AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಹಲಸು ಬಲು ಸೊಗಸು: ಹೈದರಾಬಾದ್​​ನಲ್ಲೂ ಭಾರೀ ಡಿಮ್ಯಾಂಡ್

ಚಿಕ್ಕಬಳ್ಳಾಪುರದ ರೈತರು ಬೆಳೆಯುವ ಹಲಸಿನ ಹಣ್ಣಿಗೆ ಹೈದರಾಬಾದ್‌ನಲ್ಲಿ ಭಾರೀ ಬೇಡಿಕೆಯಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸು ಹೈದರಾಬಾದ್‌ಗೆ ರವಾನೆಯಾಗುತ್ತಿದೆ. ವಿಶೇಷ ರುಚಿ ಹಾಗೂ ನೀರಿನಾಂಶದಿಂದಾಗಿ ಚಿಕ್ಕಬಳ್ಳಾಪುರದ ಹಲಸು ಹೈದರಾಬಾದ್‌ನಲ್ಲಿ ಭಾರೀ ಜನಪ್ರಿಯವಾಗಿದೆ. ಆ ಮೂಲಕ ಇಲ್ಲಿನ ರೈತರು ಉತ್ತಮ ಆದಾಯ ಗಳಿಸುತ್ತಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 14, 2025 | 11:53 AM

Share
ಚಿಕ್ಕಬಳ್ಳಾಪುರ, ಮೊದಲೇ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಇಲ್ಲಿಯ ರೈತರು ಹೂವು, ಹಣ್ಣು, ತರಕಾರಿ ಬೆಳೆಯುವುದನ್ನು ತಮ್ಮ ಜೀವಾಳವನ್ನಾಗಿ ಮಾಡಿಕೊಂಡಿದ್ದಾರೆ. ಇದೀಗ ಇಲ್ಲಿ ಬೆಳೆಯುವ ಹಲಸಿನ ಹಣ್ಣಿಗೆ ಭಾರಿ ಡಿಮ್ಯಾಂಡ್ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಇಲ್ಲಿಯ ಹಲಸು ನೆರೆ ರಾಜ್ಯ ಹೈದರಾಬಾದ್ ನಲ್ಲಿಯೂ ಹವಾ ಸೃಸ್ಟಿಸಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸನ್ನು ಖರೀದಿಸಿ ಹೈದರಾಬಾದ್​ನಲ್ಲಿ ಮಾರಾಟ ಮಾಡಲಾಗುತ್ತಿದೆ.

ಚಿಕ್ಕಬಳ್ಳಾಪುರ, ಮೊದಲೇ ಫಲಪುಷ್ಪ ಗಿರಿಧಾಮಗಳ ಜಿಲ್ಲೆ. ಇಲ್ಲಿಯ ರೈತರು ಹೂವು, ಹಣ್ಣು, ತರಕಾರಿ ಬೆಳೆಯುವುದನ್ನು ತಮ್ಮ ಜೀವಾಳವನ್ನಾಗಿ ಮಾಡಿಕೊಂಡಿದ್ದಾರೆ. ಇದೀಗ ಇಲ್ಲಿ ಬೆಳೆಯುವ ಹಲಸಿನ ಹಣ್ಣಿಗೆ ಭಾರಿ ಡಿಮ್ಯಾಂಡ್ ಬಂದಿದೆ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಇಲ್ಲಿಯ ಹಲಸು ನೆರೆ ರಾಜ್ಯ ಹೈದರಾಬಾದ್ ನಲ್ಲಿಯೂ ಹವಾ ಸೃಸ್ಟಿಸಿದೆ. ಪ್ರತಿದಿನ ಲೋಡ್ ಗಟ್ಟಲೆ ಹಲಸನ್ನು ಖರೀದಿಸಿ ಹೈದರಾಬಾದ್​ನಲ್ಲಿ ಮಾರಾಟ ಮಾಡಲಾಗುತ್ತಿದೆ.

1 / 6
ಬೆಂಗಳೂರು ಟು ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈ ಪಾಸ್ ಬಳಿ ಈಗ ಎಲ್ಲಿ ನೋಡಿದರಲ್ಲಿ ಹಲಸಿನ ಹಣ್ಣುಗಳ ಕಾರು ಬಾರು ಜೋರಾಗಿದೆ. ಸ್ಥಳಿಯ ರೈತರು ತಮ್ಮ ತಮ್ಮ ತೋಟ ಜಮೀನುಗಳಲ್ಲಿ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಮರದಲ್ಲಿರುವ ಹಲಸನ್ನು ಖರೀದಿಸಿ ದೊಡ್ಡ ದೊಡ್ಡ ವ್ಯಾಪಾರಿಗಳು, ಸ್ಥಳಿಯ ವ್ಯಾಪಾರಿಗಳು ರಸ್ತೆಯೂದ್ದಕ್ಕೂ ಮಾರಾಟ ಮಾಡುತ್ತಿದ್ದಾರೆ.

ಬೆಂಗಳೂರು ಟು ಹೈದರಾಬಾದ್​ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈ ಪಾಸ್ ಬಳಿ ಈಗ ಎಲ್ಲಿ ನೋಡಿದರಲ್ಲಿ ಹಲಸಿನ ಹಣ್ಣುಗಳ ಕಾರು ಬಾರು ಜೋರಾಗಿದೆ. ಸ್ಥಳಿಯ ರೈತರು ತಮ್ಮ ತಮ್ಮ ತೋಟ ಜಮೀನುಗಳಲ್ಲಿ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಮರದಲ್ಲಿರುವ ಹಲಸನ್ನು ಖರೀದಿಸಿ ದೊಡ್ಡ ದೊಡ್ಡ ವ್ಯಾಪಾರಿಗಳು, ಸ್ಥಳಿಯ ವ್ಯಾಪಾರಿಗಳು ರಸ್ತೆಯೂದ್ದಕ್ಕೂ ಮಾರಾಟ ಮಾಡುತ್ತಿದ್ದಾರೆ.

2 / 6
ಪ್ರತಿದಿನ ಲೋಡ್​ ಗಟ್ಟಲೆ ಹಲಸು ಮಾರಾಟ ಮಾಡಲಾಗುತ್ತಿದೆ. ಸ್ಥಳಿಯ ವಾಹನ ಸವಾರರು, ಇಶಾ ಫೌಂಡೇಶನ್​ಗೆ ಹೋಗಿ ಬರುವ ಪ್ರವಾಸಿಗರು ಸೇರಿದಂತೆ ಆಂದ್ರ, ತೆಲಂಗಾಣದ ಜನ ಮುಗಿಬಿದ್ದು ಹಲಸನ್ನು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಹಲಸಿಗೆ ಭಾರೀ ಡಿಮ್ಯಾಂಡ್ ಬಂದಿದೆ.

ಪ್ರತಿದಿನ ಲೋಡ್​ ಗಟ್ಟಲೆ ಹಲಸು ಮಾರಾಟ ಮಾಡಲಾಗುತ್ತಿದೆ. ಸ್ಥಳಿಯ ವಾಹನ ಸವಾರರು, ಇಶಾ ಫೌಂಡೇಶನ್​ಗೆ ಹೋಗಿ ಬರುವ ಪ್ರವಾಸಿಗರು ಸೇರಿದಂತೆ ಆಂದ್ರ, ತೆಲಂಗಾಣದ ಜನ ಮುಗಿಬಿದ್ದು ಹಲಸನ್ನು ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಹಲಸಿಗೆ ಭಾರೀ ಡಿಮ್ಯಾಂಡ್ ಬಂದಿದೆ.

3 / 6
ಇನ್ನೂ ಚಿಕ್ಕಬಳ್ಳಾಪುರದ ಬಳಿ ಬೆಳೆಯುವ ಹಲಸಿನ ತೊಳೆಯಲ್ಲಿ ನೀರಿನಾಂಶ ಹೆಚ್ಚಾಗಿದ್ದು, ಅದು ಜೇನಿನಂತ ಸವಿರುಚಿ ಕೊಡುತ್ತಿದೆ. ಕೆಂಪು, ಕಳದಿ ಮತ್ತು ಬಿಳಿ ಬಣ್ಣದ ತೊಳೆಗಳ ಹಣ್ಣುಗಳಿವೆ.

ಇನ್ನೂ ಚಿಕ್ಕಬಳ್ಳಾಪುರದ ಬಳಿ ಬೆಳೆಯುವ ಹಲಸಿನ ತೊಳೆಯಲ್ಲಿ ನೀರಿನಾಂಶ ಹೆಚ್ಚಾಗಿದ್ದು, ಅದು ಜೇನಿನಂತ ಸವಿರುಚಿ ಕೊಡುತ್ತಿದೆ. ಕೆಂಪು, ಕಳದಿ ಮತ್ತು ಬಿಳಿ ಬಣ್ಣದ ತೊಳೆಗಳ ಹಣ್ಣುಗಳಿವೆ.

4 / 6
ಹೈದರಾಬಾದ್​​ನಲ್ಲಿ ಚಿಕ್ಕಬಳ್ಳಾಪುರದ ಹಲಸಿಗೆ ಡಿಮ್ಯಾಂಡ್ ಇದೆ. ಹಾಗಾಗಿ ಪ್ರತಿದಿನ ಲಾರಿಗಳಲ್ಲಿ ಲೋಡ್ ಗಟ್ಟಲೆ ಹಲಸನ್ನು ರವಾನೆ ಮಾಡಲಾಗುತ್ತಿದೆ. ಆ ಮೂಲಕ ರೈತರು ಮತ್ತು ಸ್ಥಳಿಯ ವ್ಯಾಪಾರಿಗಳಿಗೆ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

ಹೈದರಾಬಾದ್​​ನಲ್ಲಿ ಚಿಕ್ಕಬಳ್ಳಾಪುರದ ಹಲಸಿಗೆ ಡಿಮ್ಯಾಂಡ್ ಇದೆ. ಹಾಗಾಗಿ ಪ್ರತಿದಿನ ಲಾರಿಗಳಲ್ಲಿ ಲೋಡ್ ಗಟ್ಟಲೆ ಹಲಸನ್ನು ರವಾನೆ ಮಾಡಲಾಗುತ್ತಿದೆ. ಆ ಮೂಲಕ ರೈತರು ಮತ್ತು ಸ್ಥಳಿಯ ವ್ಯಾಪಾರಿಗಳಿಗೆ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

5 / 6
ರೈತರು ತಮ್ಮ ತೋಟ, ಜಮೀನುಗಳ ಬದುಗಳಲ್ಲಿ ಬೆಳೆಸಿದ ಹಲಸಿಗೆ ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ರೈತರಿಗೆ ಆದಾಯದ ಮೂಲವಾಗಿದೆ.

ರೈತರು ತಮ್ಮ ತೋಟ, ಜಮೀನುಗಳ ಬದುಗಳಲ್ಲಿ ಬೆಳೆಸಿದ ಹಲಸಿಗೆ ಈಗ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದ್ದು, ರೈತರಿಗೆ ಆದಾಯದ ಮೂಲವಾಗಿದೆ.

6 / 6

Published On - 10:38 am, Sat, 14 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ