AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamrajnagar News: ವರ್ಷವಿಡಿ ಮಂಜಿನಿಂದ ಆವರಿಸಿರುವ ಪ್ರವಾಸಿಗರನ್ನ ಕೈಬೀಸಿ ಕರೆಯುವ ಗೋಪಾಲಸ್ವಾಮಿ ಬೆಟ್ಟದ ಫೋಟೋಸ್

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ವರ್ಷವಿಡಿ ಮಂಜಿನಿಂದ ಕೂಡಿರುತ್ತದೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 25, 2023 | 7:53 AM

Share
Chamarajanagar district gopalaswamy hill 365 days covered by fog

ವರ್ಷದ 365 ದಿನಗಳಲ್ಲೂ ದಟ್ಟ ಮಂಜಿನಿಂದ ಕೂಡಿದ ರಾಜ್ಯದ ಏಕೈಕ ಪ್ರವಾಸಿ ತಾಣ ಅಂದರೇ ಅದು ಹಿಮವದ್ ಗೋಪಾಲಸ್ವಾಮಿ ಬೆಟ್ಟ. ಚುಮು ಚುಮು ಚಳಿಯ ನಡುವೆ ಗೋಪಾಲಸ್ವಾಮಿ ಬೆಟ್ಟ ಮಂಜಿನಿಂದ ಆವರಿಸಿ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ.

1 / 8
Chamarajanagar district gopalaswamy hill 365 days covered by fog

ಎಲ್ಲಿ ನೋಡಿದರು ಹಸಿರು ಹೊದಿಕೆ ಹೊದ್ದಿರುವ ಬೆಟ್ಟ, ಹಸಿರು ಬೆಟ್ಟಕ್ಕೆ ಮುತ್ತಿಡುತ್ತಿರುವ ಮಂಜು. ಚುಮು ಚುಮು ಚಳಿಗೆ ಮೈಯೊಡ್ಡಿ ಖುಷಿಯಲ್ಲಿರುವ ಪ್ರವಾಸಿಗರು. ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಈ ಪ್ರಶಾಂತವಾದ ವಾರವರಣಲ್ಲಿ ಒಂದು ಬಾರಿ ಸುತ್ತಾಡಿದರೆ ಸಾಕು ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿ ತರುತ್ತದೆ. ಇಂತಹ ಪ್ರಶಾಂತವಾದ ವಾತಾವರಣ ನೋಡಬೇಕು ಅಂದರೇ ಗೋಪಾಲಸ್ವಾಮಿ ಬೆಟ್ಟಕ್ಕೆ‌ ಹೋಗಲೇಬೇಕು.

2 / 8
Chamarajanagar district gopalaswamy hill 365 days covered by fog

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಭಾರತದ ಸ್ವಿಜರ್ಲ್ಯಾಂಡ್ ಎಂದೆ ಕರೆಸಿಕೊಳ್ಳುತ್ತೆ. ಸದ್ಯ ಭಾರತದ ಈ ಸ್ವಿಜರ್ಲ್ಯಾಂಡ್ ನೋಡೋಕೆ ಪ್ರವಾಸಿಗರ ದಂಡೆ ಹರಿದುಬರುತ್ತಿದೆ.‍

3 / 8
Chamarajanagar district gopalaswamy hill 365 days covered by fog

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಬರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಸಮುದ್ರ ಮಟ್ಟದಿಂದ 3769 ಅಡಿ ಎತ್ತರದಲ್ಲಿದೆ. ಜೋಳರ ಕಾಲದ ಇತಿಹಾಸ ವಿರುವ ಗೋಪಾಲ ಸ್ವಾಮಿ ದೇವಾಲಯವನ್ನ 1315ರಲ್ಲಿ ನಿರ್ಮಿಸಲಾಗಿದೆ.

4 / 8
Chamarajanagar district gopalaswamy hill 365 days covered by fog

ಋತುಮಾನಗಳ ಬೆರಗಿಗೆ ಬೆರಗಾಗುವ ಈ ಪ್ರಕೃತಿ ಸೊಬಗಿನ ಈ ಪುಣ್ಯ ಕ್ಷೇತ್ರದ ವಾತಾವರಣ ಕ್ಷಣಕ್ಷಣಕ್ಕೂ ಬದಲಾಗುತ್ತದೆ. ವಿಶಾಲ ಹುಲ್ಲುಗಾವಲು, ಸುಂದರವಾದ ಅರಣ್ಯ. ಹಿಮವದ್ ಗೋಪಾಲಸ್ವಾಮಿ ಬೆಟ್ಟ ಆಕಾಶವನ್ನೇ ಹೊತ್ತು ನಿಂತಿರುವ ಹಾಗೆ ಕಾಣುತ್ತದೆ. ಸದ್ಯ ಪ್ರವಾಸಿಗರು ಬೆಟ್ಟಕ್ಕೆ ಬಂದು ಎಂಜಾಯ್ ಮಾಡುತ್ತಿದ್ದಾರೆ.

5 / 8
Chamarajanagar district gopalaswamy hill 365 days covered by fog

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಜಿಎಸ್ ಬೆಟ್ಟದ ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟ ಎಲ್ಲರ ಅಚ್ಚು ಮೆಚ್ಚಿನ ತಾಣ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾಕಷ್ಟು ಪ್ರವಾಸಿಗರು ಬರುತ್ತಾರೆ.

6 / 8
Chamarajanagar district gopalaswamy hill 365 days covered by fog

ವೀಕೆಂಡ್​​ನಲ್ಲಂತೂ ಪ್ರವಾಸಿಗರಿಂದ ಗೋಪಾಲಸ್ವಾಮಿ ಬೆಟ್ಟ ಫುಲ್ ರಶ್ ಆಗಿರುತ್ತದೆ. ದೂರದೂರಿನಿಂದ ತಮ್ಮ ಖಾಸಗಿ ವಾಹನದಲ್ಲಿ ಬರುವ ಪ್ರವಾಸಿಗರು ಬೆಟ್ಟದ ತಪ್ಪಲಿ ವಾಹನ ಪಾರ್ಕ್ ಮಾಡಿ, ಬಸ್ ಮೂಲಕವೆ ಬೆಟ್ಟಕ್ಕೆ ತೆರಳಬೇಕು.

7 / 8
Chamarajanagar district gopalaswamy hill 365 days covered by fog

‌ಸದ್ಯ ಸಾಕಷ್ಟು ಸಂಖ್ಯೆಯಲ್ಲಿ ಬೆಟ್ಟಕ್ಕೆ ಪ್ರವಾಸಿಗರು ಆಗಮಿಸುತಿದ್ದು, ಸದ್ಯ ಆಷಾಡ ಮಾಸದ ಚಳಿಯ ಜೊತೆ ಆಗಾಗ ಮುಂಗಾರಿನ ಸಿಂಚನ ಕೂಡ ಆಗುತ್ತದೆ.

8 / 8

Published On - 7:52 am, Sun, 25 June 23

Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ