Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.7 ರಿಂದ ಚಿಕ್ಕಬಳ್ಳಾಪುರ ಉತ್ಸವ 2023 ಪ್ರಾರಂಭ, ಮೆರವಣಿಗೆಯ ಫೋಟೋಗಳು ಇಲ್ಲಿವೆ

ಇಂದಿನಿಂದ 7 ದಿನಗಳ ಕಾಲ ನಡೆಯುವ ಚಿಕ್ಕಬಳ್ಳಾಪುರದ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

TV9 Web
| Updated By: ವಿವೇಕ ಬಿರಾದಾರ

Updated on: Jan 08, 2023 | 1:07 AM

Chikkaballapur utsav 2023

ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ (ಜ.7) "ಚಿಕ್ಕಬಳ್ಳಾಪುರ ಉತ್ಸವ 2023" ಪ್ರಾಂಭವಾಗಿದೆ.

1 / 12
Chikkaballapur utsav 2023

"ಚಿಕ್ಕಬಳ್ಳಾಪುರ ಉತ್ಸವ 2023" ಕಾರ್ಯಕ್ರಮದ ಅಂಗವಾಗಿ ಕಲಾತಂಡಗಳ ಮತ್ತು ಸ್ತಬ್ಧಚಿತ್ರಗಳ ಮೆರವಣಿಗೆ ನಡೆದಿಯಿತು.

2 / 12
Chikkaballapur utsav 2023

ಮೆರವಣಿಗೆಗೆ ಚಿಕ್ಕಬಳ್ಳಾಪುರ ನಗರದ ಎಂ. ಜಿ.ರಸ್ತೆಯ ಶ್ರೀ ಮರಳು ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಹಸಿರು ನಿಶಾನೆ ನೀಡುವ ತೋರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

3 / 12
Chikkaballapur utsav 2023

ಅದ್ದೂರಿ ಮೆರವಣಿಗೆಯ ಚಾಲನ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಕಲಾವಿದರು, 21 ಸ್ತಬ್ಧಚಿತ್ರಗಳು, ವಿವಿಧ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಜನಸಾಗರವೇ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು.

4 / 12
Chikkaballapur utsav 2023

ಸೋಮನ ಕುಣಿತ, ನವಿಲು ಕುಣಿತ, ಕೀಲುಕುದುರೆ, ಡೊಳ್ಳು ಕುಣಿತ, ಕುದುರೆ ಸಾರೋಟ್, ಕರಡಿ ಕುಣಿತ, ವೀರಗಾಸೆ, ದೇವರ ಕುಣಿತಗಳು ಸೇರಿದಂತೆ ದೇಶದ ಮತ್ತು ರಾಜ್ಯದ ನಾನಾ ಪ್ರಕಾರದ ನೃತ್ಯ ಪ್ರಕಾರಗಳ ಕಲಾತಂಡಗಳು ಉತ್ಸವದ ಚಾಲನೆಗೆ ಮೆರುಗು ತಂದವು.

5 / 12
Chikkaballapur utsav 2023

ಈ ಚಾಲನೆ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಇತರರು ಇದ್ದರು.

6 / 12
Chikkaballapur utsav 2023

ಸಚಿವ ಡಾ.ಕೆ.ಸುಧಾಕರ್ ಮತ್ತು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಒಂದೇ ಸಾರೋಟಿನಲ್ಲಿ ಕುಳಿತು ಸಾಗಿದರು.

7 / 12
Chikkaballapur utsav 2023

ಸಚಿವ ಡಾ.ಕೆ.ಸುಧಾಕರ್ ಸಾರೋಟು ಓಡಿಸುತ್ತಿರುವ ದೃಶ್ಯ

8 / 12
Chikkaballapur utsav 2023

ಇಂದಿನಿಂದ 7 ದಿನಗಳ ಕಾಲ ನಡೆಯುವ ಚಿಕ್ಕಬಳ್ಳಾಪುರದ ಉತ್ಸವಕ್ಕೆ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

9 / 12
Chikkaballapur utsav 2023

ಕಾರ್ಯಕ್ರಮದಲ್ಲಿ ರಾಜ್ಯಸಭೆ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು. ಸಚಿವರಾದ ಡಾ.ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ಸುನಿಲ್ ಕುಮಾರ್‌, ಭೈರತಿ ಬಸವರಾಜ್ ಭಾಗಿಯಾಗಿದ್ದರು.

10 / 12
Chikkaballapur utsav 2023

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ. ವೀರೇಂದ್ರ ಹೆಗ್ಗಡೆ, ಸಚಿವರಾದ ಡಾ.ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ಸುನಿಲ್ ಕುಮಾರ್‌, ಭೈರತಿ ಬಸವರಾಜ್ ಉತ್ಸವದಲ್ಲಿನ ಮರಳಿನಿಂದ ನಿರ್ಮಿಸಲಾದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ವೀಕ್ಷಿಸುತ್ತಿರುವ ಸಂದರ್ಭ

11 / 12
Chikkaballapur utsav 2023

ಚಿಕ್ಕಬಳ್ಳಾಪುರ ಉತ್ಸವ 2023ರಲ್ಲಿ ನಟ ಕಿಚ್ಚ ಸುದೀಪ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

12 / 12
Follow us
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ