KCC: ‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ

Updated on: Feb 24, 2023 | 7:40 PM

Kannada Chalanachitra Cup | Basavaraj Bommai: ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭದ ಫೋಟೋಗಳು ಇಲ್ಲಿವೆ..

1 / 5
‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

2 / 5
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

3 / 5
ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

4 / 5
ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

5 / 5
ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

Published On - 7:40 pm, Fri, 24 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us