ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹಾರ ಬದಲಾಯಿಸಿಕೊಂಡ ಸಿಎಂ ಬೊಮ್ಮಾಯಿ ದಂಪತಿ, ಫೋಟೋಗಳಿವೆ

Edited By: ಆಯೇಷಾ ಬಾನು

Updated on: Jul 20, 2022 | 3:21 PM

ನಾಡ ದೇವತೆ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆದಿದ್ದಾರೆ. ಹಾಗೂ ತಾಯಿ ಚಾಮುಂಡೇಶ್ವರಿಯ ಕೃಪೆ ಹಾಗೂ ಆಶೀರ್ವಾದ ಸದಾ ನಾಡಿನ ಸಮಸ್ತ ಜನರ ಮೇಲೆ ಇರಲಿ ಹಾಗೂ ನಾಡಿಗೆ ಸುಖ ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

1 / 4
ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ದಂಪತಿ ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ದಂಪತಿ ಅಲ್ಲಿಂದ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

2 / 4

ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಪತ್ನಿ ಚೆನ್ನಮ್ಮ ಕೂಡ ಜೊತೆಗಿದ್ದರು. ಹಾಗೂ ಎಸ್ಟಿ ಸೋಮಶೇಖರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

3 / 4

ಸಿಎಂ ಬಸವರಾಜ ಬೊಮ್ಮಾಯಿ ಚಾಮುಂಡೇಶ್ವರಿ ಪಾದಕ್ಕೆ ನಮಿಸಿ ರಾಜ್ಯದ ಸಮೃದ್ಧಿ, ಒಲಿತಿಗಾಗಿ ಪ್ರಾರ್ಥಿಸಿದರು.

4 / 4

ಮೈಸೂರಿನ ನಾಡ ದೇವತೆ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಿಎಂ ಬೊಮ್ಮಾಯಿ ದಂಪತಿ ಹಾರ ಬದಲಾಯಿಸಿಕೊಂಡರು.

Loading...
Unable to load recommendations.
Follow Us