AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಚಾಣಕ್ಯ ನೀತಿ; ಜೀವನದಲ್ಲಿ ನಿಜವಾದ ಸ್ನೇಹಿತರು ಯಾರು?

ಆಚಾರ್ಯ ಚಾಣಕ್ಯರು ಉತ್ತಮ ರಾಜಕೀಯ ಜ್ಞಾನವನ್ನು ಹೊಂದಿದ್ದವರು ಮಾತ್ರವಲ್ಲದೆ ರಾಜತಾಂತ್ರಿಕತೆಯಲ್ಲಿಯೂ ನಿಪುಣರಾಗಿದ್ದವರು. ಪ್ರತಿಯೊಬ್ಬ ವ್ಯಕ್ತಿಗೆ ಎಂತಹ ಸ್ನೇಹಿತರು ಬೇಕು? ಎಂಥವರನ್ನು ಗೆಳೆಯರನ್ನಾಗಿ ಮಾಡಿಕೊಳ್ಳಬೇಕು? ಯಾವ ರೀತಿಯ ಸ್ವಭಾವದವರನ್ನು ಕಣ್ಣುಮುಚ್ಚಿ ನಂಬಬಹುದು ಎಂಬ ಬಗ್ಗೆ ತಮ್ಮ ನೀತಿಯಲ್ಲಿ ಉಲ್ಲೇಖಿಸಿದ್ದಾರೆ. ಅಂತಹ ಕೆಲವು ವಿಚಾರಗಳ ಮಾಹಿತಿ ಇಲ್ಲಿದೆ.

ಗಣಪತಿ ಶರ್ಮಾ
|

Updated on:Apr 08, 2023 | 10:02 AM

Share
Chanakya Niti: ಚಾಣಕ್ಯ ನೀತಿ; ಜೀವನದಲ್ಲಿ ನಿಜವಾದ ಸ್ನೇಹಿತರು ಯಾರು?

ಚಾಣಕ್ಯರ ಪ್ರಕಾರ, ನಿಜವಾದ ಸ್ನೇಹಿತ ಎಂದರೆ ನಿಮ್ಮ ಸಂತೋಷದ ಸಮಯದಲ್ಲಿ ಮಾತ್ರ ನಿಮ್ಮೊಂದಿಗೆ ಉಳಿಯುವವನಲ್ಲ. ಕಷ್ಟದ ಸಮಯದಲ್ಲಿಯೂ ನಿಮ್ಮನ್ನು ಬೆಂಬಲಿಸುವವನೇ ನಿಜವಾದ ಸ್ನೇಹಿತ. ಅಂತಹ ಸ್ನೇಹಿತರ ಸಹವಾಸವು ವ್ಯಕ್ತಿಗೆ ಯಾವುದೇ ಪರಿಸ್ಥಿತಿಯ ವಿರುದ್ಧ ಹೋರಾಡುವ ಧೈರ್ಯವನ್ನು ನೀಡುತ್ತದೆ. ದುಃಖದಲ್ಲಿ ನಿಮ್ಮನ್ನು ಬೆಂಬಲಿಸುವ ಸ್ನೇಹಿತರು ಎಂದಿಗೂ ನಿಮ್ಮನ್ನು ಬಿಡುವುದಿಲ್ಲ ಎಂದು ನಂಬಲಾಗಿದೆ.

1 / 5
Chanakya niti these type of friends in life will help you how to choose friends

ನೀವು ಆರ್ಥಿಕ ಸಂಕಷ್ಟದಲ್ಲಿದ್ದಾಗ ಯಾರು ನಿಮಗೆ ಸಹಾಯ ಮಾಡುತ್ತಾರೆಯೋ ಅಂತಹ ಸ್ನೇಹಿತರು ನಿಜವಾದ ಗೆಳೆಯರು. ಇದಲ್ಲದೆ, ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಹಾಗೂ ನಿಮಗೆ ಸಹಾಯ ಮಾಡುವ ಸ್ನೇಹಿತರೊಂದಿಗೆ ಯಾವಾಗಲೂ ಸಂಬಂಧವನ್ನು ಕಾಪಾಡಿಕೊಳ್ಳಬೇಕು ಎಂದು ಚಾಣಕ್ಯ ತನ್ನ ನೀತಿಗಳಲ್ಲಿ ಹೇಳಿದ್ದಾರೆ.

2 / 5
Chanakya niti these type of friends in life will help you how to choose friends

ಬಹಳ ನಿಕಟ ಬಾಂಧವ್ಯ ಹೊಂದಿರುವ ಅಥವಾ ವಿಶೇಷ ವ್ಯಕ್ತಿಯೊಬ್ಬರನ್ನು ತೊರೆದಾಗ ಆ ಸಮಯವು ಜನರಿಗೆ ತುಂಬಾ ಕಷ್ಟಕರವಾಗಿರುತ್ತದೆ. ಅಂತಹ ಸಮಯದಲ್ಲಿ, ಒಳ್ಳೆಯ ಮತ್ತು ನಿಜವಾದ ಸ್ನೇಹಿತ ಅತ್ಯಂತ ಅವಶ್ಯಕ. ಚಾಣಕ್ಯನ ಪ್ರಕಾರ, ಅಂತಹ ಪರಿಸ್ಥಿತಿಯಲ್ಲಿ ನಿಮ್ಮೊಂದಿಗೆ ಉಳಿಯುವ, ನಿಮ್ಮನ್ನು ಬೆಂಬಲಿಸುವವರನ್ನು ನಿಮ್ಮ ನಿಜವಾದ ಸ್ನೇಹಿತ ಎಂದು ಪರಿಗಣಿಸಬಹುದಾಗಿದೆ.

3 / 5
Chanakya niti these type of friends in life will help you how to choose friends

ಚಾಣಕ್ಯ ಹೇಳುವ ಪ್ರಕಾರ, ಉತ್ತಮ ಸ್ನೇಹಿತರಾದವರು ಅನಾರೋಗ್ಯದ ಸಂದರ್ಭದಲ್ಲಿಯೂ ನಿಮ್ಮನ್ನು ಬಿಡುವುದಿಲ್ಲ. ಅಂಥ ಸಂದರ್ಭದಲ್ಲಿ ನಿಮಗೆ ಸಹಾಯ ಮಾಡುವ ಸ್ನೇಹಿತರೊಂದಿಗೆ ಸ್ನೇಹ ಬೆಳೆಸುವುದು ನಿಮಗೆ ಪ್ರಯೋಜನಕಾರಿಯಾಗಿದೆ. ಪ್ರತಿಕೂಲ ಸಂದರ್ಭಗಳಲ್ಲಿಯೂ ಇಂಥ ಗೆಳೆಯರನ್ನು ನೀವು ಕಣ್ಣುಮುಚ್ಚಿ ನಂಬಬಹುದು.

4 / 5
Chanakya niti these type of friends in life will help you how to choose friends

ಯಾರ ಮನಸ್ಸು ಸ್ಪಷ್ಟವಾಗಿರುತ್ತದೆ ಮತ್ತು ತಮ್ಮ ಸಂತೋಷವನ್ನು ತ್ಯಾಗ ಮಾಡುವ ಮೂಲಕ ಇತರರಿಗೆ ಒಳ್ಳೆಯದನ್ನು ಮಾಡುತ್ತಾರೆಯೋ ಹೆಚ್ಚಿನ ಜನರು ಅಂತಹ ಜನರಿಗೆ ಮೋಸ ಮಾಡುತ್ತಾರೆ. ಒಬ್ಬ ವ್ಯಕ್ತಿಯು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಪಡೆದಾಗ, ಅವನು ನೋವು ಅನುಭವಿಸುತ್ತಾನೆ. ಹೆಚ್ಚಿನ ಜನರು ಔದಾರ್ಯದ ದುರುಪಯೋಗವನ್ನು ಶಪಿಸಲು ಪ್ರಾರಂಭಿಸುತ್ತಾರೆ ಎಂದು ಚಾಣಕ್ಯರು ಹೇಳಿದ್ದಾರೆ.

5 / 5

Published On - 9:20 am, Sat, 8 April 23

Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ