Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ರೀತಿ ಹಬ್ಬ ನೋಡಿದ್ದೀರಾ?

ಚಾಮರಾಜನಗರದ ಕಮರವಾಡಿ ಗ್ರಾಮದ ಮೂಗುಮಾರಮ್ಮ ಹಬ್ಬದಲ್ಲಿ, ಹರಕೆ ಹೊತ್ತ ಭಕ್ತರು ತಮ್ಮ ತಲೆ ಮೇಲೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ಪದ್ಧತಿ ಇದೆ. ಯಾವುದೇ ಗಾಯವಾಗದೆ ತೆಂಗಿನಕಾಯಿ ಎರಡು ಭಾಗಗಳಾಗುತ್ತದೆ. ಈ ಪದ್ಧತಿಯು ತಲೆತಲಾಂತರಗಳಿಂದ ನಡೆದುಬಂದಿದ್ದು, ಭಕ್ತಿಯ ಪ್ರತೀಕವಾಗಿದೆ. ಮೂರು ದಿನಗಳ ಈ ಹಬ್ಬದಲ್ಲಿ ವಿವಿಧ ಪೂಜೆಗಳು ಮತ್ತು ಪಡಿತರ ಸಂಗ್ರಹಣೆ ನಡೆಯುತ್ತದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Mar 19, 2025 | 9:13 PM

ದೇವರಿಗೆ ಪೂಜೆ ಸಲ್ಲಿಸಲು ತೆಂಗಿನ ಕಾಯಿಯನ್ನು ಕಲ್ಲಿನಿಂದಲೋ, ಮಚ್ಚಿನಿಂದಲೋ ಒಡೆಯುವುದು ಸಾಮಾನ್ಯ. ಆದರೆ ಈ ಗ್ರಾಮದಲ್ಲಿ ನಡೆಯುವ ಮುದುಕಮಾರಮ್ಮ ಹಬ್ಬದಲ್ಲಿ ತೆಂಗಿನ ಕಾಯಿಗಳನ್ನು ಹರಕೆ ಹೊತ್ತ ಭಕ್ತರ ತಲೆಗೆ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ದತಿ ಇದೆ. ತೆಂಗಿನ ಕಾಯಿಗಳನ್ನ ತಲೆ ಮೇಲೆ ಒಡೆದರೂ ಅವರ ತಲೆಗೆ ನೋವಾಗಲಿ ಒಂದು ಹನಿ ರಕ್ತವಾಗಲಿ ಬರುವುದಿಲ್ಲ. ಈ ವಿಶಿಷ್ಟ ಹಬ್ಬದ ಕುರಿತು ಒಂದು ವರದಿ ಇಲ್ಲಿದೆ.

ದೇವರಿಗೆ ಪೂಜೆ ಸಲ್ಲಿಸಲು ತೆಂಗಿನ ಕಾಯಿಯನ್ನು ಕಲ್ಲಿನಿಂದಲೋ, ಮಚ್ಚಿನಿಂದಲೋ ಒಡೆಯುವುದು ಸಾಮಾನ್ಯ. ಆದರೆ ಈ ಗ್ರಾಮದಲ್ಲಿ ನಡೆಯುವ ಮುದುಕಮಾರಮ್ಮ ಹಬ್ಬದಲ್ಲಿ ತೆಂಗಿನ ಕಾಯಿಗಳನ್ನು ಹರಕೆ ಹೊತ್ತ ಭಕ್ತರ ತಲೆಗೆ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ದತಿ ಇದೆ. ತೆಂಗಿನ ಕಾಯಿಗಳನ್ನ ತಲೆ ಮೇಲೆ ಒಡೆದರೂ ಅವರ ತಲೆಗೆ ನೋವಾಗಲಿ ಒಂದು ಹನಿ ರಕ್ತವಾಗಲಿ ಬರುವುದಿಲ್ಲ. ಈ ವಿಶಿಷ್ಟ ಹಬ್ಬದ ಕುರಿತು ಒಂದು ವರದಿ ಇಲ್ಲಿದೆ.

1 / 5
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಪ್ರತಿ ವರ್ಷ ಗ್ರಾಮದೇವತೆ ಮೂಗುಮಾರಮ್ಮನ ಹಬ್ಬ ಮೂರು ದಿನಗಳ ಕಾಲ ನಡೆಯುತ್ತೆ. ತೆಂಗಿನ ಕಾಯಿಗಳನ್ನು
ಭಕ್ತರ ತಲೆಗೆ ಒಡೆದು ಪೂಜೆ ಸಲ್ಲಿಸುವುದೇ ಈ ಜಾತ್ರೆಯ ವಿಶೇಷವಾಗಿದೆ. ಹರಕೆ ಹೊತ್ತ ಭಕ್ತರು ತಮ್ಮ ತಲೆಯಿಂದ ತೆಂಗಿನ ಕಾಯಿ ಒಡೆಸಿಕೊಂಡು ಭಕ್ತಿಯ ಪರಕಾಷ್ಠ ಮೆರೆಯುತ್ತಾರೆ. ಮೊದಲ ದಿನ ನಡೆಯುವ ಮಾರಮ್ಮನ ಮೆರವಣಿಗೆಯಲ್ಲಿ ಭಕ್ತರ ತಲೆ ಮೇಲೆ ಕಾಯಿ ಒಡೆದು ಪೂಜೆ ಸಲ್ಲಿಸಲಾಗುತ್ತದೆ.

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಪ್ರತಿ ವರ್ಷ ಗ್ರಾಮದೇವತೆ ಮೂಗುಮಾರಮ್ಮನ ಹಬ್ಬ ಮೂರು ದಿನಗಳ ಕಾಲ ನಡೆಯುತ್ತೆ. ತೆಂಗಿನ ಕಾಯಿಗಳನ್ನು ಭಕ್ತರ ತಲೆಗೆ ಒಡೆದು ಪೂಜೆ ಸಲ್ಲಿಸುವುದೇ ಈ ಜಾತ್ರೆಯ ವಿಶೇಷವಾಗಿದೆ. ಹರಕೆ ಹೊತ್ತ ಭಕ್ತರು ತಮ್ಮ ತಲೆಯಿಂದ ತೆಂಗಿನ ಕಾಯಿ ಒಡೆಸಿಕೊಂಡು ಭಕ್ತಿಯ ಪರಕಾಷ್ಠ ಮೆರೆಯುತ್ತಾರೆ. ಮೊದಲ ದಿನ ನಡೆಯುವ ಮಾರಮ್ಮನ ಮೆರವಣಿಗೆಯಲ್ಲಿ ಭಕ್ತರ ತಲೆ ಮೇಲೆ ಕಾಯಿ ಒಡೆದು ಪೂಜೆ ಸಲ್ಲಿಸಲಾಗುತ್ತದೆ.

2 / 5
ಎರಡನೇ ದಿನ ವಿಶೇಷಪೂಜೆ, ಪುನಸ್ಕಾರಗಳು ನಡೆಯುತ್ತವೆ. ಮೂರನೇ ದಿನ ಗ್ರಾಮದ ಮನೆ ಮನೆಗಳಿಗೆ ಪಡಿತರ ಸಂಗ್ರಹಿಸಲಾಗುತ್ತದೆ. ಈ ವೇಳೆ ಹರಕೆ ಹೊತ್ತವರ ತಲೆ ಮೇಲೆ ತೆಂಗಿನ ಕಾಯಿ ಒಡೆಯಲಾಗುತ್ತದೆ. ಗ್ರಾಮದ ಪ್ರತಿ ಮನೆಯ ಬಳಿ ಹೋಗಿ ಅಕ್ಕಿ, ಬೆಲ್ಲ ಪಡೆದು ಬಳಿಕ ಆ ಮನೆಯವರಿಗೆ ಅವರ ಮನೆಯ ಮುಂದೆಯೇ ತೆಂಗಿನಕಾಯಿಯನ್ನ ಒಡೆಯಲಾಗುತ್ತೆ.

ಎರಡನೇ ದಿನ ವಿಶೇಷಪೂಜೆ, ಪುನಸ್ಕಾರಗಳು ನಡೆಯುತ್ತವೆ. ಮೂರನೇ ದಿನ ಗ್ರಾಮದ ಮನೆ ಮನೆಗಳಿಗೆ ಪಡಿತರ ಸಂಗ್ರಹಿಸಲಾಗುತ್ತದೆ. ಈ ವೇಳೆ ಹರಕೆ ಹೊತ್ತವರ ತಲೆ ಮೇಲೆ ತೆಂಗಿನ ಕಾಯಿ ಒಡೆಯಲಾಗುತ್ತದೆ. ಗ್ರಾಮದ ಪ್ರತಿ ಮನೆಯ ಬಳಿ ಹೋಗಿ ಅಕ್ಕಿ, ಬೆಲ್ಲ ಪಡೆದು ಬಳಿಕ ಆ ಮನೆಯವರಿಗೆ ಅವರ ಮನೆಯ ಮುಂದೆಯೇ ತೆಂಗಿನಕಾಯಿಯನ್ನ ಒಡೆಯಲಾಗುತ್ತೆ.

3 / 5
ತಮ್ಮ ತಲೆ ಮೇಲೆ ತೆಂಗಿನ ಕಾಯಿ ಒಡೆದರೂ ಯಾವುದೇ ನೋವುಂಟಾಗುವುದಿಲ್ಲ ರಕ್ತವೂ ಬರುವುದಿಲ್ಲ, ಇದೆಲ್ಲಾ ಗ್ರಾಮದೇವತೆ ಮೂಗುಮಾರಮ್ಮನ ಪವಾಡ ಎನ್ನುತ್ತಾರೆ ಹರಕೆ ಹೊತ್ತ ಭಕ್ತರು. ತಲೆ ಮೇಲೆ ಒಡೆಯುವ ತೆಂಗಿನ ಕಾಯಿ ಒಂದೇ ಏಟಿಗೆ ಪಟಾರನೆ ಎರಡು ಹೋಳಾಗುತ್ತದೆ.

ತಮ್ಮ ತಲೆ ಮೇಲೆ ತೆಂಗಿನ ಕಾಯಿ ಒಡೆದರೂ ಯಾವುದೇ ನೋವುಂಟಾಗುವುದಿಲ್ಲ ರಕ್ತವೂ ಬರುವುದಿಲ್ಲ, ಇದೆಲ್ಲಾ ಗ್ರಾಮದೇವತೆ ಮೂಗುಮಾರಮ್ಮನ ಪವಾಡ ಎನ್ನುತ್ತಾರೆ ಹರಕೆ ಹೊತ್ತ ಭಕ್ತರು. ತಲೆ ಮೇಲೆ ಒಡೆಯುವ ತೆಂಗಿನ ಕಾಯಿ ಒಂದೇ ಏಟಿಗೆ ಪಟಾರನೆ ಎರಡು ಹೋಳಾಗುತ್ತದೆ.

4 / 5
ಒಟ್ಟಾರೆ ತಲೆತಲಾಂತರಗಳಿಂದ ನಡೆದು ಬಂದಿರುವ ಈ ಪದ್ದತಿಯನ್ನು ಇಂದಿನ ಪೀಳಿಗೆಯುವರು ಮುಂದುವರಿಸಿಕೊಂಡು ಹೋಗುತ್ತಿರುವುದು ವಿಶೇಷವಾಗಿದೆ.

ಒಟ್ಟಾರೆ ತಲೆತಲಾಂತರಗಳಿಂದ ನಡೆದು ಬಂದಿರುವ ಈ ಪದ್ದತಿಯನ್ನು ಇಂದಿನ ಪೀಳಿಗೆಯುವರು ಮುಂದುವರಿಸಿಕೊಂಡು ಹೋಗುತ್ತಿರುವುದು ವಿಶೇಷವಾಗಿದೆ.

5 / 5
Follow us
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ