AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ತುಳುಕುತ್ತಿರುವ ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು, ಫೋಟೋಸ್​ ನೋಡಿ

ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು ಈ ವರ್ಷದ ಅಪಾರ ಮಳೆಯಿಂದ ತುಂಬಿ ತುಳುಕುತ್ತಿವೆ. ಕೋಟೆನಾಡಿನ ಈ ಪ್ರಮುಖ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಒತ್ತು ನೀಡಬೇಕೆಂಬುದು ಜನರು ಆಗ್ರಹಿಸಿದ್ದಾರೆ.

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Nov 11, 2024 | 10:56 AM

Share
ಕೋಟೆನಾಡು ಚಿತ್ರದುರ್ಗ ಪರಾಕ್ರಮದ ಸಂಕೇತವಾಗಿದೆ. ವೀರ ಮದಕರಿ ನಾಯಕ ಪರಾಕ್ರಮಗೈದ ಮತ್ತು ಒನಕೆ ಓಬವ್ವ ದರ್ಗೆಯ ಅವತಾರ ತಾಳಿದ ಪುಣ್ಯಭೂಮಿ. ಈ ನೆಲದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಿತ ಅನೇಕ ಐತಿಹಾಸಿಕ ಸ್ಮಾರಕ, ಜಲಮೂಲಗಳಿವೆ. ಮಳೆ ಇಲ್ಲದೆ ಜಲಮೂಲಗಳು ಬರಿದಾಗಿದ್ದವು.

ಕೋಟೆನಾಡು ಚಿತ್ರದುರ್ಗ ಪರಾಕ್ರಮದ ಸಂಕೇತವಾಗಿದೆ. ವೀರ ಮದಕರಿ ನಾಯಕ ಪರಾಕ್ರಮಗೈದ ಮತ್ತು ಒನಕೆ ಓಬವ್ವ ದರ್ಗೆಯ ಅವತಾರ ತಾಳಿದ ಪುಣ್ಯಭೂಮಿ. ಈ ನೆಲದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಿತ ಅನೇಕ ಐತಿಹಾಸಿಕ ಸ್ಮಾರಕ, ಜಲಮೂಲಗಳಿವೆ. ಮಳೆ ಇಲ್ಲದೆ ಜಲಮೂಲಗಳು ಬರಿದಾಗಿದ್ದವು.

1 / 6
ಈ ವರ್ಷದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಐತಿಹಾಸಿಕ ಹೊಂಡ, ಪುಷ್ಕರಣಿಗಳು ತುಂಬಿ ತುಳುಕುತ್ತಿವೆ. ಇದರಿಂದ, ಚಿತ್ರದುರ್ಗದ ಜನರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆಗ್ರಹಿಸುತ್ತಿದ್ದಾರೆ.

ಈ ವರ್ಷದ ನಿರೀಕ್ಷೆಗೂ ಮೀರಿ ಮಳೆಯಾಗಿದ್ದರಿಂದ ಐತಿಹಾಸಿಕ ಹೊಂಡ, ಪುಷ್ಕರಣಿಗಳು ತುಂಬಿ ತುಳುಕುತ್ತಿವೆ. ಇದರಿಂದ, ಚಿತ್ರದುರ್ಗದ ಜನರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಆಗ್ರಹಿಸುತ್ತಿದ್ದಾರೆ.

2 / 6
ಕೋಟೆನಾಡು ಚಿತ್ರದುರ್ಗದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಾಣವಾದ ಹತ್ತಾರು ಜಲಮೂಲಗಳಿವೆ. ಕೋಟೆ ಬಳಿಯ ಸಿಹಿನೀರು ಹೊಂಡ, ಕೆಂಚಪ್ಪಮಲ್ಲಪ್ಪ ಬಾವಿ, ಸಂತೆ ಹೊಂಡ, ಚಿನ್ನಕ್ಕಿ ಹೊಂಡ, ಕೆಳಗೋಟೆಯಲ್ಲಿನ ಚನ್ನಕೇಶವ ದೇಗುಲ ಬಳಿಯ ಹೊಂಡ, ಗಣಪತಿ ದೇಗುಲ‌ ಬಳಿಯ ಬಾವಿ ಸೇರಿ ಅನೇಕ ಜಲಮೂಲಗಳು ಈ ಸಲದ ಮಳೆಗೆ ತುಂಬು ತುಳುಕುತ್ತಿವೆ.

ಕೋಟೆನಾಡು ಚಿತ್ರದುರ್ಗದಲ್ಲಿ ಪಾಳೇಗಾರರ ಕಾಲದಲ್ಲಿ ನಿರ್ಮಾಣವಾದ ಹತ್ತಾರು ಜಲಮೂಲಗಳಿವೆ. ಕೋಟೆ ಬಳಿಯ ಸಿಹಿನೀರು ಹೊಂಡ, ಕೆಂಚಪ್ಪಮಲ್ಲಪ್ಪ ಬಾವಿ, ಸಂತೆ ಹೊಂಡ, ಚಿನ್ನಕ್ಕಿ ಹೊಂಡ, ಕೆಳಗೋಟೆಯಲ್ಲಿನ ಚನ್ನಕೇಶವ ದೇಗುಲ ಬಳಿಯ ಹೊಂಡ, ಗಣಪತಿ ದೇಗುಲ‌ ಬಳಿಯ ಬಾವಿ ಸೇರಿ ಅನೇಕ ಜಲಮೂಲಗಳು ಈ ಸಲದ ಮಳೆಗೆ ತುಂಬು ತುಳುಕುತ್ತಿವೆ.

3 / 6
ಸುಮಾರು ವರ್ಷಗಳಿಂದ ಬರಗಲಾದ ಪರಿಣಾಮ ಹೊಂಡ, ಪುಷ್ಕರಣಿ, ಬಾವಿಗಳು ಬರಿದಾಗಿದ್ದವು. ಆದರೆ, ಈವರ್ಷ ಭರ್ತಿ ಮಳೆ ಸುರಿದಿದ್ದು ಗತವೈಭವ ಮರುಸೃಷ್ಠಿ ಆದಂತಾಗಿದೆ. ಕೋಟೆನಾಡಿನ ಇತಿಹಾಸ ಪ್ರಸಿದ್ಧ ಜಲಮೂಲಗಳಿಗೆ ಕೋಟೆಯಷ್ಟೇ ಇತಿಹಾಸವಿದೆ. ಹೀಗಾಗಿ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರು ಆಗ್ರಹಿಸಿದ್ದಾರೆ.

ಸುಮಾರು ವರ್ಷಗಳಿಂದ ಬರಗಲಾದ ಪರಿಣಾಮ ಹೊಂಡ, ಪುಷ್ಕರಣಿ, ಬಾವಿಗಳು ಬರಿದಾಗಿದ್ದವು. ಆದರೆ, ಈವರ್ಷ ಭರ್ತಿ ಮಳೆ ಸುರಿದಿದ್ದು ಗತವೈಭವ ಮರುಸೃಷ್ಠಿ ಆದಂತಾಗಿದೆ. ಕೋಟೆನಾಡಿನ ಇತಿಹಾಸ ಪ್ರಸಿದ್ಧ ಜಲಮೂಲಗಳಿಗೆ ಕೋಟೆಯಷ್ಟೇ ಇತಿಹಾಸವಿದೆ. ಹೀಗಾಗಿ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂಬುದು ಸ್ಥಳೀಯರು ಆಗ್ರಹಿಸಿದ್ದಾರೆ.

4 / 6
ಇಡೀ ನಗರದ ಜನರ ನೀರಿನ ದಾಹ ತೀರಿಸುತ್ತಿದ್ದ ಜಲಮೂಲಗಳ ಸಂರಕ್ಷಣೆ ಸರ್ಕಾರದ ಹೊಣೆಯಾಗಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಲಪಾತ್ರೆಗಳು ತುಂಬಿ ತುಳುಕುತ್ತಿದ್ದು ನಗರದ ಅಂದ ಹೆಚ್ಚಿಸಿವೆ.

ಇಡೀ ನಗರದ ಜನರ ನೀರಿನ ದಾಹ ತೀರಿಸುತ್ತಿದ್ದ ಜಲಮೂಲಗಳ ಸಂರಕ್ಷಣೆ ಸರ್ಕಾರದ ಹೊಣೆಯಾಗಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಲಪಾತ್ರೆಗಳು ತುಂಬಿ ತುಳುಕುತ್ತಿದ್ದು ನಗರದ ಅಂದ ಹೆಚ್ಚಿಸಿವೆ.

5 / 6
ನಗರದಲ್ಲಿ ತಣ್ಣನೆಯ ವಾತಾವರಣ ಸೃಷ್ಠಿಸಿವೆ. ಹೀಗಾಗಿ, ಸರ್ಕಾರ, ಜಿಲ್ಲಾಡಳಿತ ಮತ್ತು ನಗರಸಭೆ ಈ ಬಗ್ಗೆ ಗಮನಹರಿಸಿ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ನಗರದಲ್ಲಿ ತಣ್ಣನೆಯ ವಾತಾವರಣ ಸೃಷ್ಠಿಸಿವೆ. ಹೀಗಾಗಿ, ಸರ್ಕಾರ, ಜಿಲ್ಲಾಡಳಿತ ಮತ್ತು ನಗರಸಭೆ ಈ ಬಗ್ಗೆ ಗಮನಹರಿಸಿ ಜಲಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಯೋಜನೆ ರೂಪಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

6 / 6
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?