ಶಿವರಾಜ್​ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಜಕೀಯ ಹಾಗೂ ಸಿನಿಮಾ ಗಣ್ಯರು

Updated on: Jan 27, 2025 | 2:15 PM

ಕನ್ನಡದ ನಟ ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ಈಗ ಗುಣಮುಖರಾಗಿ ಅವರು ಅಮೆರಿಕದಿಂದ ಆಗಮಿಸಿದ್ದಾರೆ. ಅವರನ್ನು ಭೇಟಿ ಮಾಡಲು ಗಣ್ಯಾತಿ ಗಣ್ಯರು ಆಗಮಿಸುತ್ತಿದ್ದಾರೆ. ಅವರ ಚೇತರಿಕೆ ಕಂಡಿದ್ದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಸಂದರ್ಭದ ಫೋಟೋ ಇಲ್ಲಿದೆ.

1 / 5
ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

2 / 5
ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಚಿತ್ರರಂಗಕ್ಕೆ ಮರಳುವಂತೆ ಕೋರಿದರು.

ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಚಿತ್ರರಂಗಕ್ಕೆ ಮರಳುವಂತೆ ಕೋರಿದರು.

3 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

4 / 5
ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

5 / 5
ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

Published On - 1:06 pm, Mon, 27 January 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us