- Kannada News Photo gallery Chamarajanagar District Sweep Committee Unveils Unique Invitation Letter to Create Voting Awareness
ಮದ್ವೆ ಕರೆಯೋಲೆ ನೋಡಿದ್ದೀರಿ, ಈಗ ಮತದಾನದ ಮಮತೆಯ ಕರೆಯೋಲೆ ನೋಡಿ
ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ. ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು ಪ್ರಯತ್ನಕ್ಕೆ ಮುನ್ನುಡಿ ಬರೆದಿದ್ದು, ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದೆ.
Updated on:Mar 29, 2024 | 3:26 PM

ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಅಬ್ಬರದ ಪ್ರಚಾರಗಳು ಕೂಡ ನಡೆಯುತ್ತಿದೆ. ಇದರ ಮಧ್ಯೆ ಚಾಮರಾಜನಗರ ಜಿಲ್ಲಾಡಳಿತ ಮತದಾರರ ಪ್ರಮಾಣ ಹೆಚ್ಚಿಸಲು ಹೊಸದೊಂದು ಪ್ರಯತ್ನಕ್ಕೆ ಮುನ್ನುಡಿ ಬರೆದಿದೆ.

ನೀವು ಮದುವೆಯ ಮಮತೆಯ ಕರೆಯೋಲೆ ನೋಡಿದ್ದೀರಿ, ಆದರೆ, ಮತದಾನದ ಮಮತೆಯ ಕರೆಯೋಲೆ ನೋಡಿದ್ದೀರಾ?, ಹೌದು, ಮತದಾನ ಪ್ರಮಾಣ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತದಿಂದ ವಿನೂತನ ರೀತಿಯ ಆಮಂತ್ರಣ ಪತ್ರ ಅನಾವರಣಗೊಂಡಿದೆ.

ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶಿಷ್ಟ ಆಮಂತ್ರಣ ಪತ್ರಿಕೆ ಹೊರಡಿಸಿದ್ದು, ದಿನಾಂಕ 26.4.24 ರ ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ರಂದು ಸಲ್ಲುವ ಶುಭ ಲಗ್ನದಲ್ಲಿ ಲೋಕಸಭಾ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಈ ಹಿನ್ನಲೆ ನಿಮ್ಮ ಆಗಮನವೇ ಆಶೀರ್ವಾದ, ಮತದಾನವೇ ಉಡುಗೊರೆಯಾಗಲಿದೆ. ನಿಮ್ಮ ಹೆಸರು ನಮ್ಮ ಚುನಾವಣಾ ಮತದಾರರ ಪಟ್ಟಿಯಲ್ಲಿದೆ. ಹೀಗೆ ವಿವಾಹ ಆಮಂತ್ರಣ ಪತ್ರವನ್ನೇ ಹೋಲುವ ವಿಶಿಷ್ಟ ಆಮಂತ್ರಣ ಪತ್ರಿಕೆ ಇದಾಗಿದೆ.

ಇಂತಹ ವಿಶಿಷ್ಟ ಬೃಹತ್ ಆಮಂತ್ರಣ ಪತ್ರಿಕೆಯನ್ನು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅನಾವರಣಗೊಳಿಸಲಾಯಿತು.

ಇನ್ನೊಂದೆಡೆ ಮದುವೆ ಮನೆಯಲ್ಲೂ ಮತದಾನ ಜಾಗೃತಿ ನಡೆದಿದ್ದು, ನೂತನ ವಧು-ವರರಿಂದ ಮತದಾನದ ಮಹತ್ವ ಕುರಿತ ಬಿತ್ತಿ ಚಿತ್ರ ಬಿಡುಗಡೆಗೊಳಿಸಲಾಗಿದೆ. ನಮ್ಮ ಮತ ನಮ್ಮ ಹಕ್ಕು, ಚುನಾವಣಾ ಪರ್ವ ದೇಶದ ಗರ್ವ ಎಂಬ ಒಕ್ಕಣೆಯುಳ್ಳ ಬಿತ್ತಿ ಚಿತ್ರ ಇದಾಗಿದ್ದು, ಈ ಮೂಲಕ ವಿವಾಹಕ್ಕೆ ಆಗಮಿಸಿದ್ದವರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.
Published On - 3:25 pm, Fri, 29 March 24

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.
Read More



