AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಚಿರು ಅಗಲಿ ಎರಡು ವರ್ಷ; ಭಾವನಾತ್ಮಕ ಪೋಸ್ಟ್ ಮೂಲಕ ಪತಿಯನ್ನು ಸ್ಮರಿಸಿದ ಮೇಘನಾ​

Meghana Raj Chiranjeevi Sarja Photos: ಚಿರಂಜೀವಿ ಸರ್ಜಾ ನಿಧನರಾಗಿ ಎರಡು ವರ್ಷ ಸಂದಿದೆ. ಪತ್ನಿ ಮೇಘನಾ ರಾಜ್​, ಸಹೋದರ ಧ್ರುವ ಸರ್ಜಾ ಸೇರಿದಂತೆ ಬಂಧುವರ್ಗ, ಅಭಿಮಾನಿಗಳು ನಟನನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಎಲ್ಲರ ನೆಚ್ಚಿನ ತಾರಾ ಜೋಡಿಯಾಗಿದ್ದ ಚಿರು- ಮೇಘನಾರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:Jun 07, 2022 | 12:22 PM

Share
ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಎರಡು ವರ್ಷ ಸಂದಿದೆ. ಇಂದು (ಜೂ.7) ಕುಟುಂಬಸ್ಥರು ಎರಡನೇ ವರ್ಷದ ಪುಣ್ಯತಿಥಿಯನ್ನು ಮಾಡಲಿದ್ದಾರೆ. ನೆಲಗುಳಿಯ ಚಿರು ಸಮಾಧಿಗೆ ತೆರಳಿ ಸರ್ಜಾ ಕುಟುಂಬ ಪೂಜೆ ಸಲ್ಲಿಸಲಿದೆ. ಧ್ರುವ ಸರ್ಜಾ ಈ ವಿಶೇಷ ಫೋಟೋದ ಮೂಲಕ ಸಹೋದರನಿಗೆ ನಮನ ಸಲ್ಲಿಸಿದ್ದಾರೆ. (ಕೃಪೆ: ಧೃವ ಸರ್ಜಾ/ ಟ್ವಿಟರ್)

ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅಗಲಿ ಎರಡು ವರ್ಷ ಸಂದಿದೆ. ಇಂದು (ಜೂ.7) ಕುಟುಂಬಸ್ಥರು ಎರಡನೇ ವರ್ಷದ ಪುಣ್ಯತಿಥಿಯನ್ನು ಮಾಡಲಿದ್ದಾರೆ. ನೆಲಗುಳಿಯ ಚಿರು ಸಮಾಧಿಗೆ ತೆರಳಿ ಸರ್ಜಾ ಕುಟುಂಬ ಪೂಜೆ ಸಲ್ಲಿಸಲಿದೆ. ಧ್ರುವ ಸರ್ಜಾ ಈ ವಿಶೇಷ ಫೋಟೋದ ಮೂಲಕ ಸಹೋದರನಿಗೆ ನಮನ ಸಲ್ಲಿಸಿದ್ದಾರೆ. (ಕೃಪೆ: ಧೃವ ಸರ್ಜಾ/ ಟ್ವಿಟರ್)

1 / 7
ಮೇಘನಾ ರಾಜ್ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡು ಚಿರುವನ್ನು ಸ್ಮರಿಸಿದ್ದಾರೆ. ‘ನೀವು ಮತ್ತು ನಾನು.. ನಿಮ್ಮಂಥವರು ಯಾರೂ ಇರಲಿಲ್ಲ. ನಿಮ್ಮಂತೆ ಯಾರೂ ಇಲ್ಲ. ನೀವೊಬ್ಬರೇ.. ಒಬ್ಬರು ಮಾತ್ರ.. ಲವ್​ ಯೂ’ ಎಂದು ಮೇಘನಾ ಬರೆದುಕೊಂಡಿದ್ದಾರೆ. (ಚಿತ್ರ ಕೃಪೆ: ಮೇಘನಾ ರಾಜ್)

ಮೇಘನಾ ರಾಜ್ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡು ಚಿರುವನ್ನು ಸ್ಮರಿಸಿದ್ದಾರೆ. ‘ನೀವು ಮತ್ತು ನಾನು.. ನಿಮ್ಮಂಥವರು ಯಾರೂ ಇರಲಿಲ್ಲ. ನಿಮ್ಮಂತೆ ಯಾರೂ ಇಲ್ಲ. ನೀವೊಬ್ಬರೇ.. ಒಬ್ಬರು ಮಾತ್ರ.. ಲವ್​ ಯೂ’ ಎಂದು ಮೇಘನಾ ಬರೆದುಕೊಂಡಿದ್ದಾರೆ. (ಚಿತ್ರ ಕೃಪೆ: ಮೇಘನಾ ರಾಜ್)

2 / 7
ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಎಲ್ಲರ ಅಚ್ಚುಮೆಚ್ಚಿನ ತಾರಾ ಜೋಡಿಯಾಗಿದ್ದವರು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ ನಂತರ ಈ ಜೋಡಿ 2018ರ ಮೇ 2ರಂದು ವಿವಾಹವಾಗಿದ್ದರು.

ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಎಲ್ಲರ ಅಚ್ಚುಮೆಚ್ಚಿನ ತಾರಾ ಜೋಡಿಯಾಗಿದ್ದವರು. ಹಲವು ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ ನಂತರ ಈ ಜೋಡಿ 2018ರ ಮೇ 2ರಂದು ವಿವಾಹವಾಗಿದ್ದರು.

3 / 7
ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾಗುವಾಗ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು. 2022ರ ಅಕ್ಟೋಬರ್​ 22ರಂದು ರಾಯನ್​ಗೆ ನಟಿ ಜನ್ಮನೀಡಿದರು.

ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾಗುವಾಗ ಈ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು. 2022ರ ಅಕ್ಟೋಬರ್​ 22ರಂದು ರಾಯನ್​ಗೆ ನಟಿ ಜನ್ಮನೀಡಿದರು.

4 / 7
ನಂತರದಲ್ಲಿ ಮೇಘನಾ ರಾಜ್​ ಪುತ್ರನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.

ನಂತರದಲ್ಲಿ ಮೇಘನಾ ರಾಜ್​ ಪುತ್ರನ ಆರೈಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.

5 / 7
ಇದೀಗ ರಾಯನ್​ ತನ್ನ ಆಟದಿಂದ ಎಲ್ಲರ ಮನಗೆಲ್ಲುತ್ತಿದ್ದಾನೆ. ಮೇಘನಾ ರಾಜ್​ ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ತೆರೆ ಕಂಡು ಮೆಚ್ಚುಗೆ ಗಳಿಸಿತ್ತು.

ಇದೀಗ ರಾಯನ್​ ತನ್ನ ಆಟದಿಂದ ಎಲ್ಲರ ಮನಗೆಲ್ಲುತ್ತಿದ್ದಾನೆ. ಮೇಘನಾ ರಾಜ್​ ಮತ್ತೆ ಚಿತ್ರರಂಗಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ತೆರೆ ಕಂಡು ಮೆಚ್ಚುಗೆ ಗಳಿಸಿತ್ತು.

6 / 7
ಮತ್ತೂ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಮೇಘನಾ ಅವುಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಚಿರಂಜೀವಿ ಸರ್ಜಾ ನಟಿಸಿರುವ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಚಿರುವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

ಮತ್ತೂ ಕೆಲವು ಚಿತ್ರಗಳನ್ನು ಒಪ್ಪಿಕೊಂಡಿರುವ ಮೇಘನಾ ಅವುಗಳಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಚಿರಂಜೀವಿ ಸರ್ಜಾ ನಟಿಸಿರುವ ಕೊನೆಯ ಚಿತ್ರ ‘ರಾಜಮಾರ್ತಾಂಡ’ ಶೀಘ್ರದಲ್ಲೇ ರಿಲೀಸ್ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಚಿರುವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

7 / 7

Published On - 12:12 pm, Tue, 7 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ