿದೆ.

2 / 6
ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಇನ್ನು ಹೆಲಿಕಾಪ್ಟರ್​ನಲ್ಲಿ 9 ಜನರಿದ್ದು, ಮೂವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್​ ಬಿಪಿನ್​ ರಾವತ್​ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಇನ್ನು ಹೆಲಿಕಾಪ್ಟರ್​ನಲ್ಲಿ 9 ಜನರಿದ್ದು, ಮೂವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

3 / 6
ವಾಯುಪಡೆಯ Mi-17V5 ಹೆಲಿಕಾಪ್ಟರ್ ಪತನ ಹಿನ್ನೆಲೆ, ಘಟನೆಯ ಬಗ್ಗೆ ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ, ಈ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಪ್ರಧಾನಿ ಮೋದಿ ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.

ವಾಯುಪಡೆಯ Mi-17V5 ಹೆಲಿಕಾಪ್ಟರ್ ಪತನ ಹಿನ್ನೆಲೆ, ಘಟನೆಯ ಬಗ್ಗೆ ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ, ಈ ಮಧ್ಯೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಪ್ರಧಾನಿ ಮೋದಿ ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.

4 / 6
ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಇದೀಗ, ಬಿಪಿನ್ ರಾವತ್‌ರನ್ನು ಆಸ್ಪತ್ರೆಗೆ ಕರೆದೊಯ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಿಪಿನ್ ರಾವತ್ ಸೇರಿದಂತೆ ನಾಲ್ವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ, ನಾಲ್ವರು ಅಧಿಕಾರಿಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಇದೀಗ, ಬಿಪಿನ್ ರಾವತ್‌ರನ್ನು ಆಸ್ಪತ್ರೆಗೆ ಕರೆದೊಯ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಿಪಿನ್ ರಾವತ್ ಸೇರಿದಂತೆ ನಾಲ್ವರು ಆಸ್ಪತ್ರೆಗೆ ದಾಖಲು ಆಗಿದ್ದಾರೆ, ನಾಲ್ವರು ಅಧಿಕಾರಿಗಳನ್ನು ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

5 / 6
ಕೊಯಂಬತ್ತೂರಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಕೊಯಂಬತ್ತೂರಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಬಿಪಿನ್ ರಾವತ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

6 / 6
ಸಿಕ್ಕ ನಾಲ್ಕು ಮೃತದೇಹದಲ್ಲಿ ಇಬ್ಬರು ಶೇ.80ರಷ್ಟು ಸುಟ್ಟುಹೋಗಿದ್ದಾರೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಸಿಕ್ಕ ನಾಲ್ಕು ಮೃತದೇಹದಲ್ಲಿ ಇಬ್ಬರು ಶೇ.80ರಷ್ಟು ಸುಟ್ಟುಹೋಗಿದ್ದಾರೆ. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Web contact

TV9 Kannada

Read More
Follow Us