ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರಗಳು: ಟ್ರಾಫಿಕ್‌ ಜಾಮ್

Edited By:

Updated on: Sep 30, 2023 | 7:53 PM

Chikkamagaluru News: ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

1 / 5
ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ 
ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ 
ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿನಾಡಿನ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆ ಮಳೆಯಿಂದಾಗಿ ಮರಗಳು ಉರುಳಿ ಬಿದ್ದಿವೆ.

2 / 5

ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ.

3 / 5

ನಿನ್ನೆಯಿಂದ ಮಳೆ ಸುರಿಯುತ್ತಿದ್ದು, ಪರಿಣಾಮ ಅಪಾಯಗಳು ಸಂಭವಿಸಬಹುದು ಎಂದು ಜನರಲ್ಲಿ ಆತಂಕ ಶುರುವಾಗಿದೆ.

4 / 5

3 ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

5 / 5

ಚಾರ್ಮಾಡಿ ಘಾಟಿಯಲ್ಲಿ ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳಿಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿ, ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಪಟ್ಟಿದ್ದಾರೆ.

Published On - 7:52 pm, Sat, 30 September 23

Loading...
Unable to load recommendations.
Follow Us