AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಏಕೈಕ ಗೌರಿ ದೇವಾಲಯ ಈ ಜಿಲ್ಲೆಯಲ್ಲಿದೆ: ಗಣೇಶನಿಗೂ ಮೊದಲು ಗೌರಿಗೆ 12 ದಿನ ವಿಶೇಷ ಪೂಜೆ

ಚಾಮರಾಜನಗರ ತಾಲೂಕು ಕುದೇರು ಗ್ರಾಮದಲ್ಲಿ ಹನ್ನೆರಡು ದಿನಗಳ ಕಾಲ ಗೌರಿ ಹಬ್ಬ ಆಚರಿಸಲಾಗುತ್ತೆ. ಆ ಮೂಲಕ ಇಲ್ಲಿ ಮಾತ್ರ ಗಣೇಶನ ತಾಯಿಗೆ ಅಗ್ರ ಪೂಜೆ ಸಲ್ಲಿಸಲಾಗುತ್ತದೆ. ಮರಳಿನ ಗೌರಿ ವಿಗ್ರಹ ಸಿದ್ದಪಡಿಸಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಗ್ರಾಮದಲ್ಲಿರುವ ಸ್ವರ್ಣಗೌರಿ ದೇವಾಯಲದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 06, 2024 | 8:15 PM

Share
ಸಾಮಾನ್ಯವಾಗಿ ಎಲ್ಲಾ ಕಡೆ ಗಣೇಶನಿಗೆ ಅಗ್ರ ಪೂಜೆಯಾದರೆ ಇಲ್ಲಿ ಮಾತ್ರ ಗೌರಿಗೆ ಮೊದಲ ಪ್ರಾಶಸ್ತ್ಯ. ಹಾಗೆಯೇ ನಾಡಿನ ಎಲ್ಲಾ ಕಡೆ ಗಣೇಶನನ್ನು ಪ್ರತಿಸ್ಠಾಪಿಸಿ ಪೂಜೆ ಸಲ್ಲಿಸುವುದು ವಾಡಿಕೆಯಾದರೆ ಈ ಗ್ರಾಮದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ 12 ದಿನಗಳ ಕಾಲ ಪೂಜೆ ಪುನಸ್ಕಾರ ಮಾಡಿ ನಂತರ ವಿಸರ್ಜಿಸಲಾಗುತ್ತೆ. ಸಾಮಾನ್ಯವಾಗಿ ಗೌರಿಗಾಗಿ ಎಲ್ಲಿಯೂ ಪ್ರತ್ಯೇಕ ದೇವಾಲಯವಿಲ್ಲ. ಆದರೆ ಈ ಗ್ರಾಮದಲ್ಲಿ ಗೌರಿಯ ದೇವಾಲಯವಿದೆ. 

ಸಾಮಾನ್ಯವಾಗಿ ಎಲ್ಲಾ ಕಡೆ ಗಣೇಶನಿಗೆ ಅಗ್ರ ಪೂಜೆಯಾದರೆ ಇಲ್ಲಿ ಮಾತ್ರ ಗೌರಿಗೆ ಮೊದಲ ಪ್ರಾಶಸ್ತ್ಯ. ಹಾಗೆಯೇ ನಾಡಿನ ಎಲ್ಲಾ ಕಡೆ ಗಣೇಶನನ್ನು ಪ್ರತಿಸ್ಠಾಪಿಸಿ ಪೂಜೆ ಸಲ್ಲಿಸುವುದು ವಾಡಿಕೆಯಾದರೆ ಈ ಗ್ರಾಮದಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ 12 ದಿನಗಳ ಕಾಲ ಪೂಜೆ ಪುನಸ್ಕಾರ ಮಾಡಿ ನಂತರ ವಿಸರ್ಜಿಸಲಾಗುತ್ತೆ. ಸಾಮಾನ್ಯವಾಗಿ ಗೌರಿಗಾಗಿ ಎಲ್ಲಿಯೂ ಪ್ರತ್ಯೇಕ ದೇವಾಲಯವಿಲ್ಲ. ಆದರೆ ಈ ಗ್ರಾಮದಲ್ಲಿ ಗೌರಿಯ ದೇವಾಲಯವಿದೆ. 

1 / 6
ವಿಘ್ನವಿನಾಶಕ ಗಣೇಶನಿಗೆ ಮೊದಲ ಪೂಜೆ ಸಲ್ಲಿಸುವುದು ಸಂಪ್ರದಾಯ. ಆದರೆ ಇಲ್ಲಿ ಮಾತ್ರ ಗಣೇಶನ ತಾಯಿಗೆ ಅಗ್ರ ಪೂಜೆ. ಗೌರಿ ಹಬ್ಬದ ದಿನ ಎಲ್ಲ ಕಡೆ ಒಂದು ದಿನ ಮಾತ್ರ ಗೌರಿ ಹಬ್ಬ ಆಚರಿಸಿದರೆ, ಚಾಮರಾಜನಗರ ತಾಲೂಕು ಕುದೇರು ಗ್ರಾಮದಲ್ಲಿ ಹನ್ನೆರಡು ದಿನಗಳ ಕಾಲ ಗೌರಿ ಹಬ್ಬ ಆಚರಿಸಲಾಗುತ್ತೆ.

ವಿಘ್ನವಿನಾಶಕ ಗಣೇಶನಿಗೆ ಮೊದಲ ಪೂಜೆ ಸಲ್ಲಿಸುವುದು ಸಂಪ್ರದಾಯ. ಆದರೆ ಇಲ್ಲಿ ಮಾತ್ರ ಗಣೇಶನ ತಾಯಿಗೆ ಅಗ್ರ ಪೂಜೆ. ಗೌರಿ ಹಬ್ಬದ ದಿನ ಎಲ್ಲ ಕಡೆ ಒಂದು ದಿನ ಮಾತ್ರ ಗೌರಿ ಹಬ್ಬ ಆಚರಿಸಿದರೆ, ಚಾಮರಾಜನಗರ ತಾಲೂಕು ಕುದೇರು ಗ್ರಾಮದಲ್ಲಿ ಹನ್ನೆರಡು ದಿನಗಳ ಕಾಲ ಗೌರಿ ಹಬ್ಬ ಆಚರಿಸಲಾಗುತ್ತೆ.

2 / 6
ಅಷ್ಟೆ ಅಲ್ಲ ನಾಡಿನ ಎಲ್ಲಾ ಕಡೆ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜಿಸಿದರೆ, ಇಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತೆ. ಗೌರಿಹಬ್ಬದ ದಿನದಂದು ಬೆಳಿಗ್ಗೆ ಗ್ರಾಮದ ದೊಡ್ಡಕೆರೆಯ ಬಳಿ ವಿಶೇಷ ಹೋಮ ಹವನಗಳೊಂದಿಗೆ ಮರಳಿನ ಗೌರಿ ವಿಗ್ರಹ ಸಿದ್ದಪಡಿಸಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಗ್ರಾಮದಲ್ಲಿರುವ ಸ್ವರ್ಣಗೌರಿ ದೇವಾಯಲದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಮೆರವಣಿಗೆ ಸಂದರ್ಭದಲ್ಲಿ ಸುತ್ತಮುತ್ತಲ ಗ್ರಾಮಗಳಷ್ಟೆ ಅಲ್ಲ ರಾಜ್ಯದ ವಿವಿಧೆಡೆಯಿಂದ ನೂರಾರು ಮಹಿಳೆಯರು ಬಂದು ಗೌರಿಗೆ ಬಾಗಿನ ಅರ್ಪಿಸುತ್ತಾರೆ

ಅಷ್ಟೆ ಅಲ್ಲ ನಾಡಿನ ಎಲ್ಲಾ ಕಡೆ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜಿಸಿದರೆ, ಇಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತೆ. ಗೌರಿಹಬ್ಬದ ದಿನದಂದು ಬೆಳಿಗ್ಗೆ ಗ್ರಾಮದ ದೊಡ್ಡಕೆರೆಯ ಬಳಿ ವಿಶೇಷ ಹೋಮ ಹವನಗಳೊಂದಿಗೆ ಮರಳಿನ ಗೌರಿ ವಿಗ್ರಹ ಸಿದ್ದಪಡಿಸಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಗ್ರಾಮದಲ್ಲಿರುವ ಸ್ವರ್ಣಗೌರಿ ದೇವಾಯಲದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಮೆರವಣಿಗೆ ಸಂದರ್ಭದಲ್ಲಿ ಸುತ್ತಮುತ್ತಲ ಗ್ರಾಮಗಳಷ್ಟೆ ಅಲ್ಲ ರಾಜ್ಯದ ವಿವಿಧೆಡೆಯಿಂದ ನೂರಾರು ಮಹಿಳೆಯರು ಬಂದು ಗೌರಿಗೆ ಬಾಗಿನ ಅರ್ಪಿಸುತ್ತಾರೆ

3 / 6
ಸ್ವರ್ಣಗೌರಿ ಎಂದು ಕರೆಯಲ್ಪಡುವ ಈ ಗೌರಮ್ಮನಿಗೆ ಹರಕೆ ಹೊತ್ತುಕೊಂಡರೆ ಎಲ್ಲಾ ಇಷ್ಟಾರ್ಥಗಳು ಸಿದ್ದಿಸುತ್ತವೆ ಎಂಬ ನಂಬಿಕೆಯಿದೆ. ಅದರಲ್ಲೂ ವಿಶೇಷವಾಗಿ ಕಂಕಣಭಾಗ್ಯ, ಸಂತಾನಭಾಗ್ಯ ವಿವಾಹಿತರಿಗೆ, ಮುತ್ತೈದೆ ಭಾಗ್ಯ ಲಭಿಸುತ್ತದೆ ಎಂಬ ನಂಬಿಕೆಯಿರುವುದರಿಂದ ರಾಜ್ಯದ ವಿವಿಧೆಡೆಯಿಂದ ಇಲ್ಲಿಗೆ ಭಕ್ತರ ದಂಡೆ ಹರಿದುಬರುತ್ತೆ. ಇಷ್ಟಾರ್ಥ ಸಿದ್ದಿಸಿದವರು ಗೌರಿಗೆ ಬಾಗಿನ ಅರ್ಪಿಸಿ ತಮ್ಮ ಹರಕೆ ತೀರಿಸುತ್ತಾರೆ. ಮತ್ತೆ ಕೆಲವರು ಇದೇ ಸಂದರ್ಭದಲ್ಲಿ ಹರಕೆ ಹೊತ್ತುಕೊಳ್ಳುತ್ತಾರೆ.

ಸ್ವರ್ಣಗೌರಿ ಎಂದು ಕರೆಯಲ್ಪಡುವ ಈ ಗೌರಮ್ಮನಿಗೆ ಹರಕೆ ಹೊತ್ತುಕೊಂಡರೆ ಎಲ್ಲಾ ಇಷ್ಟಾರ್ಥಗಳು ಸಿದ್ದಿಸುತ್ತವೆ ಎಂಬ ನಂಬಿಕೆಯಿದೆ. ಅದರಲ್ಲೂ ವಿಶೇಷವಾಗಿ ಕಂಕಣಭಾಗ್ಯ, ಸಂತಾನಭಾಗ್ಯ ವಿವಾಹಿತರಿಗೆ, ಮುತ್ತೈದೆ ಭಾಗ್ಯ ಲಭಿಸುತ್ತದೆ ಎಂಬ ನಂಬಿಕೆಯಿರುವುದರಿಂದ ರಾಜ್ಯದ ವಿವಿಧೆಡೆಯಿಂದ ಇಲ್ಲಿಗೆ ಭಕ್ತರ ದಂಡೆ ಹರಿದುಬರುತ್ತೆ. ಇಷ್ಟಾರ್ಥ ಸಿದ್ದಿಸಿದವರು ಗೌರಿಗೆ ಬಾಗಿನ ಅರ್ಪಿಸಿ ತಮ್ಮ ಹರಕೆ ತೀರಿಸುತ್ತಾರೆ. ಮತ್ತೆ ಕೆಲವರು ಇದೇ ಸಂದರ್ಭದಲ್ಲಿ ಹರಕೆ ಹೊತ್ತುಕೊಳ್ಳುತ್ತಾರೆ.

4 / 6
ಸಾಮನ್ಯವಾಗಿ ಗೌರಿಗೆ ಎಲ್ಲಿಯೂ ದೇವಾಲಯವಿಲ್ಲ. ಆದರೆ ಕುದೇರು ಗ್ರಾಮದಲ್ಲಿ ನೂರ ಹತ್ತು ವರ್ಷಗಳ ಹಿಂದೆಯೇ ಸ್ವರ್ಣಗೌರಿ ದೇವಾಲಯ ನಿರ್ಮಿಸಲಾಗಿದೆ. ಗೌರಿಹಬ್ಬದ ದಿನದಂದು ಮೆರವಣಿಗೆ ನಂತರ ಗೌರಮ್ಮನನ್ನು ಸ್ವರ್ಣಗೌರಿ ದೇವಾಲಯದಲ್ಲಿ ಪ್ರತಿಷ್ಟಾಪಿಸಿ 12 ದಿನಗಳ ಕಾಲ ವಿವಿಧ ರೀತಿಯಲ್ಲಿ ಅಲಂಕರಿಸಿ ಪೂಜೆ ಸಲ್ಲಿಸಿ ನಂತರ ವಿಜೃಂಭಣೆಯಿಂದ ವಿಸರ್ಜಿಸಲಾಗುತ್ತೆ.

ಸಾಮನ್ಯವಾಗಿ ಗೌರಿಗೆ ಎಲ್ಲಿಯೂ ದೇವಾಲಯವಿಲ್ಲ. ಆದರೆ ಕುದೇರು ಗ್ರಾಮದಲ್ಲಿ ನೂರ ಹತ್ತು ವರ್ಷಗಳ ಹಿಂದೆಯೇ ಸ್ವರ್ಣಗೌರಿ ದೇವಾಲಯ ನಿರ್ಮಿಸಲಾಗಿದೆ. ಗೌರಿಹಬ್ಬದ ದಿನದಂದು ಮೆರವಣಿಗೆ ನಂತರ ಗೌರಮ್ಮನನ್ನು ಸ್ವರ್ಣಗೌರಿ ದೇವಾಲಯದಲ್ಲಿ ಪ್ರತಿಷ್ಟಾಪಿಸಿ 12 ದಿನಗಳ ಕಾಲ ವಿವಿಧ ರೀತಿಯಲ್ಲಿ ಅಲಂಕರಿಸಿ ಪೂಜೆ ಸಲ್ಲಿಸಿ ನಂತರ ವಿಜೃಂಭಣೆಯಿಂದ ವಿಸರ್ಜಿಸಲಾಗುತ್ತೆ.

5 / 6
ಎಲ್ಲ ಸಮುದಾಯದವರು ಗೌರಿಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸುವುದರೊಂದಿಗೆ ಸರ್ವಜನಾಂಗದ ಸಾಮರಸ್ಯದ ದ್ಯೋತಕವಾಗಿದ್ದಾಳೆ ಕುದೇರಿನ ಸ್ವರ್ಣಗೌರಿ.

ಎಲ್ಲ ಸಮುದಾಯದವರು ಗೌರಿಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸುವುದರೊಂದಿಗೆ ಸರ್ವಜನಾಂಗದ ಸಾಮರಸ್ಯದ ದ್ಯೋತಕವಾಗಿದ್ದಾಳೆ ಕುದೇರಿನ ಸ್ವರ್ಣಗೌರಿ.

6 / 6

Published On - 8:12 pm, Fri, 6 September 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ