AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿಯಿಂದ ಹಿಡಿದು ಹೃದಯದವರೆಗೆ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗೆ ಇದರಲ್ಲಿದೆ ಪರಿಹಾರ

ದಾಲ್ಚಿನ್ನಿ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಇದನ್ನು ಹೆಚ್ಚಾಗಿ ಭಕ್ಷ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಇದು ಆಹಾರಕ್ಕೆ ತನ್ನದೇ ಆದಂತಹ ವಿಶೇಷ ರುಚಿಯನ್ನು ನೀಡುತ್ತದೆ. ನಾಲಿಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಇವು ನಮ್ಮ ದೇಹಕ್ಕೂ ತುಂಬಾ ಒಳ್ಳೆಯದು. ಬಾಯಿಯಿಂದ ಹಿಡಿದು ಹೃದಯದ ಆರೋಗ್ಯದ ವರೆಗೆ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 23, 2025 | 11:39 AM

ಮಸಾಲೆ ಪದಾರ್ಥಗಳಲ್ಲಿ ಆರೋಗ್ಯ ಪ್ರಯೋಜನಗಳು ಹೇರಳವಾಗಿರುತ್ತದೆ. ಹಾಗಾಗಿ ಎಲ್ಲಾ ರೀತಿಯ ಮಸಾಲೆಗಳನ್ನು ನಾವು ವಿವಿಧ ಬಗೆಯ ಭಕ್ಷ್ಯಗಳಲ್ಲಿ ಬಳಕೆ ಮಾಡುತ್ತೇವೆ. ಅದರಲ್ಲಿಯೂ ದಾಲ್ಚಿನ್ನಿಯನ್ನು ಯಥೇಚ್ಛವಾಗಿ ಆಹಾರಗಳಲ್ಲಿ ಬಳಸಲಾಗುತ್ತದೆ. ಏಕೆಂದರೆ ಇದರಲ್ಲಿರುವ ವಿಶೇಷ ಗುಣಗಳು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.  ಬಾಯಿಯಿಂದ ಹಿಡಿದು ಹೃದಯದ ಆರೋಗ್ಯದ ವರೆಗೆ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹಾಗಾದರೆ ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಇದನ್ನು ಬಳಕೆ ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ.

ಮಸಾಲೆ ಪದಾರ್ಥಗಳಲ್ಲಿ ಆರೋಗ್ಯ ಪ್ರಯೋಜನಗಳು ಹೇರಳವಾಗಿರುತ್ತದೆ. ಹಾಗಾಗಿ ಎಲ್ಲಾ ರೀತಿಯ ಮಸಾಲೆಗಳನ್ನು ನಾವು ವಿವಿಧ ಬಗೆಯ ಭಕ್ಷ್ಯಗಳಲ್ಲಿ ಬಳಕೆ ಮಾಡುತ್ತೇವೆ. ಅದರಲ್ಲಿಯೂ ದಾಲ್ಚಿನ್ನಿಯನ್ನು ಯಥೇಚ್ಛವಾಗಿ ಆಹಾರಗಳಲ್ಲಿ ಬಳಸಲಾಗುತ್ತದೆ. ಏಕೆಂದರೆ ಇದರಲ್ಲಿರುವ ವಿಶೇಷ ಗುಣಗಳು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಬಾಯಿಯಿಂದ ಹಿಡಿದು ಹೃದಯದ ಆರೋಗ್ಯದ ವರೆಗೆ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹಾಗಾದರೆ ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಇದನ್ನು ಬಳಕೆ ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ.

1 / 5
ದಾಲ್ಚಿನ್ನಿ ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಇರಲೇಬೇಕು. ಇದು ಆಹಾರಕ್ಕೆ ವಿಶೇಷ ರುಚಿಯನ್ನು ನೀಡುತ್ತದೆ. ಅದಲ್ಲದೆ ದಾಲ್ಚಿನ್ನಿ ದೇಹಕ್ಕೆ ತುಂಬಾ ಒಳ್ಳೆಯದು. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವುದರಿಂದ ಉರಿಯೂತದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ,  ಜೀವಕೋಶಗಳನ್ನು ಆರೋಗ್ಯಕರವಾಗಿರಿಸುತ್ತವೆ. ಜೊತೆಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ದಾಲ್ಚಿನ್ನಿ ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಇರಲೇಬೇಕು. ಇದು ಆಹಾರಕ್ಕೆ ವಿಶೇಷ ರುಚಿಯನ್ನು ನೀಡುತ್ತದೆ. ಅದಲ್ಲದೆ ದಾಲ್ಚಿನ್ನಿ ದೇಹಕ್ಕೆ ತುಂಬಾ ಒಳ್ಳೆಯದು. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವುದರಿಂದ ಉರಿಯೂತದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ, ಜೀವಕೋಶಗಳನ್ನು ಆರೋಗ್ಯಕರವಾಗಿರಿಸುತ್ತವೆ. ಜೊತೆಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

2 / 5
ದಾಲ್ಚಿನ್ನಿ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ನಾನಾ ರೀತಿಯ ಸೋಂಕುಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಅದಲ್ಲದೆ ಈ ಮಸಾಲೆ ಆಂಟಿ -ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ಸೊಳ್ಳೆಗಳಿಂದ ಬರುವ ಕಾಯಿಲೆಗಳನ್ನು ಮತ್ತು ವೈರಲ್ ಜ್ವರಗಳಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ.

ದಾಲ್ಚಿನ್ನಿ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ನಾನಾ ರೀತಿಯ ಸೋಂಕುಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಅದಲ್ಲದೆ ಈ ಮಸಾಲೆ ಆಂಟಿ -ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ಸೊಳ್ಳೆಗಳಿಂದ ಬರುವ ಕಾಯಿಲೆಗಳನ್ನು ಮತ್ತು ವೈರಲ್ ಜ್ವರಗಳಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ.

3 / 5
ದಾಲ್ಚಿನ್ನಿ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಟ್ರೈಗ್ಲಿಸರೈಡ್ಗಳನ್ನು ಕಡಿಮೆ ಮಾಡುತ್ತದೆ. ಅದಲ್ಲದೆ ಈ ಮಸಾಲೆಯಲ್ಲಿರುವ ಪ್ರಿಬಯಾಟಿಕ್ ಗುಣಗಳು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಜೊತೆಗೆ ದಾಲ್ಚಿನ್ನಿ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ದಾಲ್ಚಿನ್ನಿ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಟ್ರೈಗ್ಲಿಸರೈಡ್ಗಳನ್ನು ಕಡಿಮೆ ಮಾಡುತ್ತದೆ. ಅದಲ್ಲದೆ ಈ ಮಸಾಲೆಯಲ್ಲಿರುವ ಪ್ರಿಬಯಾಟಿಕ್ ಗುಣಗಳು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಜೊತೆಗೆ ದಾಲ್ಚಿನ್ನಿ ಸೇವನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

4 / 5
ದಾಲ್ಚಿನ್ನಿಯನ್ನು ನಿಯಮಿತವಾಗಿ ಬಳಕೆ ಮಾಡುವುದರಿಂದ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಅದಲ್ಲದೆ  ಈ ಮಸಾಲೆ ಹಲ್ಲು ನೋವನ್ನು ಕಡಿಮೆ ಮಾಡುವುದರ ಜೊತೆಗೆ ಬಾಯಿಯ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಬಾಯಿಯಿಂದ ಬರುವ ದುರ್ವಾಸನೆಯಿಂದ ಮುಕ್ತಿ ನೀಡುತ್ತದೆ. ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಯನ್ನು ಕೂಡ ಕಡಿಮೆ ಮಾಡುತ್ತದೆ.

ದಾಲ್ಚಿನ್ನಿಯನ್ನು ನಿಯಮಿತವಾಗಿ ಬಳಕೆ ಮಾಡುವುದರಿಂದ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಅದಲ್ಲದೆ ಈ ಮಸಾಲೆ ಹಲ್ಲು ನೋವನ್ನು ಕಡಿಮೆ ಮಾಡುವುದರ ಜೊತೆಗೆ ಬಾಯಿಯ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಬಾಯಿಯಿಂದ ಬರುವ ದುರ್ವಾಸನೆಯಿಂದ ಮುಕ್ತಿ ನೀಡುತ್ತದೆ. ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಯನ್ನು ಕೂಡ ಕಡಿಮೆ ಮಾಡುತ್ತದೆ.

5 / 5
Follow us
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್